ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗಾಗಿ 2,502 ಕೋಟಿ ರೂ. ಅನುದಾನ ಮೀಸಲಿರಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್ಗೆ ಒಂದು ರೂ. ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದಾರೆ.
ಇದುವರೆಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಇದೀಗ ಇದರಲ್ಲಿ ಒಂದು ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಪ್ರತಿ ಲೀಟರ್ಗೆ 6 ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ಬಜೆಟ್ 2019: ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್ಗೆ ಒಂದು ರೂ. ಹೆಚ್ಚಳ