ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ: ಬಿಜೆಪಿ ಆರೋಪ

ಹಲವಾರು ವಿಧ್ವಂಸಕ ಕೃತ್ಯ ನಡೆಸಿ, ಅಮಾಯಕರನ್ನು ಬಲಿ ಪಡೆದ ಭಯೋತ್ಪಾದಕ ಮಸೂದ್ ಅಜರ್‌ನನ್ನು, ರಾಹುಲ್ ಗಾಂಧಿ ಮಸೂದ್"ಜೀ" ಎಂದು ಕರೆಯುವ ಮೂಲಕ ಉಗ್ರರ ಬಗ್ಗೆ ತಮಗಿರುವ ಆಂತರಿಕ ಪ್ರೇಮವನ್ನು ವ್ಯಕ್ತಪಡಿಸಿದ್ದರು ಎಂದು ಬಿಜೆಪಿ ಟ್ವೀಟ್ ಮಾಡಿದೆ.

Written by - Puttaraj K Alur | Last Updated : Jul 23, 2023, 04:21 PM IST
  • ತನ್ನ ಸ್ವಾರ್ಥಕ್ಕೆ ದೇಶದ ಭದ್ರತೆಯ ವಿಷಯದಲ್ಲಿ ರಾಜೀಯಾಗುವ ವಿಶ್ವದ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್
  • ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ
  • ಸಕಲರಿಗೂ ನೆಮ್ಮದಿಯ ತಾಣವಾಗಿದ್ದ ಬೆಂಗಳೂರು ಈಗ ಭಯೋತ್ಪಾದಕರ ಬೀಡಾಗುತ್ತಿದೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ: ಬಿಜೆಪಿ ಆರೋಪ title=
ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ತನ್ನ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಧಿಸಲು ದೇಶದ ಭದ್ರತೆಯ ವಿಷಯದಲ್ಲಿ ರಾಜೀಯಾಗುವ ವಿಶ್ವದ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ. ಸಕಲರಿಗೂ ನೆಮ್ಮದಿಯ ತಾಣವಾಗಿದ್ದ ಬೆಂಗಳೂರು ಈಗ ಭಯೋತ್ಪಾದಕರ ಬೀಡಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಈ ಬಗ್ಗೆ ಭಾನುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಈ ಬಗ್ಗೆ ತುಘಲಕ್ ಸರ್ಕಾರದ ಪ್ರತಿನಿಧಿಗಳು, ಬಂಧನವಾದ ಉಗ್ರರ ಸಮಗ್ರ ತನಿಖೆಗೂ ಮುನ್ನ ಉಗ್ರರಿಗೆ ಕ್ಲೀನ್‍ಚಿಟ್ ನೀಡಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಉಗ್ರಗಾಮಿಗಳ ಪರ ತನ್ನ ಮೃದು ಧೋರಣೆಯನ್ನು ತೋರುತ್ತಾ ಬಂದಿದೆ. ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗುವ ಭಯೋತ್ಪಾದಕರನ್ನು ಪೊಲೀಸರು ಬಂಧಿಸಿದರೇ, ಅವರಿಗೆ ಕಾನೂನು ನೆರವನ್ನು ಒದಗಿಸಲು ಕಾಂಗ್ರೆಸ್‌ನ ಲೀಗಲ್ ಸೆಲ್ ಸದಾ ಸಿದ್ಧವಾಗಿರುತ್ತದೆ’ ಎಂದು ಟೀಕಿಸಿದೆ.

