ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

 ನಿರ್ಮಾಣ ಹಂತದ ಕಟ್ಟಡದಿಂದ (Under Construction Building) ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. 

Written by - Zee Kannada News Desk | Last Updated : Mar 9, 2022, 03:44 PM IST
  • ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು
  • ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ
  • ಮೆಟ್ಟಿಲು ಬಳಸಿ ಇಳಿಯುತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದ ವ್ಯಕ್ತಿ
ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು   title=
ಕಟ್ಟಡ

ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ (Under Construction Building) ಕಾಲು ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. 

ಇದನ್ನೂ ಓದಿ: 8 ಕೋಟಿ ರೂ. ಮೌಲ್ಯದ ಡ್ರಗ್ಸ್ ಡೀಲ್! ಮನೆಯಲ್ಲಿಯೇ ನಶೆ ಲೋಕ ಸೃಷ್ಟಿಸಿದ್ದ ಜೋಡಿ

ತಮಿಳುನಾಡು ಮೂಲದ ಏಳುಮಲೈ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಏಳುಮಲೈ ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದಿದ್ದರು. ನಾಗರಬಾವಿಯ ಎನ್ ಜಿಇಎಫ್ ಲೇಔಟ್ ನಲ್ಲಿ ಘಟನೆ ಜರುಗಿತ್ತು. 

ಕಟ್ಟಡ ಕಾಮಗಾರಿ ಮಾಡುತಿದ್ದ ವೇಳೆ, ರಾತ್ರಿ 7 ಗಂಟೆ ಸುಮಾರು ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಮೆಟ್ಟಿಲು ಬಳಸಿ ಇಳಿಯುತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ (Head) ಗಂಭೀರ ಗಾಯವಾಗಿದೆ. 

ಏಳುಮಲೈ ಅವರನ್ನು ತಕ್ಷಣವೇ ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಏಳುಮಲೈ ಅಸುನೀಗಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: Karnataka BJP : ಪಂಚರಾಜ್ಯ ಚುನಾವಣೆ: ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ?!

ಘಟನೆ ಸಂಬಂಧ ನಾಲ್ವರ ವಿರುದ್ಧ ಎಫ್ ಐಆರ್ (FIR) ಕೂಡ ದಾಖಲಾಗಿದೆ. ಮಾಲೀಕ ಮುನಿರಾಜು ಬಾಬು, ಶಿವಶಂಕರ್ ಚೌಧರಿ, ಕಾಂಟ್ರ್ಯಾಕ್ಟರ್ ಗಳಾದ ಶಕ್ತಿವೇಲು ಹಾಗೂ ವಾದಿವೇಲು ವಿರುದ್ಧ ಎಫ್ಐಆರ್ ಹಾಕಲಾಗಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News