MP Renukacharya : ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ : ಎಂಪಿ ರೇಣುಕಾಚಾರ್ಯ

ಕಾವಿ ಹಾಕಿದ ಮೇಲೆ ಧರ್ಮದ ಬೋಧನೆ ಮಾಡಬೇಕು.  ಮಾನವ ಧರ್ಮಕ್ಕೆ ಜಯವಾಗಬೇಕು ಎನ್ನಬೇಕು. ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯನ್ನ ಅನೇಕ ಸ್ವಾಮೀಜಿಗಳು ಖಂಡಿಸಿದ್ದಾರೆ.

Written by - Zee Kannada News Desk | Last Updated : Apr 21, 2022, 01:56 PM IST
  • ಎಲ್ಲೋ ಒಂದು ಕಡೆ ಸಿದ್ದರಾಮಯ್ಯ, ಡಿಕೆಶಿ ಮೋದಿ ಟಾರ್ಗೆಟ್
  • ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ
  • ನಾನು ಸಚಿವ ಆಕಾಂಕ್ಷಿಯಲ್ಲ
MP Renukacharya : ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ : ಎಂಪಿ ರೇಣುಕಾಚಾರ್ಯ title=

ಬೆಂಗಳೂರು : ಕಾಂಗ್ರೆಸ್ ಮುಖಂಡರಿಗೆ ಬಿಜೆಪಿ ಪಕ್ಷದ ಬಗ್ಗೆ ಮೋದಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಸಿದ್ದರಾಮಯ್ಯ ಹಳೆಯದನ್ನು ಮರೆತಿದ್ದಾರೆ ಅನಿಸುತ್ತೆ. ಜೆಡಿಎಸ್ ನಲ್ಲಿ ಇದ್ದಾಗ ಸೋನಿಯ ಗಾಂಧಿ, ಕಾಂಗ್ರೆಸ್ ಗೆ ಬಳಸಿದ ಭಾಷೆಯ ಬಗ್ಗೆ ದಾಖಲೆ ಇದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಂಪಿ ರೇಣುಕಾಚಾರ್ಯ, ಕಾಂಗ್ರೆಸ್ ಕಿತ್ತೊಗೆಯಬೇಕು ಎಂದು ಇತ್ತೀಚೆಗೆ ನೀಡಿದ್ದ ಹೇಳಿಕೆ ಬಗ್ಗೆ ವಿಡಿಯೋ ದಾಖಲೆ ಇದೆ. ಎಲ್ಲೋ ಒಂದು ಕಡೆ ಸಿದ್ದರಾಮಯ್ಯ, ಡಿಕೆಶಿ ಮೋದಿ ಟಾರ್ಗೆಟ್ ಮಾಡಿದ್ರೆ. ಮೋದಿ ಬೈದರೆ ನಾವು ಅಧಿಕಾರಕ್ಕೆ ಬರಬಹುದು ಎಂಬ ಭ್ರಮಾಲೋಕದಲ್ಲಿ ಇದ್ದಾರೆ. ಅವರೆಲ್ಲಾ ಈಗ ಸಮಾಜವಾದಿಗಳಲ್ಲ ಮೋಜುವಾದಿಗಳಾಗಿದ್ದಾರೆ. ಮೋದಿ ಒಬ್ಬ ದೈವಿ ಪುರುಷ. ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್. ನ್ಯಾಷನಲ್ ಹೆರಾಲ್ಡ್, ಕಲ್ಲಿದ್ದಲು ವಿಚಾರ ಹೀಗೆ ಅನೇಕ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ರು. ಎರಡು ಬಾರಿ ಜನ ನಿಮ್ಮನ್ನು ಎಲ್ಲಿ ಇಟ್ಟಿದ್ದಾರೆ ನೋಡಿ. ಮೋದಿಯವರನ್ನು ವಿಶ್ವ ಮೆಚ್ಚಿದೆ ಇವರ ಬಗ್ಗೆ ಮಾತಾಡ್ತಿರಲ್ಲ. ನಿಮಗೆ ಯಾವ ನೈತಿಕ ಹಕ್ಕು ಇದೆ. ನೀವು ಭ್ರಷ್ಟಾಚಾರದ ಪಿತಾಮಹ. 40 ಪರ್ಸೆಂಟ್ ಅಂತಿರಲಾ ನೀವು ಸರ್ಕಾರದಲ್ಲಿ ಇದ್ದಾಗ ಏನಾಯ್ತು? ಗುತ್ತಿಗೆದಾರರನ್ನು ನಮ್ಮ ಪಕ್ಷದ ಮೇಲೆ ಎತ್ತಿ ಕಟ್ಟುತ್ತಿದ್ದೀರಾ. ಸಂತೋಷ್ ಸಾವಿನ ಸತ್ಯಾಸತ್ಯತೆ ತನಿಖೆಯಿಂದ ಹೊರ ಬರುತ್ತದೆ. ಡ್ರಾಫ್ಟ್ ರೆಡಿಯಾಗಿದ್ದು ಕಾಂಗ್ರೆಸ್ ಮುಖಂಡರ ಮನೆಯಲ್ಲಿ ಎಂದು ಗುಡುಗಿದ್ದಾರೆ. 

