ದಿಢೀರ್ ಕೋಡಿಹಳ್ಳಿ ಚಂದ್ರಶೇಖರ್ ಗೆ ಪೋನ್ ಮಾಡಿದ ಲಕ್ಷ್ಮಣ್ ಸವದಿ!

ನಮ್ಮ 10 ಬೇಡಿಕೆಗಳಲ್ಲಿ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ 6 ನೇ ವೇತನ ಆಯೋಗದ ಕುರಿತು ಗೊಂದಲವಿದೆ, ಬೇಡಿಕೆಗಳನ್ನು ಪರಿಹರಿಸುವಲ್ಲಿ ಸ್ಪಷ್ಟತೆ ಇಲ್ಲ

Last Updated : Dec 14, 2020, 04:26 PM IST
  • ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸರ್ಕಾರದ ಪ್ರತಿನಿಧಿಯಾಗಿ ಮುಷ್ಕರ ನಡೆಯುತ್ತಿರುವ ಸ್ಥಳಕ್ಕೆ ಹೋಗಿ ಸರ್ಕಾರ 10 ಬೇಡಿಕೆಗಳ ಪೈಕಿ 9 ಬೇಡಿಕೆಗಳಿಗೆ ಒಪ್ಪಿರುವ ಲಿಖಿತ ರೂಪದ ಪತ್ರ
  • ನಮ್ಮ 10 ಬೇಡಿಕೆಗಳಲ್ಲಿ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ 6 ನೇ ವೇತನ ಆಯೋಗದ ಕುರಿತು ಗೊಂದಲವಿದೆ, ಬೇಡಿಕೆಗಳನ್ನು ಪರಿಹರಿಸುವಲ್ಲಿ ಸ್ಪಷ್ಟತೆ ಇಲ್ಲ
  • ಹೋರಾಟದಲ್ಲಿ ನಾವು ಗೆದ್ದಂತಲ್ಲ, ನೀವು ಸೋತಂತಲ್ಲ, ಮುಷ್ಕರವನ್ನು ಇನ್ನೂ ಮುಂದುವರೆಸುವುದು ಬೇಡ. ನಿನ್ನೆ ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಚಾರಗಳನ್ನು ಜಾರಿಗೆ ತರಲು ಸಿದ್ಧ.
ದಿಢೀರ್ ಕೋಡಿಹಳ್ಳಿ ಚಂದ್ರಶೇಖರ್ ಗೆ ಪೋನ್ ಮಾಡಿದ ಲಕ್ಷ್ಮಣ್ ಸವದಿ! title=

ಬೆಂಗಳೂರು: ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸರ್ಕಾರದ ಪ್ರತಿನಿಧಿಯಾಗಿ ಮುಷ್ಕರ ನಡೆಯುತ್ತಿರುವ ಸ್ಥಳಕ್ಕೆ ಹೋಗಿ ಸರ್ಕಾರ 10 ಬೇಡಿಕೆಗಳ ಪೈಕಿ 9 ಬೇಡಿಕೆಗಳಿಗೆ ಒಪ್ಪಿರುವ ಲಿಖಿತ ರೂಪದ ಪತ್ರವನ್ನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಬೇಡಿಕೆಗಳಿಗೆ ಸರ್ಕಾರ ಒಪ್ಪಿದ ಪತ್ರವನ್ನು ಪರಿಶೀಲಿಸಿದ ಕೋಡಿಹಳ್ಳಿ ನಂತರ ನೌಕರರನ್ನುದ್ದೇಶಿಸಿ ಮಾತನಾಡಿ, ನಮ್ಮ 10 ಬೇಡಿಕೆಗಳಲ್ಲಿ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ 6 ನೇ ವೇತನ ಆಯೋಗದ ಕುರಿತು ಗೊಂದಲವಿದೆ, ಬೇಡಿಕೆಗಳನ್ನು ಪರಿಹರಿಸುವಲ್ಲಿ ಸ್ಪಷ್ಟತೆ ಇಲ್ಲ ಎಂದರು.

ಅಲ್ಲದೇ 10 ನಿಮಿಷಗಳ ಕಾಲ ಸಮಯ ತೆಗೆದುಕೊಳ್ಳುತ್ತೇನೆ. ಈ ಸಮಯದಲ್ಲಿ ನನಗೆ ಗೊತ್ತಿರುವ ರಾಜಕೀಯ ಪ್ರಮುಖರ ಜೊತೆ ಈ ಕುರಿತು ಚರ್ಚಿಸುತ್ತೇನೆ ಎಂದು ಹೇಳಿದರು. ಕೋಡಿಹಳ್ಳಿ ಚಂದ್ರಶೇಖರ್(Kodihalli Chandrashekar) ಪತ್ರವನ್ನ ಓದುವ ಸಮಯದಲ್ಲಿ ನೌಕರರು ತಮ್ಮ ಅಸಮಾಧಾನ ವ್ಯಕ್ತಪಡಿಸಿ ಮುಷ್ಕರ ಕೈ ಬಿಡದಿರುವಂತೆ ಕೂಗಿದ ಘಟನೆಯೂ ನಡೆಯಿತು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದೂ 'ನಾಯಿ ಮೊಲೆಯ ಹಾಲಿದ್ದಂತೆ'

ಕೋಡಿಹಳ್ಳಿ ಗೆ ಸವದಿ ಫೋನ್: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪ್ರತಿಷ್ಠೆಯನ್ನು ಬಿಟ್ಟು ಕೊನೆಗೂ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಕರೆ ಮಾಡಿದ್ದಾರೆ. ಹೋರಾಟದಲ್ಲಿ ನಾವು ಗೆದ್ದಂತಲ್ಲ, ನೀವು ಸೋತಂತಲ್ಲ, ಮುಷ್ಕರವನ್ನು ಇನ್ನೂ ಮುಂದುವರೆಸುವುದು ಬೇಡ. ನಿನ್ನೆ ಸಭೆಯಲ್ಲಿ ಚರ್ಚೆಯಾದ ಎಲ್ಲಾ ವಿಚಾರಗಳನ್ನು ಜಾರಿಗೆ ತರಲು ಸಿದ್ಧ. 6ನೇ ವೇತನ ಆಯೋಗದ ಬಗ್ಗೆ ಇಂದು ನೀಡಿದ ಲಿಖಿತ ಆದೇಶ ಪತ್ರದಲ್ಲಿಲ್ಲ ಎಂದು ಗೊಂದಲಕ್ಕೀಡಾಗುವುದು ಬೇಡ. ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ಪ್ರತಿಭಟನಾ ನಿರತ ಸಾರಿಗೆ ನೌಕರರಿಗೆ ಕೊನೆಗೂ 'ಗುಡ್ ನ್ಯೂಸ್' ನೀಡಿದ ರಾಜ್ಯ ಸರ್ಕಾರ..!

 

Trending News