ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಇದೀಗ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ನಡುವೆ ಸಮರ ನಡೆಯುತ್ತಿದೆ. ಇದೇ ವಿಚಾರವಾಗಿ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲ’ವೆಂದು ವ್ಯಂಗ್ಯವಾಡಿದೆ.

‘ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಸತ್ಯ ಏನೆಂದರೆ ಮೈತ್ರಿ ಇರುವುದು ಅಮಿತ್ ಶಾ ಹಾಗೂ ಎಚ್.ಡಿ.ಕುಮಾರಸ್ವಾಮಿ ನಡುವೆ ಹೊರತು ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಲ್ಲ! ಇತ್ತ ಬಿಜೆಪಿ ನಾಯಕರಿಗೂ ಮೈತ್ರಿ ಬಗ್ಗೆ ಅಸಮಧಾನ, ಅತ್ತ ಒರಿಜಿನಲ್ ಜೆಡಿಎಸ್‍ನವರಿಗೂ ಅಸಮಧಾನ. ಇಂತಹದ್ದನ್ನು ಮೈತ್ರಿ ಎನ್ನಲಾದೀತೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ವಿಚಾರ ಚರ್ಚೆ

‘ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಪಕ್ಷದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಎಂದು ಕುಮಾರಸ್ವಾಮಿಯವರಿಗೆ ನೀವು "ಲೆಕ್ಕಕ್ಕಿಲ್ಲ" ಎಂದು ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಕುಮಾರಸ್ವಾಮಿಯವರದ್ದು ಅಬ್ಬೇಪಾರಿ ಸ್ಥಿತಿಗಿಂತ ಭಿನ್ನವಾಗಿಲ್ಲ!’ವೆಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

‘ಕುಮಾರಸ್ವಾಮಿಯವರು ರಾಜಕೀಯ ತೀರ್ಮಾನ ತೆಗೆದುಕೊಳ್ಳಲು ಜೆಡಿಎಸ್ ಪಕ್ಷದ ಯಾವುದೇ ಪದಾಧಿಕಾರಿ ಅಲ್ಲ, ಅಪ್ಪನ ಹೆಸರಿನಲ್ಲಿ ನಡೆಸುವ ದರ್ಬಾರು!, ಪ್ರಶ್ನೆ ಮಾಡಿದವರನ್ನ ಹೊರ ದಬ್ಬುವ ಚಾಳಿ! ಮತ್ತು ರಾಜ್ಯ ರಾಜಕೀಯ ವ್ಯಾಪಾರದ ದಲ್ಲಾಳಿ! ಕುಮಾರಸ್ವಾಮಿಯವರ ಮಾತುಗಳಿಗೆ, ತೀರ್ಮಾನಗಳಿಗೆ ಅವರದ್ದೇ ಪಕ್ಷದಲ್ಲಿ ನಯಾಪೈಸೆ ಕಿಮ್ಮತ್ತಿಲ್ಲ. ಹೀಗಿರುವಾಗ ಕಾಂಗ್ರೆಸ್ ಪಕ್ಷ ಅವರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಲು ಸಾಧ್ಯವೇ?!’ ಎಂದು ಟೀಕಿಸಿದೆ.

ಇದನ್ನೂ ಓದಿ: ಬಿಬಿಎಂಪಿ ನಿರ್ಧಾರಕ್ಕೆ ಅಕ್ಕ ಪಕ್ಕದ ನಗರಗಳ ಜನರಿಂದ ಆಕ್ರೋಶ

‘ಅಧಿಕಾರವಿಲ್ಲದ, ಲೂಟಿಯ ಅವಕಾಶ ವಂಚಿತ ಬಿಜೆಪಿ ಜೆಡಿಎಸ್ ನಾಯಕರು ಮತಿಭ್ರಮಣೆಯಾದಂತೆ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸಂಬಂಧವೇ ಇಲ್ಲದ ಗುತ್ತಿಗೆದಾರನ ಮನೆಯಲ್ಲಿ ಹಣವಿದ್ದರೆ ಕಾಂಗ್ರೆಸ್ ಗೆ ಸಂಬಂಧ ಕಟ್ಟುವ ಬಿಜೆಪಿಗರು ಚಿಲುಮೆ ಪ್ರಕರಣದಲ್ಲಿ ಆಗಿನ ಹಾಲಿ ಸಚಿವರೊಬ್ಬರಿಗೆ ಸಂಬಂಧಿಸಿದ ದಾಖಲೆಗಳು ನೇರಾನೇರಾ ಸಾಕ್ಷಿಯಾಗಿ ಸಿಕ್ಕಿದ್ದವು. ಚಿಲುಮೆ ಹಗರಣದಲ್ಲಿ ಇಡೀ ಬಿಜೆಪಿ ಕೈವಾಡವಿರುವುದನ್ನು ಬಿಜೆಪಿ ಬಹಿರಂಗವಾಗಿ ಒಪ್ಪಿಕೊಳ್ಳುವುದೇ??’ ಎಂದು ಕಾಂಗ್ರೆಸ್ ಕುಟುಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Section: 
English Title: 
Karnataka Congress Slams Ex CM HD Kumaraswamy Over BJP-JDS Alliance
News Source: 
Home Title: 

ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ

ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ
Caption: 
ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಟೀಕೆ!
Yes
Is Blog?: 
No
Facebook Instant Article: 
Yes
Highlights: 

ಮೈತ್ರಿ ಇರುವುದು ಅಮಿತ್ ಶಾ-ಕುಮಾರಸ್ವಾಮಿ ನಡುವೆ ಹೊರತು ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಲ್ಲ!

ಇತ್ತ ಬಿಜೆಪಿ ನಾಯಕರಿಗೂ ಮೈತ್ರಿ ಬಗ್ಗೆ ಅಸಮಧಾನ, ಅತ್ತ ಒರಿಜಿನಲ್ ಜೆಡಿಎಸ್‍ನವರಿಗೂ ಅಸಮಧಾನ

ಅಧಿಕಾರವಿಲ್ಲದ, ಲೂಟಿಯ ಅವಕಾಶ ವಂಚಿತ ಬಿಜೆಪಿ-ಜೆಡಿಎಸ್ ನಾಯಕರು ಮತಿಭ್ರಮಣೆಯಾದಂತೆ ವರ್ತಿಸುತ್ತಿದ್ದಾರೆ

Mobile Title: 
ಕುಮಾರಸ್ವಾಮಿ ಮಾತಿಗೆ ಅವರದ ಪಕ್ಷದಲ್ಲೇ ನಯಾಪೈಸೆ ಕಿಮ್ಮತ್ತಿಲ್ಲ: ಕಾಂಗ್ರೆಸ್ ಟೀಕೆ
Puttaraj K Alur
Publish Later: 
No
Publish At: 
Tuesday, October 17, 2023 - 15:03
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
1
Is Breaking News: 
No
Word Count: 
326

Trending News