ಇದನ್ನೂ ಓದಿ: 90ರ ಇಳಿ ವಯಸ್ಸಲ್ಲೂ ಜಿಮ್ ಮಾಡುವ ಅರಿಂಗ್ಟನ್‌ ಗಿನ್ನೆಸ್‌ ದಾಖಲು

‘ಭಯೋತ್ಪಾದಕ ಕೃತ್ಯಗಳಿಂದ ಸೈನಿಕರು, ದೇಶದ ಜನಸಾಮಾನ್ಯರು ಬಲಿಯಾದರೇ ಅದಕ್ಕೆ ಸಂತಾಪ ಸೂಚಿಸದ ಕಾಂಗ್ರೆಸ್, ಒಂದು ವೇಳೆ ಭಯೋತ್ಪಾದಕನೊಬ್ಬ ಪೊಲೀಸರ ಗುಂಡಿಗೆ ಬಲಿಯಾದರೇ ಅದಕ್ಕೆ ಕಣ್ಣೀರು ಸುರಿಸುತ್ತದೆ. ಹಲವಾರು ವಿಧ್ವಂಸಕ ಕೃತ್ಯ ನಡೆಸಿ, ಅಮಾಯಕರನ್ನು ಬಲಿ ಪಡೆದ ಭಯೋತ್ಪಾದಕ ಮಸೂದ್ ಅಜರ್‌ನನ್ನು, ರಾಹುಲ್ ಗಾಂಧಿ ಮಸೂದ್"ಜೀ" ಎಂದು ಕರೆಯುವ ಮೂಲಕ ಉಗ್ರರ ಬಗ್ಗೆ ತಮಗಿರುವ ಆಂತರಿಕ ಪ್ರೇಮವನ್ನು ವ್ಯಕ್ತಪಡಿಸಿದ್ದರು’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಈ ಹಿಂದೆ ಭಯೋತ್ಪಾದಕರ ವಿರುದ್ಧ ನಡೆದ ಬಾಟ್ಲಾ ಹೌಸ್ ಎನ್‍ಕೌಂಟರ್, ಇಶ್ರತ್ ಜಹಾನ್ ಎನ್‌ಕೌಂಟರ್‌ಗಳನ್ನು ನಕಲಿ ಎಂದು ಆರೋಪಿಸಿ ಕಾಂಗ್ರೆಸ್ ಬಹಿರಂಗವಾಗಿ ಭಯೋತ್ಪಾದಕರ ಹಾಗೂ ಆ ಸಂಘಟನೆಗಳ ಪರ ನಿಂತಿತ್ತು. ಅದೇ ರೀತಿ ಉಗ್ರಗಾಮಿಗಳಿಗೆ ಸಿಂಹಸ್ವಪ್ನವಾಗಿದ್ದ ಪೋಟಾ ಕಾಯಿದೆಯನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್, ಭಯೋತ್ಪಾದಕರಿಗೆ ನೈತಿಕ ಬಲ ನೀಡಿತ್ತು. ದೇಶದ ರಕ್ಷಣಾ ವ್ಯವಸ್ಥೆಯನ್ನು ಬುಡಮೇಲು ಮಾಡಿದ್ದ 26/11 ಮುಂಬೈ ದಾಳಿಯ ಸಂದರ್ಭದಲ್ಲಿ ದೇಶವೇ ಒಟ್ಟಾಗಿ ನಿಲ್ಲಬೇಕಿತ್ತು. ಆದರೆ ಅದಕ್ಕೆ 'ಹಿಂದೂ ಭಯೋತ್ಪಾದಕರ ಕೃತ್ಯ' ಎಂಬ ಸುಳ್ಳು ತೇಲಿ ಬಿಟ್ಟು, ನೈಜ ಉಗ್ರಗಾಮಿಗಳ ಕೃತ್ಯವನ್ನು ಮರೆಮಾಚಲು ಕಾಂಗ್ರೆಸ್ ಯತ್ನಿಸಿತ್ತು. ಈ ರೀತಿಯಾಗಿ ನಮ್ಮ ಸೈನ್ಯದ ಹಾಗೂ ಪೊಲೀಸರ ಆತ್ಮ ಬಲವನ್ನು ಕುಗ್ಗಿಸುವ ಕೀಳು ಪ್ರಯತ್ನವನ್ನು ಕಾಂಗ್ರೆಸ್ ದಶಕಗಳಿಂದ ಮಾಡುತ್ತಿದೆ’ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

‘ಭಯೋತ್ಪಾದಕ ಸಂಘಟನೆಗಳು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ತಮ್ಮ ಸ್ಲೀಪರ್ ಸೆಲ್‌ಗಳನ್ನು ಜಾಗೃತಗೊಳಿಸುತ್ತವೆ, ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸುತ್ತವೆ. ಇದೆಲ್ಲವೂ ಕಾಂಗ್ರೆಸ್ ಪಕ್ಷ ಉಗ್ರರ ಮೇಲೆ ಹೊಂದಿರುವ ಮೃದು ಧೋರಣೆಯ ಪ್ರತೀಕವಾಗಿದೆ. ಈಗ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೊಟ್ಟಿರುವ ಹೇಳಿಕೆಯೂ ಇದರದೇ ಭಾಗ, ತನ್ನ ಓಲೈಕೆ ರಾಜಕಾರಣಕ್ಕಾಗಿ, ಕಾಂಗ್ರೆಸ್ ಪಕ್ಷ ದೇಶದ ಭದ್ರತೆಯ ವಿಚಾರದಲ್ಲಿ ರಾಜೀಯಾಗುವಂತಹ ಧೋರಣೆಯನ್ನು ಅನುಸರಿಸುತ್ತಿರುವುದು ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ’ವೆಂದು ಬಿಜೆಪಿ ಕುಟುಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News