ರಾಜಪಥ್‍ನಲ್ಲಿ ಕರ್ನಾಟಕ ಸ್ತಬ್ಧ ಚಿತ್ರ: ನಾರಿಶಕ್ತಿಯನ್ನು ಸ್ಮರಿಸಿದ ಕೇಂದ್ರ ಸಚಿವ ಜೋಶಿ

Republic Day 2023: ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕಾಗಿ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು. 

Written by - Yashaswini V | Last Updated : Jan 25, 2023, 08:02 AM IST
  • ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೊನೆ ಕ್ಷಣದಲ್ಲಿ ಕರ್ನಾಟಕದ ಟ್ಯಾಬ್ಲೊಗೆ ಅವಕಾಶ
  • ಈ ಬಾರಿಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ದೇಶಕ್ಕೆ ಹೊಸ ಸಂದೇಶವನ್ನು ನೀಡಲಿದೆ
  • ಸಾಧಕರ ಸೇವೆಯನ್ನು ಸ್ಮರಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜಪಥ್‍ನಲ್ಲಿ ಕರ್ನಾಟಕ ಸ್ತಬ್ಧ ಚಿತ್ರ: ನಾರಿಶಕ್ತಿಯನ್ನು ಸ್ಮರಿಸಿದ ಕೇಂದ್ರ ಸಚಿವ ಜೋಶಿ title=
Republic Day 2023- Karnataka Tableau

Republic Day 2023: ನವದೆಹಲಿಯಲ್ಲಿ ಜನವರಿ‌ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಕಾರ್ಯಕ್ರಮದ ಪರೇಡ್‌ನಲ್ಲಿ ಭಾಗವಹಿಸಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ನೀಡಲಾಗಿದೆ. ಪ್ರತಿ ವರ್ಷ ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ಅನುಮತಿ ದೊರಕದೆ ಇದ್ದದ್ದು ಸುದ್ದಿಯಾಗಿತ್ತು. ಆದರೆ ಈಗ ಅನುಮತಿ ದೊರೆತಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಹೌದು.. ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕಾಗಿ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವಕಾಶ ದೊರೆತಿದ್ದು, ಈ ಬಾರಿಯ ಗಣರಾಜ್ಯೋತ್ಸವ  ಪರೇಡ್‍ನಲ್ಲಿ  ಕರ್ನಾಟಕದ ಸ್ತಬ್ಧ ಚಿತ್ರ ದೇಶಕ್ಕೆ ಹೊಸ ಸಂದೇಶವನ್ನು ನೀಡಲಿದ್ದು, ಸಾಧಕರ ಸೇವೆಯನ್ನು ಸ್ಮರಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- Republic day 2023: ಗಣರಾಜ್ಯೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ ವಿಶೇಷ ಯುದ್ದ ವಿಮಾನ

ಇನ್ನು ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ನಾರಿಶಕ್ತಿ ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿದೆ. ರಾಜ್ಯದ ಮಾದರಿ ಮಹಿಳೆಯರಾದ ಸೂಲಗಿತ್ತಿ ನರಸಮ್ಮ, ತುಳಸೀ ಗೌಡ ಹಾಗೂ ಸಾಲು ಮರದ ತಿಮ್ಮಕ್ಕ ಅವರ ಪ್ರತಿಕೃತಿಗಳನ್ನು ಹೊಂದಿದ ಆಕರ್ಷಕ ಸ್ತಬ್ಧಚಿತ್ರವನ್ನು ಹೊತ್ತ ವಾಹನ ಸೋಮವಾರ ಕರ್ತವ್ಯಪಥ ಮಾರ್ಗದಲ್ಲಿ ಸಾಗುತ್ತಾ ಗಣರಾಜ್ಯೋತ್ಸವ ತಾಲೀಮಿನಲ್ಲಿ ಪಾಲ್ಗೊಂಡಿರುವ ಆಕರ್ಷಕ ಚಿತ್ರಗಳು ನಯನ ಮನೋಹರವಾಗಿದೆ.

ಇದನ್ನೂ ಓದಿ- Republic Day 2023: ಗಣರಾಜ್ಯೋತ್ಸವ ಸಂಭ್ರಮಕ್ಕೆ ಅರ್ಜೆಂಟೀನಾ ವಾಯುಪಡೆ-ಭೂಸೇನಾ ಯೋಧರ ಆಗಮನ: ಮತ್ತಷ್ಟು ಹೆಚ್ಚಲಿದೆ ಮೆರುಗು

8,000 ಗಿಡಗಳನ್ನು ನೆಟ್ಟಿರುವ ತುಮಕೂರಿನ ಗುಬ್ಬಿಯ ಹಸಿರು ಯೋಧೆ ಸಾಲುಮರದ ತಿಮ್ಮಕ್ಕ, 30,000 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟ ಉತ್ತರ ಕನ್ನಡದ ಅಂಕೋಲಾದ ತುಳಸಿಗೌಡ  ಹಾಗೂ 70 ವರ್ಷಗಳಲ್ಲಿ ಉಚಿತವಾಗಿ 2,000 ಕ್ಕೂ ಹೆಚ್ಚು ಸಾಂಪ್ರದಾಯಿಕ ಹೆರಿಗೆ ಮಾಡಿಸಿರುವ ಸೂಲಗಿತ್ತಿ ಪಾವಗಡದ ನರಸಮ್ಮ ಅವರ ಪ್ರತಿಮೆಗಳನ್ನು ಟ್ಯಾಬ್ಲೋ ಹೊಂದಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News