“ಎಂದಿನಂತೆ ತಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿ ‘ಕೈ’ ತೊಳೆದುಕೊಳ್ಳುತ್ತಿದೆ”: ಕಮಲ ಟ್ವೀಟಾಸ್ತ್ರ

“ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿರುವ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಸಿದ್ದರಾಮಯ್ಯನವರ ATM ಸರ್ಕಾರಕ್ಕೆ ಇಷ್ಟು ದಿನ ಬೇಕಾಯಿತು” ಎಂದು ಗುಡುಗಿದ್ದಾರೆ

Written by - Bhavishya Shetty | Last Updated : Jun 30, 2023, 01:52 PM IST
    • 5 ಕೆಜಿಯ ಬಾಬ್ತು + 5 ಕೆಜಿ ಕೇಂದ್ರ ನೀಡುವ ಉಚಿತ ಅಕ್ಕಿ = 15 ಕೆಜಿ ಎಂದು ಜನರಿಗೆ ವಂಚಿಸುತ್ತಿದ್ದೀರಿ
    • ನಿಮ್ಮ ಅಸಮರ್ಥ ಹಾಗೂ ಉಡಾಫೆ ಶೈಲಿಯ ಆಡಳಿತಕ್ಕೆ ಎಲ್ಲಿಯೂ ಸಹ ಅಕ್ಕಿ ದೊರೆತಿಲ್ಲ.
    • ಕಾಂಗ್ರೆಸ್ ವಿರುದ್ಧ ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ
“ಎಂದಿನಂತೆ ತಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿ ‘ಕೈ’ ತೊಳೆದುಕೊಳ್ಳುತ್ತಿದೆ”: ಕಮಲ ಟ್ವೀಟಾಸ್ತ್ರ title=
Karnataka BJP

ಬೆಂಗಳೂರು: ಅಕ್ಕಿಯನ್ನು ಹೊಂದಿಸಲು "ಕೈ"ಲಾಗದ ಮುಖ್ಯಮಂತ್ರಿಗಳು, ಎಂದಿನಂತೆ ತಮ್ಮ ತಪ್ಪನ್ನು ಬೇರೆಯವರ ಮೇಲೆ ಹಾಕಿ "ಕೈ" ತೊಳೆದುಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಶಾಲೆ ಪರಿಸರ ಒಳ್ಳೆಯದಾದ್ರೇ ಮಕ್ಕಳಿಗೆ ಖುಷಿ - ಎಂ.ಆರ್.ಪಾಟೀಲ್

“ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪ್ರತಿ ತಿಂಗಳು ಉಚಿತವಾಗಿ 5 ಕೆಜಿ ಅಕ್ಕಿಯನ್ನು ನೀಡುತ್ತಿರುವ ಸತ್ಯವನ್ನು ಬಹಿರಂಗವಾಗಿ ಒಪ್ಪಿಕೊಳ್ಳಲು ಸಿದ್ದರಾಮಯ್ಯನವರ ATM ಸರ್ಕಾರಕ್ಕೆ ಇಷ್ಟು ದಿನ ಬೇಕಾಯಿತು” ಎಂದು ಗುಡುಗಿದ್ದಾರೆ.

 

“ಸ್ವಾಮಿ ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯನವರೇ, ರಾಜ್ಯದ ಎಲ್ಲಾ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುತ್ತೇವೆಂದು ನೀವುಗಳೇ ಹೋದಲ್ಲಿ, ಬಂದಲ್ಲಿ ಭಾಷಣ ಮಾಡುತ್ತಿದ್ದಿರಿ. ಈಗಾಗಲೇ ಕೇಂದ್ರ ಸರ್ಕಾರದ ವತಿಯಿಂದ 5 ಕೆಜಿ ದೊರೆಯುತ್ತಿದೆ ಎಂದರೇ, ನಿಮ್ಮ ಮಾತಿನ ಪ್ರಕಾರ, ರಾಜ್ಯದ ಜನತೆಗೆ ಕೇಂದ್ರ ಸರ್ಕಾರದ 5 ಹಾಗೂ ರಾಜ್ಯ ಸರ್ಕಾರದ ವತಿಯಿಂದ 10 ಒಟ್ಟು 15 ಕೆಜಿ ಅಕ್ಕಿ ದೊರೆಯಬೇಕು. ಆದರೆ ಈಗ ರಾಜ್ಯ ಸರ್ಕಾರದ ವತಿಯಿಂದ ಕೇವಲ 5 ಕೆಜಿ ಅಕ್ಕಿಯ ಬದಲಿಗೆ, ಪ್ರತಿ ಕೆಜಿಗೆ 34 ರೂಪಾಯಿ ನೀಡುವುದಾಗಿ ಘೋಷಿಸಿದ್ದೀರಿ. ಹಾಗಾದರೆ ಬಾಕಿ 5 ಕೆಜಿ ಅಕ್ಕಿಯ ಕಥೆ ಏನು?” ಎಂದು ಪ್ರಶ್ನಿಸಿದ್ದಾರೆ.

