ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ವಿಧಾನಸಭೆ

ಕರ್ನಾಟಕ ವಿಧಾನಸಭೆಯು ಗುರುವಾರದಂದು ಪ್ರತಿಪಕ್ಷಗಳ ಗದ್ದಲ ಮತ್ತು ಪ್ರತಿಭಟನೆಯ ನಡುವೆ ಮತಾಂತರ ವಿರೋಧಿ ಮಸೂದೆ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಧರ್ಮದ ಸ್ವಾತಂತ್ರ್ಯದ ಹಕ್ಕುಗಳ ಕರ್ನಾಟಕ ರಕ್ಷಣೆ ಮಸೂದೆ, 2021 ಯನ್ನು ಅಂಗೀಕರಿಸಿತು.

Written by - Zee Kannada News Desk | Last Updated : Dec 24, 2021, 12:45 AM IST
  • ಕರ್ನಾಟಕ ವಿಧಾನಸಭೆಯು ಗುರುವಾರದಂದು ಪ್ರತಿಪಕ್ಷಗಳ ಗದ್ದಲ ಮತ್ತು ಪ್ರತಿಭಟನೆಯ ನಡುವೆ ಮತಾಂತರ ವಿರೋಧಿ ಮಸೂದೆ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಧರ್ಮದ ಸ್ವಾತಂತ್ರ್ಯದ ಹಕ್ಕುಗಳ ಕರ್ನಾಟಕ ರಕ್ಷಣೆ ಮಸೂದೆ, 2021 ಯನ್ನು ಅಂಗೀಕರಿಸಿತು.
ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ವಿಧಾನಸಭೆ  title=
Photo Courtesy: Twitter

ಬೆಳಗಾವಿ: ಕರ್ನಾಟಕ ವಿಧಾನಸಭೆಯು ಗುರುವಾರದಂದು ಪ್ರತಿಪಕ್ಷಗಳ ಗದ್ದಲ ಮತ್ತು ಪ್ರತಿಭಟನೆಯ ನಡುವೆ ಮತಾಂತರ ವಿರೋಧಿ ಮಸೂದೆ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಧರ್ಮದ ಸ್ವಾತಂತ್ರ್ಯದ ಹಕ್ಕುಗಳ ಕರ್ನಾಟಕ ರಕ್ಷಣೆ ಮಸೂದೆ, 2021 ಯನ್ನು ಅಂಗೀಕರಿಸಿತು.

ಕರ್ನಾಟಕ ವಿಧಾನಸಭೆಯು ವಿವಾದಾಸ್ಪದ ಮತಾಂತರ ವಿರೋಧಿ ಮಸೂದೆ ಕುರಿತು ಚರ್ಚಿಸಲು ಪ್ರಾರಂಭಿಸುತ್ತಿದ್ದಂತೆ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತದಿಂದ ಪ್ರಸ್ತಾವಿತ ಶಾಸನವನ್ನು ಪ್ರಾರಂಭಿಸಲಾಗಿದೆ ಎಂದು ಬಿಜೆಪಿ ಸರ್ಕಾರ ಆರೋಪಿಸಿತು.

ಇದನ್ನೂ ಓದಿ : ಬೀದಿ ನಾಯಿಗಳ ಪಾಲಿನ ಅನ್ನದಾತೆ.. ಪ್ರತಿದಿನ 800 ಶ್ವಾನಗಳಿಗೆ ಆಹಾರ ನೀಡುವ ಮಂಗಳೂರಿನ ಮಹಿಳೆ

ಆದರೆ ಈಗ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಇದನ್ನು ಅಲ್ಲಗಳೆದರು, ನಮ್ಮ ಸರ್ಕಾರದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಯ ಕರಡು ಸಂಪುಟದಲ್ಲಿ ಚರ್ಚೆಯೂ ಆಗಿಲ್ಲ, ಅನುಮೋದನೆಯೂ ಆಗಿಲ್ಲ.ಕೇವಲ ಸಂಪುಟದ ಚರ್ಚೆಗೆ ತನ್ನಿ ಎಂದು ಸಹಿ ಹಾಕಿದ ಕಡತಗಳೆಲ್ಲವೂ ಸರ್ಕಾರದ ನಿಲುವು ಆಗುವುದಿಲ್ಲ ಎಂದು ಅವರು ಹೇಳಿದರು.

