Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ!

Lok Sabha Election2024: ಸೋಮವಾರ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಪತ್ನಿ ತ್ರಿಷಿಕಾ ಅವರು ಸಾಮಾನ್ಯರಂತೆ ಮೈದಾನದಲ್ಲಿ ಕಸ ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.

Written by - Puttaraj K Alur | Last Updated : Apr 15, 2024, 05:01 PM IST
  • ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾನುವಾರ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼ
  • ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್ ದಂಪತಿ
  • ಸೋಷಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ಮಹಾರಾಜರ ವಿಡಿಯೋ
Lok Sabha Election2024: ಮಹಾರಾಜಾ ಕಾಲೇಜು ಮೈದಾನದಲ್ಲಿ ಕಸ ತೆಗೆದ ಯದುವೀರ್, ಪತ್ನಿ ತ್ರಿಷಿಕಾ! title=
ಕಸ ತೆಗೆದ ಯದುವೀರ್ ದಂಪತಿ!

Lok Sabha Election2024: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿಯ ʼವಿಜಯ ಸಂಕಲ್ಪ ಸಮಾವೇಶʼ ಆಯೋಜಿಸಲಾಗಿತ್ತು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಸಮಾವೇಶ ನಡೆದ ಸ್ಥಳದಲ್ಲಿ ಬಿದ್ದಿದ್ದ ಕಸವನ್ನು ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. 

ಯದುವೀರ್ ಪರ ಚುನಾವಣಾ ಪ್ರಚಾರ ನಡೆಸಲು ಪ್ರಧಾನಿ ಮೋದಿಯವರು ಭಾನುವಾರ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದರು. ಮಹಾರಾಜಾ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಸಮಾವೇಶದ ನಂತರ ಸ್ಥಳದಲ್ಲಿ ರಾಶಿ ರಾಶಿ ಕಸ ಬಿದ್ದಿತ್ತು. 

ಇದನ್ನೂ ಓದಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ಈ ಚಿಹ್ನೆಗಳು ಕಂಡುಬಂದರೆ ಫೋನ್ ಹ್ಯಾಕ್ ಆಗಿದೆ ಅಂತ ಅರ್ಥ..! 

ಸೋಮವಾರ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಯದುವೀರ್ ಮತ್ತು ಪತ್ನಿ ತ್ರಿಷಿಕಾ ಅವರು ಸಾಮಾನ್ಯರಂತೆ ಮೈದಾನದಲ್ಲಿ ಕಸ ತೆಗೆಯುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು. ಮೈದಾನದ ತುಂಬಾ ಬಿದ್ದಿದ್ದ ಕಸವನ್ನು ತೆಗೆಯುವ ಮೂಲಕ ಯದುವೀರ್‌ ಮತ್ತು ತ್ರಿಷಿಕಾ ಗಮನ ಸೆಳೆದರು. ಸಾಮಾನ್ಯ ಪ್ರಜೆಗಳಂತೆ ಜನರೊಂದಿಗೆ ಬೆರೆತು ಮಹಾರಾಜರು ಸ್ವಚ್ಛ ಅಭಿಯಾನ ನಡೆಸಿದ್ದು, ಜನರ ಗಮನ ಸೆಳೆದಿದೆ.

ಯದುವೀರ್‌ ಮತ್ತು ತ್ರಿಷಿಕಾ ಅವರು ಕಸ ತೆಗೆಯುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಕೆಲವರು ಯುದುವೀರ್‌ ದಂಪತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದೆಲ್ಲಾ ಚುನಾವಣಾ ಗಮಿಕ್‌ ಅಂತಾ ಟೀಕಿಸಿದ್ದಾರೆ. 

ಇದನ್ನೂ ಓದಿ: Ram Mandir : ರಾಮನವಮಿ ಹಿನ್ನೆಲೆ ರಾಮ ಮಂದಿರಕ್ಕೆ1,11,111 ಕೆಜಿ ಲಡ್ಡು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News