ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ಟೀಕಿಸಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಉದ್ಯೋಗ ಖಾತ್ರಿ ಕೊಟ್ಟಾಗ ದೇಶ ದಿವಳಿಯಾಗುತ್ತದೆ ಎಂದಿದ್ದರು. ಅನ್ನಭಾಗ್ಯ ಕೊಟ್ಟಾಗ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಆದರೆ ದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ! ಜನರಿಗೆ ನೀಡುವ ಹಣ, ಭೂಮಿಗೆ ಬಿತ್ತುವ ಬೀಜ ವ್ಯರ್ಥವಾಗುವುದಿಲ್ಲ, ಬೆಳೆದು ಮರವಾಗಿ ಅರ್ಥವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ’ ಎಂದು ಹೇಳಿದೆ.
‘ಬದಲಾಗುವ ಬಿಜೆಪಿ ವರಸೆಗಳು. ಗ್ಯಾರಂಟಿ ಘೋಷಣೆ ಮಾಡಿದಾಗ - ಹಣ ಹೇಗೆ ಹೊಂದಿಸುತ್ತಾರೆ, ಜಾರಿ ಸಾಧ್ಯವಿಲ್ಲ, ಆರ್ಥಿಕತೆಯ ವಿರೋಧಿ. ಗ್ಯಾರಂಟಿ ಜಾರಿಯಾದಾಗ - ಕಂಡೀಷನ್ ಹಾಕ್ತಿದಾರೆ, ಎಲ್ಲರಿಗೂ ಕಳ್ಳೆಪುರಿ ಹಂಚಿದ ಹಾಗೆ ಹಂಚಬೇಕು! ಯಾವ ನಿಲುವು ತಾಳಬೇಕು, ಹೇಗೆ ವಿರೋಧಿಸಬೇಕು ಎಂದು ಗೊಂದಲದಲ್ಲಿದೆ ಬಿಜೆಪಿ. ಕನಿಷ್ಠ ಸ್ಪಷ್ಟವಾಗಿ ವಿರೋಧಿಸಲಾದರೂ ಒಬ್ಬ ನಾಯಕನನ್ನು ಆಯ್ಕೆ ಮಾಡಿಕೊಳ್ಳಿ ಬಿಜೆಪಿ’ ಎಂದು ಕಾಂಗ್ರೆಸ್ ಟೀಕಿಸಿದೆ.
ಬದಲಾಗುವ ಬಿಜೆಪಿ ವರಸೆಗಳು,
ಗ್ಯಾರಂಟಿ ಘೋಷಣೆ ಮಾಡಿದಾಗ - ಹಣ ಹೇಗೆ ಹೊಂದಿಸುತ್ತಾರೆ, ಜಾರಿ ಸಾಧ್ಯವಿಲ್ಲ, ಆರ್ಥಿಕತೆಯ ವಿರೋಧಿ.
ಗ್ಯಾರಂಟಿ ಜಾರಿಯಾದಾಗ - ಕಂಡೀಷನ್ ಹಾಕ್ತಿದಾರೆ, ಎಲ್ಲರಿಗೂ ಕಳ್ಳೆಪುರಿ ಹಂಚಿದ ಹಾಗೆ ಹಂಚಬೇಕು!
ಯಾವ ನಿಲುವು ತಾಳಬೇಕು, ಹೇಗೆ ವಿರೋಧಿಸಬೇಕು ಎಂದು ಗೊಂದಲದಲ್ಲಿದೆ ಬಿಜೆಪಿ.
ಕನಿಷ್ಠ ಸ್ಪಷ್ಟವಾಗಿ…
— Karnataka Congress (@INCKarnataka) June 3, 2023
ಇದನ್ನೂ ಓದಿ: ಒಡಿಶಾ ರೈಲು ದುರಂತ-ಸಾವಿನ ಸಂಖ್ಯೆ 238ಕ್ಕೆ ಏರಿಕೆ
‘ಜನರ ಕೈಗೆ ಹಣ ಹೋದರೆ ಜನರ ಖರೀದಿ ಸಾಮರ್ಥ್ಯ ಹೆಚ್ಚುತ್ತದೆ, ಬದುಕಿನ ಮಟ್ಟ ಸುಧಾರಿಸುತ್ತದೆ. ಇದರಿಂದ GDP ಬೆಳವಣಿಗೆಯಾಗುತ್ತದೆ, ತೆರಿಗೆ ಸಂಗ್ರಹಕ್ಕೂ ಅನುಕೂಲವಾಗುತ್ತದೆ. ಜನರ ಆರ್ಥಿಕ ಸಾಮರ್ಥ್ಯದಿಂದಲೇ ದೇಶದ ಆರ್ಥಿಕ ಸಾಮರ್ಥ್ಯ ವೃದ್ಧಿಸುವುದು. ನಮ್ಮ ಪ್ರಕಾರ ದೇಶ, ರಾಜ್ಯ ಎಂದರೆ ಇಲ್ಲಿನ ಜನರೇ..’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಉದ್ಯೋಗ ಖಾತ್ರಿ ಕೊಟ್ಟಾಗ ದೇಶ ದಿವಳಿಯಾಗುತ್ತದೆ ಎಂದಿದ್ದರು.
ಅನ್ನಭಾಗ್ಯ ಕೊಟ್ಟಾಗ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು.
ಆದರೆ ದಿವಾಳಿಯಾಗಿದ್ದು ದೇಶವೂ ಅಲ್ಲ, ರಾಜ್ಯವೂ ಅಲ್ಲ ಬಿಜೆಪಿಗರ ಬೌದ್ಧಿಕತೆ!
ಜನರಿಗೆ ನೀಡುವ ಹಣ, ಭೂಮಿಗೆ ಬಿತ್ತುವ ಬೀಜ ವ್ಯರ್ಥವಾಗುವುದಿಲ್ಲ, ಬೆಳೆದು ಮರವಾಗಿ ಅರ್ಥವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ.
— Karnataka Congress (@INCKarnataka) June 3, 2023
‘ಬಿಜೆಪಿಯವರೇ ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, ಡಾ.ಯತೀಂದ್ರ ಸಿದ್ದರಾಮಯ್ಯನವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. ಆದರೆ ಸೃತಿ ಇರಾಣಿಯವರ ಪದವಿ ಹುಡುಕಿ ತನ್ನಿ, ಹಾಗೆಯೇ ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ "ಎಂಟೈರ್ ಪೊಲಿಟಿಕಲ್ ಸೈನ್ಸ್" ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ!’ ಎಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ: Odisha Train Accident: "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ"
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.