ಬಿಜೆಪಿ-ಜೆಡಿಎಸ್ ಮೈತ್ರಿ: ಆತ್ಮವಂಚನೆಯ ಕೆಲಸಕ್ಕಿಂತ ಪಕ್ಷ ವಿಸರ್ಜಿಸುವುದೇ ಉತ್ತಮ!- ಕಾಂಗ್ರೆಸ್

BJP-JDS alliance: ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಎಚ್.ಡಿ.ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನು ವಿಸರ್ಜಿಸಿವುದೇ ಉತ್ತಮ!ವೆಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Sep 22, 2023, 04:31 PM IST
  • ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಟೀಕೆ
  • ಹೈಕಮಾಂಡ್ ನಾಯಕರು ಕುಮಾರಸ್ವಾಮಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ!
  • ನಾವು ಹೇಳಿದಂತೆಯೇ ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಈಗ ಸಾಬೀತು ಮಾಡುತ್ತಿದ್ದಾರೆ
ಬಿಜೆಪಿ-ಜೆಡಿಎಸ್ ಮೈತ್ರಿ: ಆತ್ಮವಂಚನೆಯ ಕೆಲಸಕ್ಕಿಂತ ಪಕ್ಷ ವಿಸರ್ಜಿಸುವುದೇ ಉತ್ತಮ!- ಕಾಂಗ್ರೆಸ್ title=
ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಕಾಂಗ್ರೆಸ್ ಟೀಕೆ!

ಬೆಂಗಳೂರು: ಮುಂಬರುವ 2014ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬಗ್ಗೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ!’ ಎಂದು ಕುಟುಕಿದೆ.

‘ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್ ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಎಚ್.ಡಿ.ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನು ವಿಸರ್ಜಿಸಿವುದೇ ಉತ್ತಮ!’ವೆಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಕಾವೇರಿ ಅನ್ಯಾಯ ವಿರುದ್ಧ ಇಂದು ರಾಜ್ಯದಾದ್ಯಂತ ಪ್ರತಿಭಟನೆ

ವಂಚಕರು ಮೋದಿ ಹೆಸರನ್ನೇ ಬಳಸುವುದೇಕೆ?

‘ವಂಚಕರಿಗೆ, ಭ್ರಷ್ಟಾಚಾರಿಗಳಿಗೆ, ಅತ್ಯಾಚಾರಿಗಳಿಗೆ ಮೋದಿ ಹೆಸರೇ ಪ್ರಿಯವಾಗುವುದೇಕೆ? ವಂಚಕರು ಮೋದಿ ಹೆಸರನ್ನೇ ಬಳಸುವುದೇಕೆ? ಫ್ರಿಡಂ 251 ಮೊಬೈಲ್ ವಂಚಕರೂ ಮೋದಿ ಹೆಸರನ್ನೇ ಬಳಸಿ ಟೋಪಿ ಹಾಕಿದ್ದರು. ಟಿಕೆಟ್ ಹಗರಣದ ಸ್ವಾಮಿಯೂ ಮೋದಿ ಹೆಸರನ್ನೇ ಬಳಸಿ ಟೋಪಿ ಹಾಕಿದ್ದಾನೆ. ಮೋದಿ ಹೆಸರು ಎಂದರೆ ವಂಚನೆಗೆ ಸಿಗುವ ಲೈಸೆನ್ಸ್ ಆಗಿದೆಯೇ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಿಮ್ಮ ಹೆಸರೂ ಇದೆಯೇ ಬಬೊಮ್ಮಾಯಿಯವರೇ?

‘ಟಿಕೆಟ್ ಹಗರಣದ ಪ್ರಮುಖ ಆರೋಪಿ ಹಾಲಸ್ವಾಮಿ ಬಿಜೆಪಿಯ ಬಹುತೇಕೆ ನಾಯಕರೊಂದಿಗೆ ಆತ್ಮೀಯತೆ ಹೊಂದಿದ್ದಾನೆ. ಸ್ವಾಮಿಯ ಬಂಧನವಾದರೆ ದೊಡ್ಡವರ ಹೆಸರು ಹೊರಬರುತ್ತವೆ ಎಂದು A1 ಆರೋಪಿ ಚೈತ್ರಾ ಕುಂದಾಪುರ ಹೇಳಿದ್ದಳು. ಆ ದೊಡ್ಡವರ ಹೆಸರಲ್ಲಿ ನಿಮ್ಮ ಹೆಸರೂ ಇದೆಯೇ ಬಸವರಾಜ ಬೊಮ್ಮಾಯಿ ಅವರೇ? ವಂಚಕರು, ಭ್ರಷ್ಟರು ಬಿಜೆಪಿಗರೊಂದಿಗೆ ಹೆಚ್ಚಿನ ಆತ್ಮೀಯ ಸಂಬಂಧ ಹೊಂದಿರುವುದೇಕೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಲೈಸೆನ್ಸ್ ಇಲ್ಲದೆ ರಸ್ತೆಗೆ ಇಳಿದಿದ್ದ ವಾಹನ ಮಾಲೀಕರಿಗೆ ಶಾಕ್!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News