ಅಧಿಕಾರದ ಆಸೆ ಇದ್ದವರಲ್ಲಿ ಅಸಮಾಧಾನ ಸಹಜ: ಸಿದ್ದರಾಮಯ್ಯ

ಸಚಿವ ಸ್ಥಾನ ಸಿಗದ ಬಗ್ಗೆ ಅಸಮಾಧಾನ ಇರೋದು ನಿಜ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

Last Updated : Jun 8, 2018, 02:51 PM IST
ಅಧಿಕಾರದ ಆಸೆ ಇದ್ದವರಲ್ಲಿ ಅಸಮಾಧಾನ ಸಹಜ: ಸಿದ್ದರಾಮಯ್ಯ title=

ಬಾಗಲಕೋಟೆ: ಸಚಿವ ಸ್ಥಾನ ಸಿಗದ ಬಗ್ಗೆ ಅಸಮಾಧಾನ ಇರೋದು ನಿಜ, ಎಲ್ಲರ ಮನವೊಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ ತಿಳಿಸಿದ್ದಾರೆ. 

ವಿಧಾನಸಭೆ ಚುನಾವಣೆ ಬಳಿಕ ಮೊದಲ ಬಾರಿಗೆ ಬಾದಾಮಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಅವರು, ಇಂದು ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮಕ್ಕೆ ಭೇಟಿ ನೀಡಿ ಮತದಾರರಿಗೆ ಧನ್ಯವಾದ ತಿಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರದ ಆಸೆ ಇದ್ದವರಿಗೆ ಅಸಮಾಧಾನ ಆಗುವುದು ಸಹಜ. ಇದು ಎಲ್ಲಾ ಪಕ್ಷಗಳಲ್ಲಿಯೂ ಇದ್ದದ್ದೇ. ಇದರಲ್ಲಿ ಹೊಸತೇನೂ ಇಲ್ಲ.  ಸಚಿವ ಸ್ಥಾನದ ಆಕಾಂಕ್ಷಿ ಎಂ.ಬಿ.ಪಾಟೀಲ್ ನನ್ನನ್ನು ಭೇಟಿಯಾಗಿದ್ದು ನಿಜ, ಆದರೆ ಕಣ್ಣೀರು ಹಾಕಿಲ್ಲ. ನಾನು ಅವರನ್ನು ಸಮಾಧಾನ ಮಾಡಿದ್ದೇನೆ" ಎಂದು ಸಿದ್ದರಾಮಯ್ಯ ತಿಳಿದರು.

ರಾಜಕೀಯದಲ್ಲಿ ನಮ್ಮ ಮೊದಲ ಶತ್ರು ಅಂತ ಇದ್ದರೆ ಅದು ಬಿಜೆಪಿ. ಅವರು ತಮ್ಮ ಪಕ್ಷದಲ್ಲಿನ ಸಮಾಧಾನಗಳನ್ನು ಸರಿಪಡಿಸಿಕೊಳ್ಳಲಿ. ನಂತರ ಇತರರ ಬಗ್ಗೆ ಮಾತನಾಡಲಿ ಎಂದು ಸಿದ್ದರಾಮಯ್ಯ ಹೇಳಿದರು.

Trending News