Lok Sabha Election 2024: "ಸಂವಿಧಾನ ಬದಲಾಯಿಸುವುದು ಸಂಘ ಪರಿವಾರದ ಹುನ್ನಾರ"

CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.

Written by - Zee Kannada News Desk | Last Updated : Apr 14, 2024, 07:05 PM IST
  • ಭಾರತೀಯರನ್ನು ನಂಬಿಸಿ, ಭ್ರಮೆ ಹುಟ್ಟಿಸಿ, ಭಾವನೆಗಳನ್ನು ಕೆರಳಿಸಿ ಭಯಾನಕವಾಗಿ ವಂಚಿಸುವವರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ಇಲ್ಲ ತಾನೆ.
  • ನುಡಿದಂತೆ ನಡೆದು ರಾಜ್ಯದ ಜನರ ಬದುಕಿಗೆ ಸ್ಪಂದಿಸಿದ ನಮಗೆ ಮತ ಹಾಕಿದರೆ ಆಗ ಮತಕ್ಕೆ ಗೌರವ ಬರುತ್ತದೆ ಅಲ್ಲವೇ?
  • ತೋಚಿಸಿ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸುತ್ತಾರೆ ಎನ್ನುವ ಭರವಸೆ ನನಗಿದೆ
Lok Sabha Election 2024: "ಸಂವಿಧಾನ ಬದಲಾಯಿಸುವುದು ಸಂಘ ಪರಿವಾರದ ಹುನ್ನಾರ" title=

ಮಡಿಕೇರಿ: ಬಿಜೆಪಿ ಸಂವಿಧಾನ ವಿರೋಧಿ. ಸಂವಿಧಾನ ಬದಲಾಯಿಸುವುದು ಸಂಘ ಪರಿವಾರದ ಹುನ್ನಾರ. ಕೇಂದ್ರ ಸಚಿವರಾಗಿದ್ದವರೇ ಈ ಮಾತನ್ನು ಬಹಿರಂಗವಾಗಿ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅವರು ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಗಡಿಯಲ್ಲಿ ಮೂಲಸೌಲಭ್ಯವಿಲ್ಲದೆ ಅಧಿಕಾರಿಗಳ ಪರದಾಟ

ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಬಿಜೆಪಿ ಭರವಸೆಗಳನ್ನು ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಸಂಘ ಪರಿವಾರ ಬ್ರಿಟೀಷರ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಏಕೆ ಭಾಗವಹಿಸಲಿಲ್ಲ? ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲಿಯೇ ಸಂವಿಧಾನ ವಿರೋಧಿಗಳ ಬಗ್ಗೆ ಎಚ್ಚರಿಸಿದ್ದರು. ಸಮಾಜದಲ್ಲಿನ ಎಲ್ಲಾ ಜಾತಿ, ವರ್ಗ ಮತ್ತು ಧರ್ಮದ ಬಡವರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವುದಕ್ಕಾಗಿ ನಾವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ.ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಕೊಟ್ಟ ಮಾತಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಎದೆ ಮುಟ್ಟಿಕೊಂಡು ಹೇಳಲಿ ಎಂದು ಪ್ರಶ್ನಿಸಿದರು.

ಭಾರತೀಯರನ್ನು ನಂಬಿಸಿ, ಭ್ರಮೆ ಹುಟ್ಟಿಸಿ, ಭಾವನೆಗಳನ್ನು ಕೆರಳಿಸಿ ಭಯಾನಕವಾಗಿ ವಂಚಿಸುವವರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದಾ? ಇಲ್ಲ ತಾನೆ. ನುಡಿದಂತೆ ನಡೆದು ರಾಜ್ಯದ ಜನರ ಬದುಕಿಗೆ ಸ್ಪಂದಿಸಿದ ನಮಗೆ ಮತ ಹಾಕಿದರೆ ಆಗ ಮತಕ್ಕೆ ಗೌರವ ಬರುತ್ತದೆ ಅಲ್ಲವೇ? ಕೊಡಗು ಜಿಲ್ಲೆಯ ಮತದಾರರು ಪ್ರಜ್ಞಾವಂತರಾಗಿದ್ದಾರೆ. ತೋಚಿಸಿ ಪ್ರಜ್ಞಾವಂತಿಕೆಯಿಂದ ಮತ ಚಲಾಯಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News