MBBS ವ್ಯಾಸಂಗ ಮಾಡುವ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಹೆಚ್ಚಳ : ಜಮೀರ್ ಅಹಮದ್

ಪ್ರಸ್ತುತ ಕೆಎಂಡಿಸಿ ವತಿಯಿಂದ ಸರ್ಕಾರಿ ಕೋಟಾ ದಡಿ ಸೀಟು ಪಡೆಯುವ ಮೆರಿಟ್ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಬೇಡಿಕೆ ಮೇರೆಗೆ ಅದನ್ನು  ಐದು ಲಕ್ಷ ರೂ. ಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

Written by - Krishna N K | Last Updated : Aug 22, 2023, 05:19 PM IST
  • ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಹೆಚ್ಚಳ.
  • ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌.
MBBS ವ್ಯಾಸಂಗ ಮಾಡುವ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಹೆಚ್ಚಳ : ಜಮೀರ್ ಅಹಮದ್ title=

ಬೆಂಗಳೂರು : ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಐದು ಲಕ್ಷ ರೂ.ಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಅವರು, ಪ್ರಸ್ತುತ ಕೆಎಂಡಿಸಿ ವತಿಯಿಂದ ಸರ್ಕಾರಿ ಕೋಟಾ ದಡಿ ಸೀಟು ಪಡೆಯುವ ಮೆರಿಟ್ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಬೇಡಿಕೆ ಮೇರೆಗೆ ಅದನ್ನು  ಐದು ಲಕ್ಷ ರೂ. ಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ನಾಗಮೋಹನ್ ದಾಸ್ ಕಮೀಟಿಯಿಂದ ಟೂಲ್ ಕಿಟ್ ಹಗರಣದ ನಿಸ್ಪಕ್ಷ ತನಿಖೆ ಅಸಾಧ್ಯ

ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶ ದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷ ಗಳಿಂದ ನ್ಯಾಷನಲ್ ಮೈನಾರಿಟಿ ಡೆವಲಪ್ಮೆಂಟ್ ಬೋರ್ಡ್ ನ ಯೋಜನೆಗಳು ರಾಜ್ಯಕ್ಕೆ ಪಡೆಯುತ್ತಿರಲಿಲ್ಲ. ಇತ್ತೀಚಿಗೆ ಸಭೆ ನಡೆಸಿ ನಿರ್ದೇಶನ ನೀಡಿ ಪತ್ರ ವ್ಯವಹಾರ ನಡೆಸಿದ ನಂತರ ವಾರ್ಷಿಕ 50 ಕೋಟಿ ರೂ. ಅನುದಾನ ರಾಜ್ಯಕ್ಕೆ ಈ ವರ್ಷ ದೊರೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಟ್ಟ ವಿಚಾರ, ಡಿಕೆಶಿ ಉತ್ತರ ಕೊಡಲಿ

ನಿಗಮದ ವತಿಯಿಂದ ಇಂದು ಎಂಟು ಯೋಜನೆಗೆ ಚಾಲನೆ ನೀಡಿದ್ದು ಆ ಪೈಕಿ ಅರಿವು ಸೇರಿ ನಾಲ್ಕು ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿ ಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News