ಪಕ್ಷದ ಘನತೆಗೆ ಧಕ್ಕೆಯಾಗದಂತೆ ನಾಯಕರು ನೋಡಿಕೊಳ್ಳಬೇಕು : ಕಟೀಲ್

Nalin Kumar Kateel : ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.   

Written by - Prashobh Devanahalli | Last Updated : Jun 27, 2023, 05:43 PM IST
  • ಆಂತರಿಕ ವಿಚಾರ ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ
  • ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು
  • ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ
ಪಕ್ಷದ ಘನತೆಗೆ ಧಕ್ಕೆಯಾಗದಂತೆ ನಾಯಕರು ನೋಡಿಕೊಳ್ಳಬೇಕು : ಕಟೀಲ್  title=

ಬೆಂಗಳೂರು: ಪಕ್ಷದ ಘನತೆಗೆ ಧಕ್ಕೆ ಉಂಟಾಗದಂತೆ ನಾಯಕರು ನೋಡಿಕೊಳ್ಳಬೇಕು. ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಚರ್ಚಿಸುವುದು ಸೂಕ್ತವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ನೇಮಕ ಕುರಿತು ಪಕ್ಷದ ನಾಯಕರು ಹೇಳಿಕೆಗಳನ್ನು ನೀಡಿ ಪಕ್ಷದ ಘನತೆಗೆ ಧಕ್ಕೆ ತರಬಾರದು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ

ವಿಪಕ್ಷ ನಾಯಕನ ಸ್ಥಾನ ಮತ್ತಿತರ ಹುದ್ದೆಗೆ ಸಂಬಂಧಿಸಿ ಪಕ್ಷದ ಕೇಂದ್ರ ಸಂಸದೀಯ ಮಂಡಳಿಯು ಸೂಕ್ತ ಸಮಯದಲ್ಲಿ ಸಮರ್ಥ ನಿರ್ಧಾರವನ್ನು ಪ್ರಕಟಿಸಲಿದೆ. ಪಕ್ಷದ ಕೆಲವು ನಾಯಕರು ಈ ನಡುವೆ ಮಾಧ್ಯಮಗಳ ಮುಂದೆ ವಿವಿಧ ಹುದ್ದೆ ಕುರಿತು ಆಕಾಂಕ್ಷೆ ವ್ಯಕ್ತಪಡಿಸುವುದು ಗಮನಕ್ಕೆ ಬಂದಿದೆ. ಅಲ್ಲದೆ, ಪಕ್ಷದ ಸಭೆಗಳಲ್ಲಿ ಈ ವಿಷಯವಾಗಿ ಚರ್ಚಿಸುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಟ್ ಕಾಯಿನ್ ಕೇಸ್ ಗೆ ಮತ್ತೆ ಮರುಜೀವ: ಉನ್ನತ ಮಟ್ಟದ ತನಿಖೆಗೆ ನಗರ ಪೊಲೀಸ್ ಆಯುಕ್ತರ ಪತ್ರ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News