Kempe Gowda Jayanti 2023: ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Kempe Gowda Jayanti 2023: ಗುರುವಾರ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

Written by - Prashobh Devanahalli | Edited by - Puttaraj K Alur | Last Updated : Jun 22, 2023, 05:35 PM IST
  • ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ
  • ಜೂ.27ರಂದು ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ
  • ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ
Kempe Gowda Jayanti 2023: ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ title=
ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ

ಬೆಂಗಳೂರು: ಜೂ.27ರಂದು ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ

ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳು…

1) ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಯಾವುದೇ ಜಾತಿ-ಧರ್ಮ ಮತ್ತು ಭಾಷೆಗೆ ಸೀಮಿತ ಅಲ್ಲ.

2) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜೂನ್ 27ರಂದು ರಾಜ್ಯದ ಎಲ್ಲಾ ತಾಲೂಕಿನಲ್ಲೂ ರಾಜ್ಯ ಮಟ್ಟದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ.

3) ಮಾಗಡಿ, ಯಲಹಂಕ , ಕೆಂಪಾಂಬುದಿ ಕೆರೆ ಮತ್ತು ಲಾಲ್ ಬಾಗ್ ಸೇರಿದಂತೆ ನಗರದ 5 ಕಡೆಯಿಂದ ಜ್ಯೋತಿ ಹಿಡಿದು ವಿಧಾನಸೌಧಕ್ಕೆ ಜಾತ್ರಾ ಮೆರವಣಿಗೆ.

4) ಬೆಳಗ್ಗೆ 9ಗಂಟೆಗೆ ಆರಂಭವಾಗಲಿರುವ ಮೆರವಣಿಗೆಯನ್ನು ಸಚಿವರು ಉದ್ಘಾಟಿಸಲಿದ್ದಾರೆ.

5) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಎದುರಿರುವ ಕೆಂಪೇಗೌಡರ ಪ್ರತಿಮೆಯ ಬಳಿ ಮೆರವಣಿಗೆ ಆಗಮನ.

6) 12 ಗಂಟೆಯ ನಂತರ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ.

7) ಮೂವರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ.

8) ಬಿ.ಎಲ್.ಶಂಕರ್ ನೇತೃತ್ವದಲ್ಲಿ ಸಾಧಕರ ಆಯ್ಕೆ.

9) ಬೆಂಗಳೂರು ನಗರದಲ್ಲಿ 28 ರಿಂದ 5ರವರೆಗೆ ಶಾಸಕರ ಅನುಕೂಲಕ್ಕೆ ತಕ್ಕಂತೆ ಎಲ್ಲಾ ಕ್ಷೇತ್ರದಲ್ಲೂ ಕಡ್ಡಾಯವಾಗಿ ಕಾರ್ಯಕ್ರಮ ಆಚರಿಸಬೇಕು.

10) ಜುಲೈ 9ರಂದು ಬಿಬಿಎಂಪಿ ವತಿಯಿಂದ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ

11) ಬಿಬಿಎಂಪಿ ವಾರ್ಡ್ ಮಟ್ಟದ ಪ್ರಶಸ್ತಿಗೆ 198 ಜನ ಸಾಧಕರನ್ನು ಆಯ್ಕೆ ಮಾಡಲಾಗುವುದು. ಸಾಧಕರ ಆಯ್ಕೆಗೆ ಕಮಿಟಿ ರಚನೆ ಮಾಡಲಾಗುವುದು.

12) ಎಲ್ಲಾ ಜಾತಿ-ಧರ್ಮಗಳ ಸಾಧಕರಿಗೂ ಪ್ರಶಸ್ತಿ ನೀಡುವ ಉದ್ದೇಶ.

13) ಕ್ರೀಡೆ, ಸಾಹಿತ್ಯ ಮತ್ತು ಸಮಾಜಸೇವೆ ಮಾನದಂಡದ ಅಡಿಯಲ್ಲಿ ಸಾಧಕರ ಆಯ್ಕೆ.

14) ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಸನದಲ್ಲೂ ಪ್ರತ್ಯೇಕ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮವು ಹಾಗೆ ಮುಂದುವರೆಯಲಿದೆ.

ಇದನ್ನೂ ಓದಿ: 126 ಕೋಟಿ ರೂ, ಮೌಲ್ಯ ದಾಟಿದ ಮಹಿಳಾ "ಶಕ್ತಿ" ಪ್ರದರ್ಶನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News