ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗಿಂತಲೂ, ಮೈತ್ರಿಕೂಟದ ಸ್ನೇಹಿತರ ಹಿತಾಸಕ್ತಿ ಕಾಪಾಡುವುದೇ ಮುಖ್ಯ: ಬಿಜೆಪಿ

Kaveri Water Row: ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್, ಕರ್ನಾಟಕದ ತಮ್ಮ ಸ್ವಾರ್ಥದ ಮೈತ್ರಿಕೂಟದ ಸಚಿವ ಮಿತ್ರರಿಗೆ ಕಾವೇರಿ ನದಿ ನೀರು ವಿಚಾರದಲ್ಲಿ ಹೊಸ ಜವಾಬ್ದಾರಿಗಳನ್ನು ನೀಡಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : Aug 24, 2023, 12:43 PM IST
  • ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
  • ಎಂ.ಕೆ.ಸ್ಟಾಲಿನ್ ಕರ್ನಾಟಕದ ತಮ್ಮ ಸ್ವಾರ್ಥದ ಮೈತ್ರಿಕೂಟದ ಸಚಿವರಿಗೆ ಹೊಸ ಜವಾಬ್ದಾರಿ ನೀಡಿದ್ದಾರೆ
  • ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗಿಂತಲೂ, ತಮ್ಮ ಸ್ವಾರ್ಥ ಮೈತ್ರಿಕೂಟದ ಸ್ನೇಹಿತರ ಹಿತಾಸಕ್ತಿ ಕಾಪಾಡುವುದೇ ಮುಖ್ಯ
ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗಿಂತಲೂ, ಮೈತ್ರಿಕೂಟದ ಸ್ನೇಹಿತರ ಹಿತಾಸಕ್ತಿ ಕಾಪಾಡುವುದೇ ಮುಖ್ಯ: ಬಿಜೆಪಿ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿನೀರು ಬಿಡುಗಡೆ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಬಿಜೆಪಿ, ‘ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್, ಕರ್ನಾಟಕದ ತಮ್ಮ ಸ್ವಾರ್ಥದ ಮೈತ್ರಿಕೂಟದ ಸಚಿವ ಮಿತ್ರರಿಗೆ ಕಾವೇರಿ ನದಿ ನೀರು ವಿಚಾರದಲ್ಲಿ ಹೊಸ ಜವಾಬ್ದಾರಿಗಳನ್ನು ನೀಡಿದ್ದಾರೆ’ ಎಂದು ಟೀಕಿಸಿದೆ.

ಇದನ್ನೂ ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಿದರೆ ಜನಾಂದೋಲನವಾಗಲಿದೆ: ಬಸವರಾಜ ಬೊಮ್ಮಾಯಿ

‘ಸಿಎಂ ಸಿದ್ದರಾಮಯ್ಯರಿಗೆ ಕಾವೇರಿ ವಿವಾದ ಬಗೆಹರಿಯುವ ತನಕ ಮೌನಕ್ಕೆ ಶರಣಾಗುವುದು. ಡಿಸಿಎಂ ಡಿ.ಕೆ.ಶಿವಕುಮಾರ್‍ಗೆ ಕೆಆರ್ಎಸ್‍ನಿಂದ ಬಿಡುವ ನೀರು ತಮಿಳುನಾಡು ತಲುಪುವ ತನಕ, ಕೊಂಚವೂ ತೊಂದರೆ ಬಾರದಂತೆ ನೋಡಿಕೊಳ್ಳುವುದು. ಸಚಿವ ಎನ್.ಚೆಲುವರಾಯಸ್ವಾಮಿಗೆ ಕಾವೇರಿ ಕೊಳ್ಳದಲ್ಲಿ ಕರ್ನಾಟಕದ ರೈತರು ಹೊಸದಾಗಿ ಬಿತ್ತನೆ ಮಾಡದಂತೆ ತಡೆಯುವುದು ಹಾಗೂ ಪ್ರಿಯಾಂಕ್ ಖರ್ಗೆಗೆ ತಮಿಳುನಾಡಿಗೆ ನೀರು ಹರಿಬಿಟ್ಟ ಕರ್ನಾಟಕ ಸರ್ಕಾರದ ನೀತಿಯನ್ನು ವಿರೋಧಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವವರ ವಿರುದ್ಧ ಎಫ್ಐಆರ್ ಹಾಕಿಸುವುದು’ ಹೊಸ ಜವಾಬ್ದಾರಿಗಳಾಗಿವೆ ಎಂದು ಕುಟುಕಿದೆ.

ಇದನ್ನೂ ಓದಿ: ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಿಗಲಿವೆ ಸರ್ಕಾರದ ಈ ಸೇವೆಗಳು..!

‘ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ರೈತರ ಹಿತಾಸಕ್ತಿಗಿಂತಲೂ, ತಮ್ಮ ಸ್ವಾರ್ಥ ಮೈತ್ರಿಕೂಟದ ಸ್ನೇಹಿತರ ಹಿತಾಸಕ್ತಿಯನ್ನು ಕಾಪಾಡುವುದೇ ಮುಖ್ಯವಾಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News