/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಹೆಲಿಕಾಫ್ಟರ್ ಅರ್ಧಕ್ಕೆ ವಾಪಸ್

ಹವಾಮಾನ ವೈಪರಿತ್ಯದಿಂದ ಲ್ಯಾಂಡ್ ಆಗದ ಹೆಲಿಕಾಫ್ಟರ್.

Last Updated : Jun 25, 2018, 11:49 AM IST
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಹೆಲಿಕಾಫ್ಟರ್ ಅರ್ಧಕ್ಕೆ ವಾಪಸ್ title=

ಬೆಂಗಳೂರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಹೆಲಿಕಾಫ್ಟರ್ ಹವಾಮಾನ ವೈಪರಿತ್ಯದಿಂದಾಗಿ ಹಾಸನ ಜಿಲ್ಲೆಯ ಸಕಲೇಶಪುರದಿಂದಲೇ ಬೆಂಗಳೂರಿಗೆ ವಾಪಸಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. 

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಇಂದು ಧರ್ಮಸ್ಥಳಕ್ಕೆ ಆಗಮಿಸಿ ಇಲಾಖಾ ಅಧಿಕಾರಿಗಳ ಜೊತೆ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿತ್ತು. ಅದಕ್ಕಾಗಿ ಇಂದು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಫ್ಟರ್ ಮೂಲಕ ಹೊರಟಿದ್ದರು. ಆದರೆ ಹಾಸನ ಜಿಲ್ಲೆಯ ಸಕಲೇಶಪುರದತ್ತ ತಲುಪುತ್ತಿದ್ದಂತೆ ಹವಾಮಾನ ವೈಪರಿತ್ಯದಿಂದಾಗಿ ವಿಮಾನ ಹಾರಾಟಕ್ಕೆ ಅಡಚಣೆಯುಂಟಾಗಿ ಅವರು ಅರ್ಧದಲ್ಲೇ ವಾಪಸ್ಸಾಗಬೇಕಾಯಿತು.