ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ: ಬಿಜೆಪಿ ಆಕ್ರೋಶ!

Congress Fails Women Safety: ಕರ್ನಾಟಕವನ್ನು ಕಾಂಗ್ರೆಸ್ ತಾಲಿಬಾನ್ ಅನ್ನಾಗಿಸುತ್ತಿದೆಯೇ? ಬೆಳಗಾವಿಯ ಒಬ್ಬ ಮಹಿಳೆಯ ಅಮಾನವೀಯ ಕಿರುಕುಳ ಮತ್ತು ದೌರ್ಜನ್ಯ, ಮತ್ತೊಬ್ಬ ಮಹಿಳೆಯ ಮೂಗಿಗೆ ಕತ್ತರಿ, ಈಗ ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ. ಗೃಹಲಕ್ಷ್ಮಿಯರಿಗೆ ಇಂತಹ ಭಾಗ್ಯವೇ? ಎಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : Jan 13, 2024, 01:09 PM IST
  • ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ
  • ಮಹಿಳೆಯರನ್ನು ಸುರಕ್ಷಿತವಾಗಿಸಬೇಕಿದ್ದ ಹೊದಿಕೆಯ ತುಂಬಾ ರಂಧ್ರಗಳೇ ತುಂಬಿವೆ
  • ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರವು ತಾಲಿಬಾನ್ ಅನ್ನಾಗಿಸುತ್ತಿದೆಯೇ?
ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ: ಬಿಜೆಪಿ ಆಕ್ರೋಶ!  title=
ಗೃಹಲಕ್ಷ್ಮಿಯರಿಗೆ ಇಂತಹ ಭಾಗ್ಯವೇ?

ಬೆಂಗಳೂರು: ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಗೆ ಯಾವುದೇ ಗ್ಯಾರಂಟಿ ಇಲ್ಲ. ಮಹಿಳೆಯರನ್ನು ಸುರಕ್ಷಿತವಾಗಿಸಬೇಕಿದ್ದ ಹೊದಿಕೆಯ ತುಂಬಾ ರಂಧ್ರಗಳೇ ತುಂಬಿವೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

ಕರ್ನಾಟಕವನ್ನು ಕಾಂಗ್ರೆಸ್ ತಾಲಿಬಾನ್ ಅನ್ನಾಗಿಸುತ್ತಿದೆಯೇ? ಬೆಳಗಾವಿಯ ಒಬ್ಬ ಮಹಿಳೆಯ ಅಮಾನವೀಯ ಕಿರುಕುಳ ಮತ್ತು ದೌರ್ಜನ್ಯ, ಮತ್ತೊಬ್ಬ ಮಹಿಳೆಯ ಮೂಗಿಗೆ ಕತ್ತರಿ, ಈಗ ಹಾವೇರಿಯಲ್ಲಿ ಮುಸ್ಲಿಂ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ. ಗೃಹಲಕ್ಷ್ಮಿಯರಿಗೆ ಇಂತಹ ಭಾಗ್ಯವೇ? ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: Crime News: ಪ್ರಿಯಕರನೊಂದಿಗೆ‌ ಬೆಡ್‌ ರೂಮ್‌ನಲ್ಲಿದ್ದಾಗ ಬಂದ ಪತಿಯ ಕೊಂದ ಪತ್ನಿ.. ಹೃದಯಾಘಾತ ಎಂದು ಹೈಡ್ರಾಮಾ!

ಗಾಂಧಿ ತತ್ವದ ಬಗ್ಗೆ ಭಾಷಣ ಮಾಡುವ ಸಿಎಂ ಸಿದ್ದರಾಮಯ್ಯನವರೇ, ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ ಸ್ತ್ರೀ ಸ್ವಾತಂತ್ರ್ಯ ಮತ್ತು ಘನತೆಯ ಆದರ್ಶ ನಿಮ್ಮ ನಾಯಕತ್ವದಲ್ಲಿ ಛಿದ್ರ ಛಿದ್ರವಾಗಿದೆ. ನಮ್ಮ ತಾಯಂದಿರ, ಸಹೋದರಿಯರ, ಹೆಣ್ಣು ಮಕ್ಕಳ ಸುರಕ್ಷತೆಗೆ ಗ್ಯಾರಂಟಿ ಇಲ್ಲದಾಗ, ನಿಮ್ಮ ಗ್ಯಾರಂಟಿಗಳು ಇನ್ನೆಷ್ಟು ಯೋಗ್ಯ ಅನಿಸಿಕೊಳ್ಳುತ್ತವೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಸ್ತ್ರೀಯರನ್ನು ಹತ್ತಿಕ್ಕುವ ಗ್ಯಾರಂಟಿ!

ಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರ "ಗೃಹ ಲಕ್ಷ್ಮಿ" ಮೂಲಕ ಬೀದಿಗೆ ತಂದಿದ್ದು ಅಲ್ಲದೇ, ಸ್ತ್ರೀಯರನ್ನು ಹತ್ತಿಕ್ಕುವ ಗ್ಯಾರಂಟಿ ಕೊಟ್ಟಿದೆ: ಉಡುಪಿಯಲ್ಲಿ ಜಿಹಾದಿಗಳಿಂದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ!, ಬೆಳಗಾವಿಯಲ್ಲಿ ಅಣ್ಣ-ತಂಗಿ ಮೇಲೆ ಪಿಎಫ್‌ಐ ಗೂಂಡಾಗಳಿಂದ ಹಲ್ಲೆ!, ಹಾನಗಲ್‍ನಲ್ಲಿ ಮತಾಂಧ ಜಿಹಾದಿ ಗೂಂಡಾಗಳಿಂದ ಲೈಂಗಿಕ ದೌರ್ಜನ್ಯ ಮತ್ತು ಬೆಳಗಾವಿಯಲ್ಲಿ ಮಹಿಳೆಯ ಮೇಲೆ ನಿರಂತರ ಹಲ್ಲೆ- ಮಾನಭಂಗ! ನಡೆದಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಟ್ರಾಫಿಕ್ ಕಂಟ್ರೋಲ್‌ಗೆ ಸಹಕಾರಿ ಈ ರಿಂಗ್‌ರೈಲ್ ಯೋಜನೆ

ಮಜವಾದಿ ತುಘಲಕ್‌ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ರಾಜ್ಯದ ಮಹಿಳೆಯರು, ಯುವತಿಯರು, ವಿದ್ಯಾರ್ಥಿನಿಯರ ಮೇಲೆ ಮಾನಭಂಗ, ಲೈಂಗಿಕ ದೌರ್ಜನ್ಯ, ಹಲ್ಲೆ, ಗ್ಯಾಂಗ್‌ ರೇಪ್‌ ಪ್ರಕರಣಗಳು ನಿರಂತರವಾಗಿದ್ದರೂ "ಸ್ಲೀಪಿಂಗ್‌ ಸರ್ಕಾರ" ಗಾಢ ನಿದ್ದೆಯಲ್ಲಿದೆ! ಎಂದು ಬಿಜೆಪಿ ಕಿಡಿಕಾರಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News