ಗುರು ಮೋದಿಯಂತೆ ದಿಕ್ಕು ತಪ್ಪಿಸುವಲ್ಲಿ ಪ್ರತಾಪ್ ಸಿಂಹ ‘ಬ್ರಿಲಿಯಂಟ್ ಪೊಲಿಟಿಷಿಯನ್’..!

ಸಂಸದ ಪ್ರತಾಪ್ ಸಿಂಹ ಅವರೇ, ತಮ್ಮ ಪ್ರತಾಪ ಬ್ಯಾರಿಕೆಡ್ ಹಾರುವುದರಲ್ಲಿ ಅಷ್ಟೇ ಅಲ್ಲ, ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ. ನಿಮ್ಮ ಸಹೋದರ ಜಮೀನು ಗುತ್ತಿಗೆ ಪಡೆದಿದ್ದು ನಿಜವಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Written by - Puttaraj K Alur | Last Updated : Jan 1, 2024, 08:29 PM IST
  • ಮೋದಿಯಂತೆ ವಿಷಯಾಂತರ ಮಾಡುವಲ್ಲಿ, ದಿಕ್ಕು ತಪ್ಪಿಸುವಲ್ಲಿ ಪ್ರತಾಪ್ ಸಿಂಹ ‘ಬ್ರಿಲಿಯಂಟ್ ಪೊಲಿಟಿಷಿಯನ್’
  • ಪ್ರತಾಪ್ ಸಿಂಹ ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ
  • ಮರಗಳನ್ನು ಕಡಿದು ಸಾಗಿಸಲು ಜೆಸಿಬಿ, ಹಿಟಾಚಿಗಳನ್ನು ಕಳಿಸಿದ್ದು ನಿಮ್ಮ ತಮ್ಮನೇ ಅಲ್ಲವೇ?
ಗುರು ಮೋದಿಯಂತೆ ದಿಕ್ಕು ತಪ್ಪಿಸುವಲ್ಲಿ ಪ್ರತಾಪ್ ಸಿಂಹ ‘ಬ್ರಿಲಿಯಂಟ್ ಪೊಲಿಟಿಷಿಯನ್’..! title=
ಪ್ರತಾಪ್ ಸಿಂಹ ಕೂಡ ‘ಬ್ರಿಲಿಯಂಟ್ ಪೊಲಿಟಿಷಿಯನ್’!

ಬೆಂಗಳೂರು: ಪಲಾಯನವಾದಿ ಪ್ರತಾಪ್ ಸಿಂಹ ಅವರೇ ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ ಎಂದು ಕೇಳಿದರೆ ಚಾಮುಂಡೇಶ್ವರಿಗೆ ಗೊತ್ತು ಅಂತೀರಿ, ನಿಮ್ಮ ತಮ್ಮ ಕೋಟ್ಯಂತರ ರೂಪಾಯಿ ಬೆಲೆಬಾಳುವ ಮರಗಳನ್ನು ಕಡಿದಿದ್ದೇಕೆ ಎಂದು ಕೇಳಿದರೆ ಡಾ.ಯತೀಂದ್ರ ಸಿದ್ದರಾಮಯ್ಯರ ಕಡೆ ಕೈ ತೋರಿಸುತ್ತೀರಿ. ತಮ್ಮ ಗುರು ಮೋದಿಯವರಂತೆ ವಿಷಯಾಂತರ ಮಾಡುವಲ್ಲಿ, ದಿಕ್ಕು ತಪ್ಪಿಸುವಲ್ಲಿ ತಾವೂ ಕೂಡ “ಬ್ರಿಲಿಯಂಟ್ ಪೊಲಿಟಿಷಿಯನ್” ಅಲ್ಲವೇ ಪ್ರತಾಪ್ ಸಿಂಹ ಅವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ನಂದಗೊಂಡನ ಹಳ್ಳಿಯಲ್ಲಿ 125ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹರ ಸಹೋದರ ವಿಕ್ರಂ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಇದನ್ನೂ ಓದಿ: ‘ಫೋಟೋಶೂಟ್’ ಮಾಡಿಸ್ಬೇಡ ಎಂದ ಪೋಷಕರು: ವಿದ್ಯಾರ್ಥಿನಿ ಆತ್ಮಹತ್ಯೆ..!

