ಮಂಡ್ಯದ ಕೆರಗೋಡು ಹನುಮಧ್ವಜ ವಿವಾದ ನಂತರ ಶಿವಾಜಿ ನಗರದಲ್ಲಿ ಹಸಿರು ಬಾವುಟ ವಿವಾದ

ಮಂಡ್ಯ ಜಿಲ್ಲೆಯ ಕೆರಗೋಡು ಹನುಮಧ್ವಜ ವಿವಾದದ ಕಿಚ್ಚು ರಾಜ್ಯದಲ್ಲಿ ಹಾಗೆಯೇ ಇದೆ. ಈ ವಿವಾದ ತಣ್ಣಗಾಗುವ ಮುನ್ನವೇ ಬೆಂಗಳೂರಿನ ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಡಿರೋದಕ್ಕೆ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿರುವ ದೀಪದ ಕಂಬದ ಮೇಲೆ ಹಸಿರು  ಭಾವುಟ ಹಾರಾಡುತ್ತಿರುವ ಫೋಟೋವನ್ನು ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Written by - VISHWANATH HARIHARA | Edited by - Manjunath Naragund | Last Updated : Jan 30, 2024, 04:41 PM IST
  • ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾರಾಡುತ್ತಿರುವ ಈ ಫ್ಲಾಗ್ ಯಾವ ಧರ್ಮಕ್ಕೆ ಸೇರಿದ್ದು ಸಿದ್ದರಾಮಣ್ಣ ಉತ್ತರ ಕೊಡಿ ಎಂದು xನಲ್ಲಿ ಪ್ರಶ್ನೆ ಮಾಡಿದ್ದಾರೆ.
  • ಇದರ ಜೊತೆಗೆ ಮತ್ತೊಬ್ಬ ವ್ಯಕ್ತಿ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟಲ್ಲಿ ಈ ಧ್ವಜ ತೆಗೆಸುವ ತಾಕತ್ತು ಇಲ್ವಾ,
  • ಹಿಂದೂ ಗ್ರಾಮಸ್ಥರ ಮೇಲೆ ಮಾತ್ರ ನಿಮ್ಮ ಅಟ್ಟಹಾಸವ ಎಂದು ಪ್ರಶ್ನೆ ಮಾಡಿದ್ದಾರೆ.
ಮಂಡ್ಯದ ಕೆರಗೋಡು ಹನುಮಧ್ವಜ ವಿವಾದ ನಂತರ ಶಿವಾಜಿ ನಗರದಲ್ಲಿ ಹಸಿರು ಬಾವುಟ ವಿವಾದ title=

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆರಗೋಡು ಹನುಮಧ್ವಜ ವಿವಾದದ ಕಿಚ್ಚು ರಾಜ್ಯದಲ್ಲಿ ಹಾಗೆಯೇ ಇದೆ. ಈ ವಿವಾದ ತಣ್ಣಗಾಗುವ ಮುನ್ನವೇ ಬೆಂಗಳೂರಿನ ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಡಿರೋದಕ್ಕೆ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿರುವ ದೀಪದ ಕಂಬದ ಮೇಲೆ ಹಸಿರು  ಭಾವುಟ ಹಾರಾಡುತ್ತಿರುವ ಫೋಟೋವನ್ನು ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾರಾಡುತ್ತಿರುವ ಈ ಫ್ಲಾಗ್ ಯಾವ ಧರ್ಮಕ್ಕೆ ಸೇರಿದ್ದು ಸಿದ್ದರಾಮಣ್ಣ ಉತ್ತರ ಕೊಡಿ ಎಂದು xನಲ್ಲಿ ಪ್ರಶ್ನೆ ಮಾಡಿದ್ದಾರೆ. ಇದರ ಜೊತೆಗೆ ಮತ್ತೊಬ್ಬ ವ್ಯಕ್ತಿ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟಲ್ಲಿ ಈ ಧ್ವಜ ತೆಗೆಸುವ ತಾಕತ್ತು ಇಲ್ವಾ, ಹಿಂದೂ ಗ್ರಾಮಸ್ಥರ  ಮೇಲೆ ಮಾತ್ರ ನಿಮ್ಮ ಅಟ್ಟಹಾಸವ ಎಂದು ಪ್ರಶ್ನೆ ಮಾಡಿದ್ದಾರೆ. ಈ ಫೋಟೋ ವೈರಲ್ ಆಗುತ್ತಿದ್ದಂತೆ ಸಂಬಂಧಪಟ್ಟ ಪೊಲೀಸರು ಎಚ್ಚೆತ್ತುಕೊಂಡು ಕೆಲವರ ಸಮ್ಮುಖದಲ್ಲಿ ಹಸಿರು ಬಾವುಟ ತೆಗೆಸಿ ರಾಷ್ಟ್ರಧ್ವಜ ಹಾರಿಸಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಪೋಸ್ಟ್ ನಿಂದಾಗಿ ಬಿಸಿಬಿಸಿ ಚರ್ಚೆಗಳು ಆಗುತ್ತಿವೆ.

Credit Card: ಕ್ರೆಡಿಟ್ ಕಾರ್ಡ್ ಅನ್ನು ಈ ರೀತಿ ಬಳಸಿದರೆ ಸಿಗುತ್ತೆ ಹೆಚ್ಚಿನ ಪ್ರಯೋಜನ

ಇನ್ನೂ ಸ್ಥಳೀಯರು ಹೇಳುವ ಪ್ರಕಾರ ಅನೇಕ ವರ್ಷಗಳಿಂದ ಆ ಧ್ವಜ ಅಲ್ಲೇ ಇತ್ತು. ಇವತ್ತು ಇನ್ಸ್‌ಪೆಕ್ಟರ್ ಫೋನ್ ಮಾಡಿ ಧ್ವಜ ತೆಗೆಯಬೇಕು ಎಂದು ನಮ್ಮನ್ನ ಕರೆದರು. ಈಗ ಆ ಧ್ವಜವನ್ನು ತೆಗೆದು ರಾಷ್ಟ್ರ ಧ್ವಜ ಹಾಕಿದ್ದೇವೆ ಎಂದರು. ಒಟ್ಟಿನಲ್ಲಿ ರಾಜ್ಯದಲ್ಲಿ ಧ್ವಜ ದಂಗಲ್ ಜೋರಾಗಿದ್ದು, ಎಲ್ಲಿಗೆ ಹೋಗಿ ನಿಲ್ಲುತ್ತದೆಯೋ ಕಾದು‌ ನೋಡಬೇಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News