ಮರ ಕಡಿಯಲು ಅನುಮತಿ ನೀಡಿದ್ದ ಮಡಿಕೇರಿ ವಲಯ ಡಿಎಫ್ಒ ಸಸ್ಪೆಂಡ್

ಶುಕ್ರವಾರ ಪ್ರಧಾನ ಅರಣ್ಯ ಸಂರಕ್ಷಣಾಧಿರಿಗಳು ಈ ಆದೇಶ ಹೊರಡಿಸಿದ್ದು, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಮಡಿಕೇರಿ ವಲಯದ ಹೆಚ್ಚಿನ ಹೊಣೆ ನೀಡಲಾಗಿದೆ.  

Last Updated : Jun 15, 2019, 07:19 AM IST
ಮರ ಕಡಿಯಲು ಅನುಮತಿ ನೀಡಿದ್ದ ಮಡಿಕೇರಿ ವಲಯ ಡಿಎಫ್ಒ ಸಸ್ಪೆಂಡ್ title=

ಮಡಿಕೇರಿ: ರೆಸಾರ್ಟ್ ನಿರ್ಮಾಣಕ್ಕಾಗಿ ಕೆ.ನಿಡಗುಣಿ ಗ್ರಾಮದಲ್ಲಿ 800 ಮರಗಳ ಮಾರಣಹೋಮಕ್ಕೆ ಅನುಮತಿ ನೀಡಿದ್ದ ಮಡಿಕೇರಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಶುಕ್ರವಾರ ಪ್ರಧಾನ ಅರಣ್ಯ ಸಂರಕ್ಷಣಾಧಿರಿಗಳು ಈ ಆದೇಶ ಹೊರಡಿಸಿದ್ದು, ವಿರಾಜಪೇಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಮಡಿಕೇರಿ ವಲಯದ ಹೆಚ್ಚಿನ ಹೊಣೆ ನೀಡಲಾಗಿದೆ.

800 ಮರಗಳನ್ನು ಕಡಿಯಲು ಅನುಮತಿ ನೀಡಿರುವ ಅರಣ್ಯ ಇಲಾಖೆ ವಿರುದ್ಧ ಪರಿಸರ ಪ್ರೇಮಿಗಳು ಮತ್ತು ಅಲ್ಲಿನ ಗ್ರಾಮಸ್ಥರು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಈ ವಿಷಯ ಬೆಳಕಿಗೆ ಬಂದ ಕೂಡಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದ್ದರು. ಅದರನ್ವಯ ಈ ಪ್ರಕರಣದಲ್ಲಿ ಡಿಎಫ್ಒ ಕರ್ತವ್ಯ ಲೋಪ ಎಸಗಿರುವ ಬಗ್ಗೆ ತಿಳಿದುಬಂದಿದ್ದು, ಸೇವೆಯಿಂದ ಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. 
 

Trending News