JOB and Career: ಆರ್‌ಸೆಟಿಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಅಗರಬತ್ತಿ ತಯಾರಿಕೆ ಮತ್ತು ಅಣಬೆ ಬೇಸಾಯ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jan 14, 2022, 04:16 PM IST
  • ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಅಗರಬತ್ತಿ ತಯಾರಿಕೆ ಮತ್ತು ಅಣಬೆ ಬೇಸಾಯ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
JOB and Career: ಆರ್‌ಸೆಟಿಯಿಂದ ಉಚಿತ ತರಬೇತಿಗೆ ಅರ್ಜಿ ಆಹ್ವಾನ title=

ಬೆಂಗಳೂರು : ಸ್ಟೇಟ್ ಬ್ಯಾಂಕ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಅಗರಬತ್ತಿ ತಯಾರಿಕೆ ಮತ್ತು ಅಣಬೆ ಬೇಸಾಯ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ: 'ಓಮಿಕ್ರಾನ್ ಡೆಲ್ಟಾಕ್ಕಿಂತ ಹೆಚ್ಚು ಸಾಂಕ್ರಾಮಿಕ "

ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು. ಅರ್ಜಿ ಸ್ವೀಕರಿಸಲು ಜನವರಿ 21 ಕೊನೆಯ ದಿನವಾಗಿದ್ದು, ಜ.22 ರಂದು ಸಂದರ್ಶನ ನಡೆಸಲಾಗುವುದು ಮತ್ತು ಜ.24 ರಿಂದ ತರಬೇತಿಯನ್ನು ಪ್ರಾರಂಭಿಸಲಾಗುವುದು.

ಇದನ್ನೂ ಓದಿ: ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸ್ಟೇಟ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ  ಫೋ: 08539-231038 ಇಲ್ಲಿಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News