ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್

"ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

Written by - Prashobh Devanahalli | Edited by - Manjunath N | Last Updated : Nov 12, 2023, 03:44 PM IST
  • ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ
  • ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ
  • ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ.
 ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್ title=

ಬೆಂಗಳೂರು: "ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರಿಗೂ ಗ್ಯಾರಂಟಿ ಯೋಜನೆಗಳಿಗೂ ಏನು ಸಂಬಂಧ? ಅವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಏನು ಗೊತ್ತಿದೆ" ಎಂದೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋದಿಂದ ಪ್ರಯಾಣಿಕರಿಗೆ ಹೊಸ ಸೌಲಭ್ಯ!

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು ಭಾನುವಾರ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುತ್ತಿಲ್ಲ ಎಂಬ ಕುಮಾರಸ್ವಾಮಿ ಆರೋಪ ಬಗ್ಗೆ ಕೇಳಿದಾಗ ಅವರು ತಿರುಗೇಟು ನೀಡಿದ್ದು ಹೀಗೆ;

"ಕುಮಾರಸ್ವಾಮಿ ಅವರಿಗೆ ಬಡ ಜನತೆಯ ನೋವು ಗೊತ್ತಿದ್ದರೆ ಮಾತನಾಡುತ್ತಿರಲಿಲ್ಲ. ಅವರೂ ಒಬ್ಬ ನಾಯಕರು, ಆರೋಪ ಮಾಡಲಿ ತೊಂದರೆಯಿಲ್ಲ. ಗ್ಯಾರಂಟಿ ಯೋಜನೆಗಳಿಂದ ಯಾರಿಗೆ ಒಳ್ಳೆಯದಾಗಬೇಕಿತ್ತೊ ಅವರಿಗೆ ಅದು ತಲುಪಿ, ಸಂತೋಷವಾಗಿದ್ದಾರೆ.

ಕುಮಾರಸ್ವಾಮಿ ಅವರೇನು ಫಲಾನುಭವಿಗಳೂ ಅಲ್ಲ, ಅದರ ಬಗ್ಗೆ ಅವರಿಗೆ ಚಿಂತೆನೆಯೇ ಇಲ್ಲ. ಪಾಪ ಅವರಿಗೆ ಅವರು ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲು ಅವಕಾಶ ಆಗಲೇ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ತಲುಪಿದೆಯೋ, ಇಲ್ಲವೊ ಎನ್ನುವುದನ್ನು ಅವರು ಮತದಾರರಿಗೆ ಕೇಳಿ ತಿಳಿದುಕೊಳ್ಳಬೇಕು.

ಇದನ್ನೂ ಓದಿ: ಕ್ಯಾಪ್ಸಿಕಂ ವ್ಯವಸಾಯದಿಂದ ಲಕ್ಷ-ಲಕ್ಷ ಆದಾಯ!

ಚನ್ನಪಟ್ಟಣದ 25 ಕ್ಕೂ ಹೆಚ್ಚು ಮತದಾರರ ಬಳಿ ನಾನೇ ಖುದ್ದಾಗಿ ಮಾತನಾಡಿದ್ದೇನೆ. ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರದ ಮತದಾರರ ಬಳಿ ಹೋಗಿ ಕೇಳಲಿ. ಉಚಿತ ವಿದ್ಯುತ್, ಶಕ್ತಿ, ಅನ್ನ ಭಾಗ್ಯ, ಗೃಹಲಕ್ಷ್ಮೀ ಯೋಜನೆಗಳು ಅವರಿಗೆ ತಲುಪಿದೆಯೆ? ಇಲ್ಲವೇ? ಎಂದು ಪರೀಕ್ಷೆ ಮಾಡಲಿ.

ಒಂದಷ್ಟು ತಾಂತ್ರಿಕ ದೋಷ ಹಾಗೂ ಇತರೇ ಕಾರಣಗಳಿಂದ ಶೇ 5 ರಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಲ್ಲ. ಈಗ ಒಂದೊಂದೇ ಸಮಸ್ಯೆಗಳನ್ನು ಬಗೆಹರಿಸಿ ತಲುಪಿಸಲಾಗುತ್ತಿದೆ.

ನಾನು ತೆಲಂಗಾಣದ 5 ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದೆ. ಆ ಐದೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ. ಡಿ. 9  ರಂದು ಕಾಂಗ್ರೆಸ್ ಪಕ್ಷ ತೆಲಂಗಾಣದಲ್ಲಿ ಸರ್ಕಾರ ರಚಿಸಲಿದ್ದು, ಕರ್ನಾಟಕದ ಮಾದರಿಯಂತೆ 6 ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಈ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ."

ಪ್ರಶ್ನೆ ಉತ್ತರ:

ಕರ್ನಾಟಕದ ಸಚಿವರಿಗೆ ಪಂಚರಾಜ್ಯ ಚುನಾವಣೆ ಸಲುವಾಗಿ ಕಮಿಷನ್ ಟಾರ್ಗೆಟ್ ಕೊಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, "ಕುಮಾರಸ್ವಾಮಿ ಅವರು ಟಾರ್ಗೆಟ್ ಕೊಟ್ಟಿರಬೇಕು. ನಮ್ಮ ಸಚಿವರು ತೆಲಂಗಾಣ ಚುನಾವಣಾ ಪ್ರಚಾರಕ್ಕೆ ಹೋಗಿ ಬರುತ್ತಿದ್ದಾರೆ. ತಾಳ್ಮೆಯಿಂದ ಇರಲು ಕುಮಾರಸ್ವಾಮಿ ಅವರಿಗೆ ಆಗುತ್ತಿಲ್ಲ. ಅವರಿಗೂ ವಿಜಯೇಂದ್ರ ಇಬ್ಬರಿಗೂ ಒಳ್ಳೆಯದಾಗಲಿ" ಎಂದರು.

ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಕೊಟ್ಟಿರುವ ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆಯೇ ಎಂದು ಕೇಳಿದಾಗ"ಕುಮಾರಸ್ವಾಮಿ ಅವರಿಗೂ ಕಾಂಗ್ರೆಸ್ ಪಕ್ಷಕ್ಕೂ ಏನು ಸಂಬಂಧ? ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದ್ದಾರೆ. ನಾವೆಲ್ಲ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ಕೆಲಸ ಮಾಡುತ್ತಿದ್ದೇವೆ. ಇಲ್ಲಿ ಬೇರೆ ಚರ್ಚೆಯೇ ಇಲ್ಲ" ಎಂದರು.

ರಾಜ್ಯದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕರ್ನಾಟಕದ ಜನತೆಗೆ ದೀಪಾವಳಿ ಹಬ್ಬದಂದು ಸುಖ, ಸಮೃದ್ಧಿ ಒದಗಿ ಬರಲಿ" ಎಂದು ಸರ್ಕಾರದ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಶುಭಾಶಯಗಳು ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News