ಬಿಬಿಎಂಪಿ ಗುತ್ತಿಗೆದಾರನ ಆತ್ಮಹತ್ಯೆಗೆ ಸಿದ್ದರಾಮಯ್ಯ, ಡಿಕೆಶಿ ಹೊಣೆ: ಬಿಜೆಪಿ ಆರೋಪ

BBMP Contractor suicide: ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್, ಕಮಿಷನ್ ಎನ್ನುತ್ತಾ ಲೂಟಿಗಿಳಿದ ಪರಿಣಾಮವೇ ಇಂದು ಬಿಬಿಎಂಪಿ ಗುತ್ತಿಗೆದಾರ ಗೌತಮ್ ಕಾಮಗಾರಿ ಬಿಲ್‌ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಜೆಪಿ ಆರೋಪಿಸಿದೆ.

Written by - Puttaraj K Alur | Last Updated : Aug 10, 2023, 05:36 PM IST
  • ಬಿಬಿಎಂಪಿ ಮಾಜಿ ಕಾರ್ಪೋರೇಟರ್ ದೊಡ್ಡಯ್ಯ ಪುತ್ರ ಗೌತಮ್ ಆತ್ಮಹತ್ಯೆ ಪ್ರಕರಣ
  • ಕಲೆಕ್ಷನ್, ಕಮಿಷನ್ ಎನ್ನುತ್ತಾ ಲೂಟಿಗಿಳಿದಿದ್ದಕ್ಕೆ ಬಿಬಿಎಂಪಿ ಗುತ್ತಿಗೆದಾರ ಗೌತಮ್ ಆತ್ಮಹತ್ಯೆ
  • ಗೌತಮ್ ಆತ್ಮಹತ್ಯೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿಯವರೇ ನೇರ ಕಾರಣ
ಬಿಬಿಎಂಪಿ ಗುತ್ತಿಗೆದಾರನ ಆತ್ಮಹತ್ಯೆಗೆ ಸಿದ್ದರಾಮಯ್ಯ, ಡಿಕೆಶಿ ಹೊಣೆ: ಬಿಜೆಪಿ ಆರೋಪ  title=
ಬಿಬಿಎಂಪಿ ಗುತ್ತಿಗೆದಾರ ಗೌತಮ್ ಆತ್ಮಹತ್ಯೆ!

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರ ಗೌತಮ್ ಆತ್ಮಹತ್ಯೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ. ಬಿಬಿಎಂಪಿ ಮಾಜಿ ಕಾರ್ಪೋರೇಟರ್ ದೊಡ್ಡಯ್ಯ ಎಂಬುವರ ಪುತ್ರ ಗೌತಮ್ ಆತ್ಮಹತ್ಯೆ ಪ್ರಕರಣ ಸಂಬಂಧ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್, ಕಮಿಷನ್ ಎನ್ನುತ್ತಾ ಲೂಟಿಗಿಳಿದ ಪರಿಣಾಮವೇ ಇಂದು ಬಿಬಿಎಂಪಿ ಗುತ್ತಿಗೆದಾರ ಗೌತಮ್ ಕಾಮಗಾರಿ ಬಿಲ್‌ ಸಿಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಆರೋಪಿಸಿದೆ’

‘ಉತ್ತರ ಕೊಡಲ್ಲ, ಆಣೆ ಮಾಡೋಲ್ಲ, ಪ್ರತಿಭಟನೆ ಮಾಡಿದ್ರೆ ಬ್ಲ್ಯಾಕ್ ಮೇಲ್ ಎನ್ನುತ್ತ ಬೇಜವಾಬ್ದಾರಿಯಿಂದ ವರ್ತಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದಕ್ಕೆ ನೇರ ಹೊಣೆ..! ಆಡಳಿತ ನಡೆಸಲು ಕಾಂಗ್ರೆಸ್ ಅಸಮರ್ಥ ಎನ್ನುವುದು ಸಾಬೀತಾಗಿದೆ. ಇನ್ನಷ್ಟು ಜೀವಗಳನ್ನು ಬಲಿ ಪಡೆಯುವ ಮೊದಲು ರಾಜೀನಾಮೆ ನೀಡಿ ಮನೆಗೆ ಹೋಗಿ!’ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ: ಬಸ್ ಹಿಂಬದಿಯಲ್ಲಿ ಜೋತು ಬಿದ್ದು ವೃದ್ದ ಪ್ರಯಾಣ

ಬ್ಯಾನರ್‌ ತೆರವುಗೊಳಿಸಿ ಬೇಗ ದಂಡ ಕಟ್ಟಿ!

ಪ್ರತಿಯೊಂದು ಲೈಟು ಕಂಬದ ಮೇಲೂ ಡಿಸಿಎಂ ಡಿ.ಕೆ.ಶಿವಕುಮಾರ್ ಫ್ಲೆಕ್ಸ್! ಈಗ ನಿಮ್ಮದೇ ಸಾಲು ಸಾಲು ಬ್ಯಾನರ್‌ಗಳ ದಂಡದ ಮೊತ್ತವನ್ನು ಯಾರು ಭರಿಸುತ್ತಾರೆ ಡಿಸಿಎಂ ಸಾಹೇಬರೇ? ಸಿದ್ದರಾಮಯ್ಯರನ್ನು ಮುಖ್ಯಮುಂತ್ರಿ ಮಾಡಲು ಅಷ್ಟೆಲ್ಲಾ ವೆಚ್ಚ ಮಾಡಿದ ತಮಗೆ ಇದು ದೊಡ್ಡ ಹೊರೆ ಆಗಲಾರದು ಬಿಡಿ. ಮೊದಲು ಬ್ಯಾನರ್‌ಗಳನ್ನು ತೆರವು ಮಾಡಿ ಆದಷ್ಟು ಬೇಗ ದಂಡ ಕಟ್ಟಿಬಿಡಿ’ ಎಂದು ಬಿಜೆಪಿ ಟೀಕಿಸಿದೆ.

ಬೇಲಿಯೇ ಎದ್ದು ಹೊಲ ಮೇಯ್ದಂತೆ!

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯನವರ ಸರ್ಕಾರದ 2.0 ತುಘಲಕ್ ದರ್ಬಾರ್ ಆರಂಭವಾಗುತ್ತಿದ್ದಂತೆ ಮರಳು ಮಾಫಿಯಾ ಮತ್ತೆ ಆರ್ಭಟಿಸಿದೆ. #TrollMinister ಪ್ರಿಯಾಂಕ್ ಖರ್ಗೆಯವರ ತವರು ಜಿಲ್ಲೆಯಲ್ಲೇ ಮರಳು ಮಾಫಿಯಾ ಮೊದಲ ಪೊಲೀಸ್ ಪೇದೆಯನ್ನು ಬಲಿ ಪಡೆದಿತ್ತು. ಇದೀಗ ಸಚಿವ ಬೋಸರಾಜ ಅವರ ಬೆಂಬಲಿಗರು ಮರಳು ಮಾಫಿಯಾವನ್ನು ನಡೆಸುತ್ತಿದ್ದು, ಅವರಿಂದಲೇ ಪೊಲೀಸ್ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ ಕಾಂಗ್ರೆಸ್ ಸರ್ಕಾರದ ಆಡಳಿತ  ಪರಿಸ್ಥಿತಿ..!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಕೊಬ್ಬರಿಗೆ ಕ್ವಿಂಟಾಲ್‌ಗೆ 20 ಸಾವಿರ ಬೆಂಬಲ ಬೆಲೆಗೆ ಅನ್ನದಾತರ ಆಗ್ರಹ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News