ಡೆಂಘಿ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳಲು ಎಲ್ಲಾ ಡಿಸಿ,ಜಿಪಂ ಸಿಇಒಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಡೆಂಘಿ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘಿ ಪ್ರಕರಣ ಕಂಡುಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು ಮತ್ತು ಆ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ತಿಳಿಸಿದರು.

Written by - Manjunath N | Last Updated : Jul 26, 2024, 04:19 PM IST
  • ಮನೆ ಸುತ್ತ ಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ತಿಳಿಸಬೇಕು.
  • ಮನೆ ಆವರಣ, ಹಿಂಭಾಗ ಮಳೆ ನೀರು ನಿಲ್ಲದಂತೆ ಎಚ್ಚರವಹಿಸಲು, ನೀರು ಬಳಸುವ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವಂತೆ ಸೂಚಿಸಬೇಕು.
  • ಗ್ರಾಮಗಳ ಜಾನುವಾರು ಕುಡಿಯುವ ನೀರಿನ ಸಂಗ್ರಹ ತೊಟ್ಟಿಗಳನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಬೇಕು
ಡೆಂಘಿ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳಲು ಎಲ್ಲಾ ಡಿಸಿ,ಜಿಪಂ ಸಿಇಒಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ title=

ಬೆಂಗಳೂರು: ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಡೆಂಘಿ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರಿಗೆ ಸೂಚಿಸಿದರು.

ಅವರು, ಗುರುವಾರದಂದು ಡೆಂಘಿ ಜ್ವರ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಬೆಂಗಳೂರಿನ ತಮ್ಮ ಕಚೇರಿಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು.

ಡೆಂಘಿ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘಿ ಪ್ರಕರಣ ಕಂಡುಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು ಮತ್ತು ಆ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ : Budget 2024: ನಿತೀಶ್-ನಾಯ್ಡುಗೆ ರಿಟರ್ನ್ ಗಿಫ್ಟ್, ಬಿಹಾರ-ಆಂಧ್ರಕ್ಕೆ ಬಜೆಟ್‌ನಲ್ಲಿ ಬಂಪರ್

ಮನೆ ಸುತ್ತ ಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ತಿಳಿಸಬೇಕು. ಮನೆ ಆವರಣ, ಹಿಂಭಾಗ ಮಳೆ ನೀರು ನಿಲ್ಲದಂತೆ ಎಚ್ಚರವಹಿಸಲು, ನೀರು ಬಳಸುವ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವಂತೆ ಸೂಚಿಸಬೇಕು. ಗ್ರಾಮಗಳ ಜಾನುವಾರು ಕುಡಿಯುವ ನೀರಿನ ಸಂಗ್ರಹ ತೊಟ್ಟಿಗಳನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.

ಸೊಳ್ಳೆ ಲಾರ್ವಾ ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಮನೆ ಭೇಟಿ ನಡೆಸಿ, ಲಾರ್ವಾ ಸಮೀಕ್ಷೆ, ಜಾಗ್ರತೆ ಮತ್ತು ಅಗತ್ಯ ಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಅದನ್ನು ಮೇಲ್ವಿಚಾರಣೆ ನಡೆಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ್.ಡಿ ಹಾಗೂ ಅನೇಕರು ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News