Lok Sabha Election 2024: ಅಪ್ಪ-ಮಕ್ಕಳು ಅಸ್ತಿತ್ವಕ್ಕಾಗಿ ಏನೇನೋ ಮಾಡಬಾರದು- ಮಾಧುಸ್ವಾಮಿ ಆಕ್ರೋಶ

Lok Sabha Election 2024: ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ‌ ನನಗೂ ಇಷ್ಟವಿಲ್ಲ. ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ. ಸೋಮಣ್ಣ ಪರ ನಾನು ಕೆಲಸ ಮಾಡಲ್ಲವೆಂದು ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. 

Written by - Puttaraj K Alur | Last Updated : Mar 15, 2024, 10:09 PM IST
  • ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ‌ ನನಗೂ ಇಷ್ಟವಿಲ್ಲ
  • ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ
  • ಸೋಮಣ್ಣ ಪರ ನಾನು ಕೆಲಸ ಮಾಡಲ್ಲವೆಂದು ಜೆ.ಸಿ.ಮಾಧುಸ್ವಾಮಿ
Lok Sabha Election 2024: ಅಪ್ಪ-ಮಕ್ಕಳು ಅಸ್ತಿತ್ವಕ್ಕಾಗಿ ಏನೇನೋ ಮಾಡಬಾರದು- ಮಾಧುಸ್ವಾಮಿ ಆಕ್ರೋಶ title=
ಯಡಿಯೂರಪ್ಪ ವಿರುದ್ಧ ಮಾಧುಸ್ವಾಮಿ ಆಕ್ರೋಶ!

ತುಮಕೂರು: ಪುತ್ರನಿಗೆ ಟಿಕೆಟ್‌ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಿಂದ ತಾವು ಸ್ವತಂತ್ರವಾಗಿ ಸ್ಪರ್ಧಿಸುವುದಾಗಿಯೂ ಘೋಷಿಸಿದ್ದಾರೆ. ಈಶ್ವರಪ್ಪ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಸಹ ಯಡಿಯೂರಪ್ಪ ಅಂಡ್‌ ಸನ್ಸ್‌ ವಿರುದ್ಧ ಕಿಡಿಕಾರಿದ್ದಾರೆ. 

ಈ ಬಗ್ಗೆ ತುಮಕೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಮಾಧುಸ್ವಾಮಿ, ತಮ್ಮ ಅಸ್ಥಿತ್ವಕ್ಕಾಗಿ ಅಪ್ಪ-ಮಕ್ಕಳು ಏನೇನೋ ಮಾಡಬಾರದು ಅಂತಾ ಹೇಳಿದ್ದಾರೆ. ಸ್ವತಃ ಯಡಿಯೂರಪ್ಪನವರೇ ಟಿಕೆಟ್ ಕೊಡುವುದಾಗಿ ನನ್ನನ್ನು ಟೆಂಪ್ಟ್ ಮಾಡಿದ್ದರು. ಆದರೆ ಈಗ ಟಿಕೆಟ್ ಕೊಡಿಸುವಲ್ಲಿ‌ ಅವರು ವಿಫಲರಾಗಿದ್ದಾರೆ. ನನಗೆ ಯಡಿಯೂರಪ್ಪರ ಮೇಲೆ ‌ಬೇಸರ ಇದೆ ಅಂತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇವಲ 9 ಸೀಟ್‌ಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಕಾಂಗ್ರೆಸ್‌ ಮಾರಾಟ ಮಾಡಿದೆ: ಬಿಜೆಪಿ ಆರೋಪ

ವಿ.ಸೋಮಣ್ಣ ಗೆಲ್ಲುವುದು ಸಂಸದ ಬಸವರಾಜು ಸೇರಿ‌ ನನಗೂ ಇಷ್ಟವಿಲ್ಲ. ಸೋಮಣ್ಣರನ್ನು ಬಲಿಕೊಡಲು ಬಸವರಾಜು ಕರೆದುಕೊಂಡು ಬಂದಿದ್ದಾರೆ. ಸೋಮಣ್ಣ ಪರ ನಾನು ಕೆಲಸ ಮಾಡಲ್ಲ. ಪ್ರತಾಪ್ ಸಿಂಹ, ಸಿ.ಟಿ.ರವಿ ಪ್ರಧಾನಿ ಮೋದಿಯವರ ಮುಖ‌ ನೋಡಿ ಕೆಲಸ ಮಾಡಬಹುದು. ಆದರೆ‌ ನಾನು ಮೋದಿ ಮುಖ ನೋಡಿ ಕೆಲಸ ಮಾಡಲ್ಲವೆಂದು ಟಿಕೆಟ್‌ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. 

ಸೋಮಣ್ಣ ಹೊರಗಿನಿಂದ ಬಂದವರು. ಅವರು ಗೆಲ್ಲುವುದು ಇಲ್ಲಿಯ ಮತದಾರರಿಗೆ ಬೇಡ. ಹಾಗಂತ ನಾನು ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತೇನೆ ಅಂತಾ ತಪ್ಪು ತಿಳಿಯಬೇಡಿ. ಸೋಮಣ್ಣ ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಟ್ಟಿದ್ದರೆ ನಾನು ಕೆಲಸ ಮಾಡುತ್ತಿದ್ದೆ. ಕಾಂಗ್ರೆಸ್ ಜೊತೆ ಬಸವರಾಜು ಸಂಬಂಧ ಚೆನ್ನಾಗಿದೆ. ಹೀಗಾಗಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲುವುದು ಖಚಿತವೆಂದು ಮಾಧುಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ಧ ತೊಡೆ ತಟ್ಟಲು ಸಿದ್ಧರಾದ ಈಶ್ವರಪ್ಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News