ಪೋಸ್ಟರ್ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಚಾಲನೆ ನೀಡಿದ ಮೇಯರ್ ಸಂಪತ್ ರಾಜ್

ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವವರ ವಿರುದ್ಧ ಪೋರ್ಟ್ ಕಾಯ್ದೆ ಪ್ರಕಾರ ದಂಡ ವಿಧಿಸಲಾಗುವುದು- ಬಿಬಿಎಂಪಿ ಮೇಯರ್

Last Updated : Aug 11, 2018, 04:30 PM IST
ಪೋಸ್ಟರ್ ತೆರವು ಕಾರ್ಯಾಚರಣೆ ಅಭಿಯಾನಕ್ಕೆ ಚಾಲನೆ ನೀಡಿದ ಮೇಯರ್ ಸಂಪತ್ ರಾಜ್  title=
Pic: ANI

ಬೆಂಗಳೂರು: ಸಿಲಿಕಾನ್ ಸಿಟಿಯ ಅಂದಗೆಡಿಸುತ್ತಿರುವ ಪೋಸ್ಟರ್ ಹಾಗೂ ಗೋಡೆ ಬರಹಗಳನ್ನು ಭಾನುವಾರ ಸಂಜೆಯೊಳಗೆ ತೆರವುಗೊಳಿಸುವಂತೆ ರಾಜ್ಯ ಹೈಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಪೋಸ್ಟರ್ ತೆರವು ಕಾರ್ಯಾಚರಣೆ ಅಭಿಯಾನಕ್ಕಿಂದು ಚಾಲನೆ ನೀಡಿದರು.

ಇಂದು ಬೆಳಿಗ್ಗೆ ಗಾಂಧಿನಗರದ ವೈ. ರಾಮಚಂದ್ರ ರಸ್ತೆಯಲ್ಲಿ ಆಡಳಿತ ಪಕ್ಷದ ನಾಯಕ ಎಂ. ಶಿವರಾಜ್ ಅವರೊಂದಿಗೆ ಸೇರಿ ಪೋಸ್ಟರ್ ಗಳನ್ನು ತೆರವುಗೊಳಿಸಿದ ಮೇಯರ್ ಸಂಪತ್ ರಾಜ್, 'ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಯಾರಾದರೂ ಪೋಸ್ಟರ್ ಅಂಟಿಸಿದರೆ ಪೋಸ್ಟರ್ ಅಂಟಿಸುವವರ ವಿರುದ್ಧ ಪೋರ್ಟ್ ಕಾಯ್ದೆ ಪ್ರಕಾರ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

Trending News