"ಸಂಸದೀಯ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಎಂದರೆ ಸಮಾನರಲ್ಲಿ ಮೊದಲಿಗ ಎಂಬ ವ್ಯಾಖ್ಯಾನವಿದೆ. ಮುಖ್ಯಮಂತ್ರಿಯಾಗಿ ನಾನೊಬ್ಬನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಬರಲ್ಲ, ಕರಡು ಪ್ರತಿ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿ ಎಂಬ ಕಾರಣಕ್ಕೆ ಸಹಿ ಮಾಡಿದ್ದೆ. ಸಹಿ ಮಾಡಿದ ಮಾತ್ರಕ್ಕೆ ಒಪ್ಪಿದ್ದೆ ಎಂದಲ್ಲ ಎಂದು ಸ್ಪಷ್ಟಪಡಿಸಿದರು.

"ನಾನು ಮತಾಂತರ ನಿಷೇಧ ಕಾಯಿದೆಯ ಕಡತವನ್ನು ಸಂಪುಟದ ಮುಂದೆ ತರುವಂತೆ ಸಹಿ ಹಾಕಿದ್ದು 2015 ರ ನವೆಂಬರ್ ತಿಂಗಳಿನಲ್ಲಿ. ಅದಾಗಿ ಎರಡೂವರೆ ವರ್ಷ ನಾವು ಅಧಿಕಾರದಲ್ಲಿ ಇದ್ದರೂ ಒಮ್ಮೆಯೂ ಅದನ್ನು ಸಂಪುಟದ ಮುಂದೆ ತರುವ ಪ್ರಯತ್ನ ಮಾಡಲಿಲ್ಲ.ಕಾರಣ ನಮ್ಮ ಸರ್ಕಾರಕ್ಕೆ ಇಂಥಾ ಮಸೂದೆಯ ಬಗ್ಗೆ ಆಸಕ್ತಿ ಇರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ : Gold Smuggling: ಜ್ಯೂಸರ್ ಒಳಗೆ ಚಿನ್ನದ ರಾಡ್..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಖದೀಮ

ಈ ಮಸೂದೆಯನ್ನು ಕಾಂಗ್ರೆಸ್ ಕಟುವಾಗಿ ವಿರೋಧಿಸಿದ್ದು, ಇದನ್ನು ಜನವಿರೋಧಿ, ಅಮಾನವೀಯ, ಸಂವಿಧಾನ ವಿರೋಧಿ, ಬಡವರ ವಿರೋಧಿ ಮತ್ತು ಕಠೋರ ಎಂದು ಕರೆದಿರುವ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಇದನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿದರು.ಸರಕಾರ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಕಾಯ್ದೆ 2021 ಕುರಿತು ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, 2016ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಲಹೆಯಂತೆ ಒಂದೆರಡು ಬದಲಾವಣೆಗಳೊಂದಿಗೆ ಕರ್ನಾಟಕದ ಕಾನೂನು ಆಯೋಗವು ಮಸೂದೆಗೆ ಚಾಲನೆ ನೀಡಿತ್ತು ಎಂದು ಹೇಳಿದರು.

ಇದನ್ನೂ ಓದಿ :ಚಿತ್ರದುರ್ಗ: ಹಗ್ಗದಿಂದ ಕಟ್ಟಿಹಾಕಿ, ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ, ಐವರ ಬಂಧನ

"ಕರ್ನಾಟಕ ಧರ್ಮದ ಸ್ವಾತಂತ್ರ್ಯದ ಹಕ್ಕಿನ ಹಕ್ಕು ಮಸೂದೆ, 2021 ಧರ್ಮದ ಸ್ವಾತಂತ್ರ್ಯದ ಹಕ್ಕನ್ನು ರಕ್ಷಿಸಲು ಮತ್ತು ತಪ್ಪು ನಿರೂಪಣೆ, ಬಲ, ಅನಗತ್ಯ ಪ್ರಭಾವ, ಬಲಾತ್ಕಾರ, ಆಮಿಷ ಅಥವಾ ಯಾವುದಾದರೂ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನುಬಾಹಿರವಾಗಿ ಮತಾಂತರವನ್ನು ನಿಷೇಧಿಸುತ್ತದೆ.

ಅಪ್ರಾಪ್ತ ವಯಸ್ಕರು, ಮಹಿಳೆಯರು, ಎಸ್‌ಸಿ/ಎಸ್‌ಟಿ, ಅಪರಾಧಿಗಳಿಗೆ ಸಂಬಂಧಿಸಿದಂತೆ ನಿಬಂಧನೆಗಳ ಉಲ್ಲಂಘನೆಗಾಗಿ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ 25,000 ದಂಡ ವಿಧಿಸಲು ಮಸೂದೆಯು ಪ್ರಸ್ತಾಪಿಸುತ್ತದೆ ಮತ್ತು ಅಪರಾಧಿಗಳು ಮೂರರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ 50,000 ಕ್ಕಿಂತ ಕಡಿಮೆಯಿಲ್ಲದ ದಂಡವನ್ನು ಎದುರಿಸಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News