‘ಪ್ರತಾಪ್ ಸಿಂಹ ಅವರೇ, ತಮ್ಮ ಪ್ರತಾಪ ಬ್ಯಾರಿಕೆಡ್ ಹಾರುವುದರಲ್ಲಿ ಅಷ್ಟೇ ಅಲ್ಲ, ವಾಸ್ತವಿಕ ಪ್ರಶ್ನೆಗಳಿಗೆ ವಿಷಯಾಂತರ ಮಾಡದೆ ನೇರವಾಗಿ ಉತ್ತರಿಸುವುದರಲ್ಲೂ ನಿಮ್ಮ ಪ್ರತಾಪ ತೋರಿಸಿ. ನಿಮ್ಮ ಸಹೋದರ ಜಮೀನು ಗುತ್ತಿಗೆ ಪಡೆದಿದ್ದು ನಿಜವಲ್ಲವೇ? ನಿಜಕ್ಕೂ ಶುಂಠಿ ಬೆಳೆಯಲು ಗುತ್ತಿಗೆ ಪಡೆದಿದ್ದೋ ಅಥವಾ ಅಲ್ಲಿದ್ದ ಬೆಲೆಬಾಳುವ ಮರಗಳನ್ನು ಲಪಟಾಯಿಸಲು ಗುತ್ತಿಗೆ ಪಡೆದಿದ್ದೋ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಮರಗಳನ್ನು ಕಡಿದು ಸಾಗಿಸಲು ಜೆಸಿಬಿ, ಹಿಟಾಚಿಗಳನ್ನು ಕಳಿಸಿದ್ದು ನಿಮ್ಮ ತಮ್ಮನೇ ಅಲ್ಲವೇ? ಅರಣ್ಯ ಭೂಮಿಯಾಗಲಿ, ಖಾಸಗಿ ಭೂಮಿಯಾಗಲಿ ಅನುಮತಿ ಪಡೆಯದೆ ಮರಗಳನ್ನು ಕಡಿಯುವುದು ಕಾನೂನು ಉಲ್ಲಂಘನೆ ಎಂಬ ಸಾಮಾನ್ಯ ಅರಿವು ಇರಲಿಲ್ಲವೇ? ಕಾನೂನು ಉಲ್ಲಂಘಿಸಿದ್ದರೂ ಪ್ರತಾಪ್ ಸಿಂಹನ ತಮ್ಮ ಎಂದು ಸುಮ್ಮನಿರಬೇಕಿತ್ತೆ?’ ಅಂತಾ ಪ್ರಶ್ನಿಸಿದೆ.

ಇದನ್ನೂ ಓದಿ: ವರ್ಷದ ಕೊನೆ ದಿನ ದಾಖಲೆಯ ಮದ್ಯ ಮಾರಾಟ: ಒಂದೇ ದಿನದಲ್ಲಿ 18.85 ಕೋಟಿ ರೂ. ವಹಿವಾಟು

‘"ನಾ ಖವುಂಗಾ, ನಾ ಖಾನೆದುಂಗಾ" ಎನ್ನುವ ಘೋಷವಾಕ್ಯದ ನೈಜ ಅರ್ಥ ಈಗ ಹೊರಬರುತ್ತಿದೆ. ಅನ್ನಭಾಗ್ಯದ ಅಕ್ಕಿ ಕದ್ದು ಬಡವರಿಗೆ "ನಾ ಖಾನೆದುಂಗಾ" ಎನ್ನುತ್ತಿದೆಯೇ ಬಿಜೆಪಿ? ಬಿಜೆಪಿ ನಾಯಕರು ತಮ್ಮ-ಅಣ್ಣತಮ್ಮಂದಿರಿಗೆ ತಿನ್ನಿಸಲು ಹೊರಟಿರುವುದು ಪ್ರತಾಪ್ ಸಿಂಹ ಹಾಗೂ ಮಣಿಕಂಠ ರಾಥೋಡ್ ಸಹೋದರರ ಕಳ್ಳತನಗಳು ಸಾಕ್ಷಿ ಹೇಳುತ್ತಿವೆ. ಅಧಿಕಾರವಿದ್ದಾಗ 40% ಕಮಿಷನ್ ಲೂಟಿ, 40 ಸಾವಿರ ಕೋಟಿ ರೂ. ಲೂಟಿಯಲ್ಲಿ ತೊಡಗಿದ್ದ ಬಿಜೆಪಿಗರು ಈಗ ಬ್ರದರ್ಸ್‌ಗಳನ್ನು ಅಖಾಡಕ್ಕೆ ಇಳಿಸಿದ್ದಾರೆ! ಪ್ರತಾಪ್ ಸಿಂಹನ ಬ್ರದರ್ರು ಮರಗಳ್ಳತನಕ್ಕೆ, ಮಣಿಕಂಠ ರಾಥೋಡ್‌ನ ಬ್ರದರ್ರು ಅಕ್ಕಿ ಕಳ್ಳತನಕ್ಕೆ! ಡಿಯರ್ ಬಿಜೆಪಿ, ನಿಮ್ಮ ಇನ್ಯಾವ ನಾಯಕರು ಬ್ರದರ್‌ಗಳ ಮೂಲಕ ಇನ್ಯಾವ ಕಳ್ಳದಂಧೆಯಲ್ಲಿ ತೊಡಗಿದ್ದಾರೆ?’ ಎಂದು ಕಾಂಗ್ರೆಸ್ ಕುಟುಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News