"ರಾಜ್ಯಸಭೆ ಸ್ಥಾನದಿಂದ ನಾಸಿರ್ ಹುಸೇನ್ ಅವರನ್ನು ವಜಾ ಮಾಡಬೇಕು"

Bengaluru JDS Protest: ಪ್ರತಿಭಟನೆಯಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು ನಾಸಿರ್ ಹುಸೇನ್ ವಿರುದ್ಧ ಘೋಷಣೆಗಳನ್ನು ಕೂಗಿದರು.

Written by - Prashobh Devanahalli | Last Updated : Feb 28, 2024, 01:44 PM IST
  • ವಿಧಾನಸೌಧದಲ್ಲಿ ದೇಶದ್ರೋಹದ ಘೋಷಣೆ ಆರೋಪ
  • ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಬೇಕು
  • ನಾಸಿರ್ ಹುಸೇನ್ ವಿರುದ್ಧ ಜೆಡಿಎಸ್‌ ಪ್ರತಿಭಟನೆ
"ರಾಜ್ಯಸಭೆ ಸ್ಥಾನದಿಂದ ನಾಸಿರ್ ಹುಸೇನ್ ಅವರನ್ನು ವಜಾ ಮಾಡಬೇಕು"  title=

ಬೆಂಗಳೂರು: ಆರೂವರೆ ಕೋಟಿ ಕನ್ನಡಿಗರ ಹೃದಯವಾದ ವಿಧಾನಸೌಧದಲ್ಲಿ ದೇಶದ್ರೋಹದ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಕೂಡಲೇ ಬಂಧಿಸಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ. ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾದ ಸೈಯ್ಯದ್ ನಾಸಿರ್ ಹುಸೇನ್ ಅವರ ಬೆಂಬಲಿಗರು ದೇಶ ವಿರೋಧಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಸೇರಿದ್ದ ನೂರಾರು ಕಾರ್ಯಕರ್ತರು ನಾಸಿರ್ ಹುಸೇನ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ರಾಜ್ಯಸಭೆ ಸ್ಥಾನದಿಂದ ನಾಸಿರ್ ಹುಸೇನ್ ಅವರನ್ನು ವಜಾ ಮಾಡಬೇಕು ಹಾಗೂ ದೇಶದ್ರೋಹದ ಘೋಷಣೆಗಳನ್ನು ಕೂಗಿದ ದ್ರೋಹಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಸರಕಾರವನ್ನು ಒತ್ತಾಯ ಮಾಡಿದರು. ಕಾಂಗ್ರೆಸ್ ಸರ್ಕಾರ ಇಂಥ ಕಿಡಿಗೇಡಿಗಳು, ದ್ರೋಹಿಗಳನ್ನು ವ್ಯವಸ್ಥಿತವಾಗಿ ಪೋಷಣೆ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದ ಅವರು; ಈವರೆಗೂ ಸರಕಾರ ಇಂಥ ದೇಶದ್ರೋಹಿ ಕೃತ್ಯವನ್ನು ಖಂಡಿಸಿಲ್ಲ. ಬದಲಿಗೆ ಆ ಕೃತ್ಯವನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಪಾಕ್ ಪರ ಘೋಷಣೆ ಆರೋಪ.. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ರಸ್ತೆ ತಡೆ 

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ತಕ್ಷಣವೇ ದೇಶದ್ರೋಹದ ಘೋಷಣೆಯನ್ನು ಖಂಡಿಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಆ ಪಕ್ಷದ ಮುಖಂಡರೂ ಖಂಡಿಸುವ ಮಾತಿರಲಿ, ಅವರನ್ನೇ ಸಮರ್ಥನೆ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಅವರು ಆರೋಪ ಮಾಡಿದರು. ರಾಹುಲ್ ಗಾಂಧಿ ಅವರು ಭರತ್ ಜೋಡೋ, ಭಾರತ್ ನ್ಯಾಯ ಯತ್ರೆಗಳನ್ನು ಮಾಡುತ್ತಿದ್ದರೆ, ಅವರದೇ ಪಕ್ಷದ ನಾಯಕರು, ಕಾರ್ಯಕರ್ತರು, ಬೆಂಬಲಿಗರು ದೇಶವನ್ನು ಒಡೆಯುವ ಮಾತನಾಡುತ್ತಿದ್ದಾರೆ ಎಂದು ಅವರು ದೂರಿದರು.

ನಗರ ಜೆಡಿಎಸ್ ಘಟಕದ ಕಾರ್ಯಾಧ್ಯಕ್ಷ  ಜಿ.ಟಿ.ರೇವಣ್ಣ, ಪರಿಶಿಷ್ಟ ವಿಭಾಗದ ವೇಲು, ಯುವ ಘಟಕದ ಯುವ ಕಾರ್ಯಾಧ್ಯಕ್ಷ ಚಂದ್ರಶೇಖರ್, ಮಾದೇಗೌಡ ಹಾಗೂ ಮತ್ತು ಎಲ್ಲಾ ವಿಧಾನಸಭೆ ಕ್ಷೇತ್ರಗಳ  ಅಧ್ಯಕ್ಷರು ಹಾಗೂ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: 'ಪಾಕಿಸ್ತಾನ ಜಿಂದಾಬಾದ್' ದೇಶ ದ್ರೋಹಿ ಘೋಷಣೆಗೆ ಏನನ್ನುತ್ತಾರೆ ರಾಹುಲ್ ಗಾಂಧಿ? - ಪ್ರಹ್ಲಾದ ಜೋಶಿ ಪ್ರಶ್ನೆ 

ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷ ಜಿ.ಟಿ.ರೇವಣ್ಣ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಫ್ರೋಜ್ ಬೇಗ್, ಸೈಯದ್ ತಾಸಿನ್, ಕಾರ್ಮಿಕ ಘಟಕದ ಅಧ್ಯಕ್ಷ ಗೋಪಾಲಗೌಡ, ಹಿರಿಯ ಉಪಾಧ್ಯಕ್ಷ ಎಂ. ನಾಗರಾಜು, ಯುವ ಜನತಾದಳದ ನಗರ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್, ಐ.ಟಿ. ಘಟಕದ ಅಧ್ಯಕ್ಷ ಫಣಿರಾಜ್, ಯುವ ಜೆಡಿಎಸ್ ಕಾರ್ಯಾಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಪ್ರಶಾಂತಿ, ತುಳಸಿರಾಮ್, ಮಾದೇಗೌಡ ಸೇರಿದಂತೆ ಬೆಂಗಳೂರು ವಿವಿಧ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News