ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು: ಎಚ್‌.ಸಿ.ಮಹದೇವಪ್ಪ

MUDA Scam: ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ. 

Written by - Puttaraj K Alur | Last Updated : Aug 17, 2024, 04:18 PM IST
  • ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ನೋಟಿಸ್‌
  • ರಾಜ್ಯಪಾಲರ ವಜಾಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಒತ್ತಾಯ
  • ರಾಜ್ಯಪಾಲರು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದಾರೆ
ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು: ಎಚ್‌.ಸಿ.ಮಹದೇವಪ್ಪ title=
ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ 

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಪ್ರಕರಣ (MUDA Scam) ಸಂಬಂಧ ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಎಚ್‌.ಸಿ.ಮಹದೇವಪ್ಪ, ʼಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕುʼ ಎಂದು ಆಗ್ರಹಿಸಿದ್ದಾರೆ. 

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 

ಇದನ್ನೂ ಓದಿ: ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್

ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ. ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ ಎಂದು ಕಿಡಿಕಾರಿದ್ದಾರೆ. 

ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು ಎಂದು ಮಹದೇವಪ್ಪ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ವೈದ್ಯರ ಮುಷ್ಕರ: ಗಡಿಜಿಲ್ಲೆ ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ, ಚಿಕಿತ್ಸೆ ಸಿಗದೇ ವಾಪಾಸ್!!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News