ನೀತಿ ಸಂಹಿತೆ ಜೊತೆ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ನಿಗಾವಹಿಸಿ: ಸಾಮಾನ್ಯ ವೀಕ್ಷಕ ಸೂಚನೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆಯುವ ಸಮಾವೇಶಗಳು, ಪ್ರಚಾರ ಕಾರ್ಯಗಳ ವೇಳೆ ವಿವಿಟಿ, ವಿಎಸ್‌ಟಿ ಹಾಗೂ ಎಫ್‌ಎಸ್‌ಟಿ ತಂಡಗಳು ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು. 

Written by - Bhavya Sunil Bangera | Last Updated : Apr 11, 2024, 07:01 PM IST
    • ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಿ
    • ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು
    • ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮಕರಂದ್ ಪಾಂಡುರಂಗ ಸೂಚನೆ
ನೀತಿ ಸಂಹಿತೆ ಜೊತೆ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ನಿಗಾವಹಿಸಿ: ಸಾಮಾನ್ಯ ವೀಕ್ಷಕ ಸೂಚನೆ title=
Lok Sabha Elections 2024

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಖರ್ಚು-ವೆಚ್ಚಗಳ ಮೇಲೆ ಅಧಿಕಾರಿಗಳು ಸರಿಯಾಗಿ ನಿಗಾವಹಿಸಬೇಕೆಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ಮಕರಂದ್ ಪಾಂಡುರಂಗ ಸೂಚನೆ ನೀಡಿದರು.

ಇದನ್ನೂ ಓದಿ: ಬಾಬಾ ಸಾಹೇಬರನ್ನು ಹೀನಾಯವಾಗಿ ಸೋಲಿಸಿದ್ದೇ ಕಾಂಗ್ರೆಸ್, ಈ ಇತಿಹಾಸ ಎಲ್ಲರಿಗೂ ತಿಳಿಯಲಿ: ಆರ್ ಅಶೋಕ್

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಕುಮಾರ ಕೃಪಾ ಸಭಾಂಗಣದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗಳ ಮೇಲೆ ಎಫ್ಎಸ್ಸಿ ತಂಡಗಳು ಸರಿಯಾಗಿ ನಿಗಾವಹಿಸುತ್ತಿರಬೇಕು. ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆಯುವ ಸಮಾವೇಶಗಳು, ಪ್ರಚಾರ ಕಾರ್ಯಗಳ ವೇಳೆ ವಿವಿಟಿ, ವಿಎಸ್‌ಟಿ ಹಾಗೂ ಎಫ್‌ಎಸ್‌ಟಿ ತಂಡಗಳು ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು. ಚುನಾವಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಸುಗಮವಾಗಿ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲುಸ್ತುವಾರಿ ಸಮಿತಿಯು ದೃಶ್ಯ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಮುದ್ರಣ ಮಾಧ್ಯಮಗಳ ಮೇಲೆ ಸರಿಯಾಗಿ ನಿಗಾವಹಿಸಿ ಯಾವುದೇ ವರದಿಯ ಕುರಿತು ಅನುಮಾನ ಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಸೂಚಿಸಿದರು.

ಇದನ್ನೂ ಓದಿ: ನಾನು ಲೆಕ್ಕಕ್ಕೆ ಇಲ್ಲವಾ? ಸರಿಸಾಟಿ ಅಲ್ಲವಾ? ಜನರೇ ತೀರ್ಮಾನ ಮಾಡುತ್ತಾರೆ: ಹೆಚ್.ಡಿ ಕುಮಾರಸ್ವಾಮಿ

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಎಂಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿನೋತ್ ಪ್ರಿಯಾ, ಎಂಸಿಎಂಸಿ ನೋಡಲ್ ಅಧಿಕಾರಿ ಪ್ರೀತಿ ಗೆಹ್ಲೋಟ್, ಚುನಾವಣಾ ವೆಚ್ಚ ವೀಕ್ಷಕ ಸಂಗೀತಾ ಯಾದವ್, ಗೌತಮ್ ಸಿಂಗ್ ಚೌಧರಿ ಉಪಸ್ಥಿತರಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News