ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ಹೊಂದಿಕೊಂಡು ಬದುಕುತ್ತಿದ್ದಾರೆ- ಜಗದೀಶ್ ಶೆಟ್ಟರ್

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ರಾಜಕೀಯ ಅಭಿಲಾಷೆಯಿಂದ ಕೆಲವರು ಹೇಳುತ್ತಾರೆ ಅಷ್ಟೇ.

Last Updated : Nov 14, 2017, 05:16 PM IST
ಬೆಳಗಾವಿಯಲ್ಲಿ ಕನ್ನಡಿಗರು-ಮರಾಠಿಗರು ಹೊಂದಿಕೊಂಡು ಬದುಕುತ್ತಿದ್ದಾರೆ- ಜಗದೀಶ್ ಶೆಟ್ಟರ್ title=
Pic: Youtube

ಬೆಳಗಾವಿ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬ ಎಂ.ಇ.ಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಕೆಲವರು ರಾಜಕೀಯ ಕಾರಣಕ್ಕೆ ಹೀಗೆ ಹೇಳಿಕೆ ನೀಡುತ್ತಿದ್ದಾರೆ. ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಹೊಂದಿಕೊಂಡು ಬದುಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಹೇಳುತ್ತಿರುವ ಕೆಲವು ನಾಯಕರು ರಾಜಕೀಯವಾಗಿ ತಾವು ಬೆಳೆದು ಬಿಡುತ್ತೇವೆ ಎಂದು ಭಾವಿಸಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಬೆಳಗಾವಿ ಎಂದೆಂದಿಗೂ ಕರ್ನಾಟಕಕ್ಕೇ ಸೇರಿದ್ದು ಎಂದು ಹೇಳಿದರು.

ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಹೊಂದಿಕೊಂಡು ಬದುಕುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದು ಹೆಚ್ಚುದಿನ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Trending News