ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿಗೆ ಭವಿಷ್ಯವೇ ಇಲ್ಲ: ಬಿಜೆಪಿ

Congress Guarantee Schemes: ಸಿಎಂ ಸಿದ್ದರಾಮಯ್ಯ ಸಾಹೇಬರು, ಗ್ಯಾರಂಟಿಗಳಿಗೆ ಕಂಡೀಷನ್ ಹಾಕಲು ಹಣಕಾಸು ಇಲಾಖೆ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

Written by - Puttaraj K Alur | Last Updated : Jul 31, 2023, 05:58 PM IST
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಕಿಡಿ
  • ಸಿದ್ದರಾಮಯ್ಯನವರು ಗ್ಯಾರಂಟಿಗಳಿಗೆ ಕಂಡೀಷನ್ ಹಾಕಲು ಹಣಕಾಸು ಇಲಾಖೆ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ
  • ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿಗೆ ಭವಿಷ್ಯವೇ ಇಲ್ಲದಂತಾಗಿದೆ
ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿಗೆ ಭವಿಷ್ಯವೇ ಇಲ್ಲ: ಬಿಜೆಪಿ   title=
ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಕಿಡಿ!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಕಿಡಿಕಾರಿದೆ. ಗ್ಯಾರಂಟಿ ಯೋಜನೆಗಳ ಜಾರಿ ವಿಚಾರವಾಗಿ ಆತಂಕ ವ್ಯಕ್ತಪಡಿಸಿರುವ ಹಣಕಾಸು ಇಲಾಖೆಯ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಇದೇ ಅಲ್ಲವೇ ಕಾಂಗ್ರೆಸ್ ಸರ್ಕಾರದ  ಬೃಹನ್ನಳೆ ನಾಟಕ..!’ ಎಂದು ವ್ಯಂಗ್ಯವಾಡಿದೆ.

‘ಸಿಎಂ ಸಿದ್ದರಾಮಯ್ಯ ಸಾಹೇಬರು, ಗ್ಯಾರಂಟಿಗಳಿಗೆ ಕಂಡೀಷನ್ ಹಾಕಲು ಹಣಕಾಸು ಇಲಾಖೆ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ. ಒಂದು ಕೈಯಲ್ಲಿ ಕೊಟ್ಟ ಹಾಗೆ ಮಾಡಿ, ಮತ್ತೊಂದು ಕೈಯಿಂದ ಕಿತ್ತುಕೊಳ್ಳುವ ಗ್ಯಾರಂಟಿಗೆ ಭವಿಷ್ಯವೇ ಇಲ್ಲದಂತಾಗಿದೆ’ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಆಯುಕ್ತರಿಗೆ ನೆಟಿಜನ್ಗಳ ಚಾಟಿ!

ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ!

‘ಚುನಾವಣೆಗೂ ಮುನ್ನ ನಂದಿನಿಯನ್ನು ದುರುಪಯೋಗ ಪಡಿಸಿಕೊಂಡ ಕಾಂಗ್ರೆಸ್ ಇಂದು ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ನಂದಿನಿಗೆ ರಾಜಕೀಯ ಸ್ಪರ್ಶ ನೀಡಿದ ಪರಿಣಾಮ ಕೇರಳ ಮಾರುಕಟ್ಟೆಯನ್ನು ನಂದಿನಿ ಈಗಾಗಲೇ ಕಳೆದುಕೊಂಡಿದೆ. ಇದೀಗ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ನಿಲ್ಲಿಸುವ ಮೂಲಕ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದೆ’ ಎಂದು ಬಿಜೆಪಿ ಕುಟುಕಿದೆ.

‘ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರಕ್ಕೆ ಬಂದಾಗ ಲಾಭ-ನಷ್ಟದ ಲೆಕ್ಕ ಹೇಳುವ ಕಾಂಗ್ರೆಸ್‌ ಇದೇ ಸೂತ್ರವನ್ನು ಇತರ ಧರ್ಮಗಳಿಗೆ ಅನ್ವಯಿಸಲು ಒಪ್ಪುವುದಿಲ್ಲ. ಹಿಂದೂಗಳೆಡೆಗೆ ತಾತ್ಸಾರ ತಮ್ಮ ಜಾತ್ಯಾತೀತ ಸೂತ್ರ ಎಂಬುದನ್ನು ಸಿದ್ದರಾಮಯ್ಯನವರು ಈಗ ಮತ್ತೆ ರುಜುವಾತು ಮಾಡಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಜುಲೈ ತಿಂಗಳ ಗೃಹಜ್ಯೋತಿ ಉಚಿತ ವಿದ್ಯುತ್ ಬಿಲ್ ಹೇಗಿರುತ್ತೆ ಗೊತ್ತಾ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News