ಇದನ್ನೂ ಓದಿ : ಕಾಂಗ್ರೆಸ್ ಈಗ ದೇಶದಲ್ಲಿ ಮುಳುಗುತ್ತಿರುವ ಹಡಗು- ಬಿ.ಎಸ್. ಯಡಿಯೂರಪ್ಪ

ಮಠಾಧೀಶರ ಬಗ್ಗೆ ಅಪಾರ ಗೌರವ ಇದೆ. ದಿಂಗಾಲೇಶ್ವರ ಶ್ರೀಗಳಿಗೆ ತಲೆ ಸರಿ ಇಲ್ಲ. ಕಾಂಗ್ರೆಸ್ ಏಜಂಟ್ ಅಂತ ಹೇಳಿಕೆ ಕೊಟ್ಟಿದ್ದಾರೆ. ಕಾವಿ ಹಾಕಿದ ಮೇಲೆ ಧರ್ಮದ ಬೋಧನೆ ಮಾಡಬೇಕು. 
ಮಾನವ ಧರ್ಮಕ್ಕೆ ಜಯವಾಗಬೇಕು ಎನ್ನಬೇಕು. ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯನ್ನ ಅನೇಕ ಸ್ವಾಮೀಜಿಗಳು ಖಂಡಿಸಿದ್ದಾರೆ. ಇಂಥ ವಿಚಾರ ಇದ್ದರೆ ಸಿಎಂ ಜೊತೆ ಚರ್ಚೆ ಮಾಡಬೇಕಿತ್ತು. ಹಿಂಗೆ ಮಾತನಡುವವರು ಕಾಂಗ್ರೆಸ್ ಪಾರ್ಟಿ ಸೇರಿಕೊಳ್ಳಿ. ಕೆಲವು ಗುತ್ತಿಗೆದಾರರು ಕಾಂಗ್ರೆಸ್ ಹೇಳಿದಂತೆ ಕೇಳ್ತಾ ಇದ್ದಾರೆ. 40 ಪರ್ಸೆಂಟ್ ಅಂತ ಡ್ರಾಫ್ಟ್ ಹಾಕಿಸಿದ್ದಾರೆ. ಭೂತದ ಬಾಯಲ್ಲಿ ಭಗದ್ಗೀತೆ ಹೇಳಿದಂತಾಯ್ತು. ಭ್ರಷ್ಟಾಚಾರ ಹುಟ್ಟಿದ್ದೇ ಕಾಂಗ್ರೆಸ್ ಅವರಿಂದ. ದಾಖಲೆ ಇದ್ದರೆ ಕೆಂಪಣ್ಣ ಬಿಡುಗಡೆ ಮಾಡಲಿ. ಹಾವು ಬಿಡ್ತೀವಿ ಹಾವು ಬಿಡ್ತೀವಿ ಅಂದ್ರೆ ಹೇಗೆ. ನಮ್ಮ ಸರ್ಕಾರಕ್ಕೆ ಯಾರನ್ನು ಕೇಳಿ ತನಿಖೆ ಮಾಡಬೇಕು ಅನ್ನೋದು ಗೊತ್ತು. ಲೋಕಸಭೆಯಲ್ಲಿ ನಿಮಗೆ ಅಡ್ರೆಸ್ ಇದ್ಯಾ? ಎಂದು ಕಾಂಗ್ರಸ್ ಪ್ರಶ್ನಿಸಿದ್ದಾರೆ. 

ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ನಾನು ನಮ್ಮ ಕ್ಷೇತ್ರದ ವಿಚಾರವಾಗಿ ದೆಹಲಿಗೆ ಹೋಗಿದ್ದೆ. ನಾನು ಸಚಿವ ಆಕಾಂಕ್ಷಿಯಲ್ಲ. ಪಕ್ಷ ಏನು ತೀರ್ಮಾನ ಮಾಡುತ್ತೋ ಅದಕ್ಕೆ ಬದ್ದ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಕರ್ನಾಟಕಕ್ಕೆ ಇಂದು ಅರವಿಂದ ಕೇಜ್ರಿವಾಲ್ ಭೇಟಿ: ರಾಜ್ಯ ವಿಧಾನಸಭಾ ಚುನಾವಣೆಗೆ ಆಪ್ ಕಿಕ್ ಸ್ಟಾರ್ಟ್

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News