ಮೂವರು ಮಕ್ಕಳನ್ನೂ ಕೊಂದು ತಾಯಿ ಆತ್ಮಹತ್ಯೆ

ಯಲ್ಲಮ್ಮ ಎಂಬಾಕೆ ಮಕ್ಕಳಾದ ಅಕ್ಷತಾ (7),ಕಾವ್ಯಾ(4) ಮತ್ತು ನಾಗರಾಜ್‌(2) ನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾಳೆ. 

Last Updated : Jun 18, 2019, 10:56 AM IST
ಮೂವರು ಮಕ್ಕಳನ್ನೂ ಕೊಂದು ತಾಯಿ ಆತ್ಮಹತ್ಯೆ title=

ಕೊಪ್ಪಳ: ಆ ಪುಟ್ಟ ಕಂದಮ್ಮಗಳು ಏನು ತಪ್ಪು ಮಾಡಿದ್ದವೋ... ಆಟವಾಡಿಕೊಂಡು, ಪುಟ್ಟ ಹೆಜ್ಜೆಯಿಡುತ್ತಾ ಕಿಲಕಿಲನೆ ನಗುತ್ತಾ ಇರಬೇಕಿದ್ದ ಮಕ್ಕಳು ಇದೀಗ ತಮ್ಮ ತಾಯಿಯಿಂದಲೇ ಕೊನೆಯುಸಿರೆಳೆದಿದ್ದಾರೆ. ಅಷ್ಟೇ ಅಲ್ಲ, ತಾಯಿ ಕೂಡ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಯರೇಹಂಚಿನಾಳ ಎಂಬಲ್ಲಿ ಸೋಮವಾರ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನೂ ನೀರಿನಲ್ಲಿ ಮುಳುಗಿಸಿ ಕೊಂದು ತಾನೂ ಆತ್ನಹತ್ಯೆಗೆ ಶರಣಾಗಿದ್ದಾಳೆ.

ಯಲ್ಲಮ್ಮ ಎಂಬಾಕೆ ಮಕ್ಕಳಾದ ಅಕ್ಷತಾ (7),ಕಾವ್ಯಾ(4) ಮತ್ತು ನಾಗರಾಜ್‌(2) ನನ್ನು ನೀರಿನಲ್ಲಿ ಮುಳುಗಿಸಿ ಹತ್ಯೆಗೈದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾಳೆ. ತಾಯಿ ಇಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. 

ಗ್ರಾಮಸ್ಥರು ನೀಡಿರುವ ಮಾಹಿತಿಯ ಪ್ರಕಾರ ಯಲ್ಲಮ್ಮನ ಗಂಡ ಪ್ರತಿದಿನ ಕುಡಿದು ಬಂದು ಜಗಳವಾಡುತ್ತಿದ್ದ ಎನ್ನಲಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Trending News