“5 ಕೆಜಿಯ ಬಾಬ್ತು + 5 ಕೆಜಿ ಕೇಂದ್ರ ನೀಡುವ ಉಚಿತ ಅಕ್ಕಿ = 15 ಕೆಜಿ ಎಂದು ಜನರಿಗೆ ವಂಚಿಸುತ್ತಿದ್ದೀರಿ. ಜನರನ್ನು ನಂಬಿಸಿ ಮೋಸ ಮಾಡುವುದು, ಕಾಂಗ್ರೆಸ್ ಪಕ್ಷದ ಡಿ ಎನ್ ಎಯಲ್ಲಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ. ನಿಮ್ಮ ಅಸಮರ್ಥ ಹಾಗೂ ಉಡಾಫೆ ಶೈಲಿಯ ಆಡಳಿತಕ್ಕೆ ಎಲ್ಲಿಯೂ ಸಹ ಅಕ್ಕಿ ದೊರೆತಿಲ್ಲ. ಈ ಕಾರಣಕ್ಕಾಗಿ ಜನತೆಗೆ ಅಕ್ಕಿ ಬದಲು ಹಣ ನೀಡಿ ಎಂದಾಗ, ಹಣವನ್ನು ತಿನ್ನುವುದಕ್ಕೆ ಆಗುತ್ತಾ ಎಂದು ಉದ್ಧಟತನ ಪ್ರದರ್ಶಿಸಿದ್ದಿರಿ. ಈಗ ಕೆಜಿಗೆ 34 ರೂಪಾಯಿ ಎಂದು U ಟರ್ನ್ ಹೊಡೆದಿದ್ದೀರಿ” ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

“ಕೇಂದ್ರದ ಸಬ್ಸಿಡಿ ಇಲ್ಲದೇ, ತಾವು ನಿಗದಿಪಡಿಸಿರುವ ಮೊತ್ತಕ್ಕೆ ಊಟಕ್ಕೆ ಯೋಗ್ಯವಾದ ಅಕ್ಕಿ ಕರ್ನಾಟಕದ ಯಾವ ಗಿರಣಿಯಲ್ಲಿ ಸಿಗುತ್ತದೆ ಎಂಬ ಮಾಹಿತಿಯನ್ನೂ ಸ್ವಲ್ಪ ಜನತೆಗೆ ತಿಳಿಸಿ. ಇಲ್ಲವಾದಲ್ಲಿ ಮಾರುಕಟ್ಟೆಯಲ್ಲಿ ಯಾವ ದರದಲ್ಲಿ ಯೋಗ್ಯ ಅಕ್ಕಿ ದೊರೆಯುತ್ತದೆಯೋ, ಅದೇ ದರವನ್ನು ನೀವು ಜನತೆಗೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆಯಡಿ 8 ಕೆಜಿ ಅಕ್ಕಿ ಜೊತೆಗೆ 2 ಕೆಜಿ ರಾಗಿ/ಜೋಳ ವಿತರಣೆ: ಸಚಿವ ಮುನಿಯಪ್ಪ

“13 ಬಜೆಟ್ ಮಂಡಿಸಿದ್ದೇನೆ, ಆಡಳಿತದಲ್ಲಿ ಅಪಾರವಾದ ಅನುಭವವಿದೆ ಎಂದು ಬಡಾಯಿ ಕೊಚ್ಚಿಕೊಳ್ಳುವ ನಿಮಗೆ, ಎಫ್‌ಸಿ ಐಯನ್ನು ಸರ್ಕಾರ ಏಕೆ ಸ್ಥಾಪಿಸಿದೆ, ಅದರ ಧ್ಯೇಯೋದ್ದೇಶಗಳೇನು ಎಂಬುದು ತಿಳಿದಿಲ್ಲವಾದದ್ದು ಅತ್ಯಂತ ದುರದೃಷ್ಟಕರ. ನಿಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ವಿನಾಕಾರಣ ದೂಷಿಸುವ ನಿಮ್ಮ ಬುದ್ಧಿಗೆ, ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News