ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ವಿಧಾನಸೌಧದಲ್ಲಿಂದು ಮಹತ್ವದ ಸಚಿವ ಸಂಪುಟ ‌ಸಭೆ

ಮಧ್ಯಾಹ್ನ 3ಗಂಟೆಗೆ ನಡೆಯಲಿರುವ ಮಹತ್ವದ ಸಭೆಯಲ್ಲಿ ಪ್ರಮುಖ ವಿಷಯಗಳ ಬಗ್ಗೆ ನಿರ್ಣಯ ಸಾಧ್ಯತೆ.  

Written by - Yashaswini V | Last Updated : Mar 23, 2018, 12:22 PM IST
ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ವಿಧಾನಸೌಧದಲ್ಲಿಂದು ಮಹತ್ವದ ಸಚಿವ ಸಂಪುಟ ‌ಸಭೆ title=

ಬೆಂಗಳೂರು: ಲಿಂಗಾಯತ ವೀರಶೈವಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಲಿಂಗಾಯತ ವೀರಶೈವಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ವಿಚಾರ ಪ್ರಮುಖ ಚರ್ಚೆಯ ವಿಷಯವಾಗಿದ್ದು, ಈ ಸಂಬಂಧ ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಕೋರಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸಿ ಪ್ರಸ್ತಾವನೆ ಕಳುಹಿಸಿಕೊಡಲು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

ಶಿಫಾರಸ್ಸಿನ ಪ್ರಸ್ತಾವನೆಗೆ ಬೇರೆ ಅಂಶಗಳನ್ನು ಸೇರಿಸಿಕೊಳ್ಳುವ ಕುರಿತು ಕೂಡ ಸಮಾಲೋಚನೆ ನಡೆಯಲಿದ್ದು, ಲಿಂಗಾಯತ ಧರ್ಮಕ್ಕೆ ಮಾನ್ಯತೆ ಕುರಿತು ಕಾನೂನು ಇಲಾಖೆಯ ಅಭಿಪ್ರಾಯ ಪಡೆದಿರುವ ಸರ್ಕಾರ ಅದರ ಬಗ್ಗೆಯೂ ಚರ್ಚೆ ನಡೆಸಲಿದೆ. ಚರ್ಚೆಯ ನಂತರ ಸರ್ಕಾರ ನಾಳೆ ಶಿಫಾರಸ್ಸಿನ ಪ್ರಸ್ತಾವನೆಯನ್ನು, ಕೇಂದ್ರಕ್ಕೆ ಕಳುಹಿಸಿಕೊಡುವ ಸಾಧ್ಯತೆ ಇದೆ. 

Trending News