ಅಧಿಕಾರವಿಲ್ಲದ ಬಿಜೆಪಿ ನಾಯಕರು ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. 

Written by - Puttaraj K Alur | Last Updated : Aug 21, 2023, 06:43 PM IST
  • ಅಧಿಕಾರವಿಲ್ಲದ ರಾಜ್ಯ ಬಿಜೆಪಿ ಈಗ ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದೆಯೇ?
  • ಬಿಜೆಪಿಯಲ್ಲಿ ಆಂತರಿಕ ಕಲಹ ಮುಗಿಲು ಮುಟ್ಟಿದ್ದು, ಪಕ್ಷವನ್ನು ಮುನ್ನಡೆಸಲಾಗದ ಅಧ್ಯಕ್ಷ ನಾಪತ್ತೆಯಾಗಿದ್ದಾರೆ
  • ವಾರಕ್ಕೊಮ್ಮೆ ಬರುತ್ತಿದ್ದ ಉಸ್ತುವಾರಿ ಅರುಣ್ ಸಿಂಗ್ ಮತ್ತು ತಿಂಗಳಿಗೊಮ್ಮೆ ಬರುತ್ತಿದ್ದ ಜೆಪಿ ನಡ್ಡಾ ನಾಪತ್ತೆ
ಅಧಿಕಾರವಿಲ್ಲದ ಬಿಜೆಪಿ ನಾಯಕರು ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದ್ದಾರೆ: ಕಾಂಗ್ರೆಸ್ ವ್ಯಂಗ್ಯ  title=
ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ!

ಬೆಂಗಳೂರು: ಅಧಿಕಾರವಿಲ್ಲದ ರಾಜ್ಯ ಬಿಜೆಪಿ ಈಗ ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದೆಯೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ. #BJPvsBJP ಹ್ಯಾಶ್‍ಟ್ಯಾಗ್ ಬಳಸಿ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ಈಗ ಅನಾಥ ಶಿಶುವಾಗಿದೆ’ ಎಂದು ಟೀಕಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.  ‘ಬಿಜೆಪಿಯಲ್ಲಿ ಈಗ ಆಂತರಿಕ ಕಲಹ ಮುಗಿಲು ಮುಟ್ಟಿದೆ, ಪಕ್ಷವನ್ನು ಮುನ್ನಡೆಸಲಾಗದ ಅಧ್ಯಕ್ಷ ನಾಪತ್ತೆಯಾಗಿದ್ದಾರೆ, ಹೈಕಮಾಂಡ್ ಕರ್ನಾಟಕದ ಬಿಜೆಪಿಯತ್ತ ತಿರುಗಿಯೂ ನೋಡುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಉಸ್ತುವಾರಿ ಅರುಣ್ ಸಿಂಗ್ ನಾಪತ್ತೆ, ತಿಂಗಳಿಗೊಮ್ಮೆ ಬರುತ್ತಿದ್ದ ಜೆಪಿ ನಡ್ಡಾ ನಾಪತ್ತೆ’ಯಾಗಿದ್ದಾರೆ’ ಎಂದು ಕುಟುಕಿದೆ.

ಇದನ್ನೂ ಓದಿ: ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ

ಮುಂದುವರೆದು ‘ಚುನಾವಣೆಗಾಗಿ ಬರುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿಯವರೂ ಕಣ್ಮರೆಯಾಗಿದ್ದಾರೆ. ರಾಜ್ಯದಲ್ಲಿ ಅಧಿಕಾರವಿದ್ದಾಗ ಇವರೆಲ್ಲಾ ATMನಲ್ಲಿನ ಹಣ ಡ್ರಾ ಮಾಡಿಕೊಳ್ಳಲು ಬರುತ್ತಿದ್ದರಾ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಮುಖಂಡರನ್ನು ಉಚ್ಛಾಟಿಸುವ ಮೂಲಕ ಬಿಜೆಪಿ ತನ್ನ ಆಂತರಿಕ ಕಲಹ ಇದೆ ಎಂಬ ಸರ್ಟಿಫಿಕೇಟಿಗೆ ಅಧಿಕೃತವಾಗಿ ಮುದ್ರೆ ಒತ್ತಿದೆ. ಡಿಯರ್ ಬಿಜೆಪಿ, ಇದೇ ರೀತಿ ಪ್ರಭು ಚೌಹಾಣ್‍ರಿಗೆ ಕಾಟ ಕೊಡುತ್ತಿರುವ ಭಗವಂತ ಖೂಬಾರನ್ನು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರ ಮೇಲೆ ಆರೋಪಿಸಿದ್ದ ಸಂಸದ ಪ್ರತಾಪ್ ಸಿಂಹರನ್ನು, ಬಿ.ಎಸ್.ಯಡಿಯೂರಪ್ಪರ ಮೇಲೆ ಕಿಡಿಕಾರಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಉಚ್ಛಾಟನೆ ಮಾಡುವಿರಾ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜಿ.ಟಿ.ದೇವೆಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ

‘ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣದ ಬಿಲ್‍ಗಳನ್ನು ತಡೆಹಿಡಿದಿದ್ದು ಇದೇ ಕಾರಣಕ್ಕೆ! ಅಸ್ತಿತ್ವವಿಲ್ಲದ ಕಾಮಗಾರಿಗೂ ಬಿಲ್ ಬಿಡುಗಡೆಗೆ ಕೇಳುತ್ತಿದ್ದಾರೆ. ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರನ್ನು ತನಿಖೆ ಮಾಡಿದಾಗ ಹೊರಬಂದ ಸತ್ಯ ಇದು. ಸರ್ಕಾರಕ್ಕೆ ಮುಜುಗರ ತರಲು ಗುತ್ತಿಗೆದಾರರನ್ನು ಮುಂದಿಟ್ಟು ಆಟ ಆಡುತ್ತಿರುವ ಬಿಜೆಪಿ ಷಡ್ಯಂತ್ರ ರಾಜ್ಯದ ಜನರೆದುರು ಬೆತ್ತಲಾಗಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News