ರಾಜ್ಯದ ಜನರಿಗೆ ಈಗ ಭ್ರಷ್ಟಾಚಾರದ ಗ್ಯಾರಂಟಿ ಸಿಕ್ಕಿದೆ: ನಳೀನ್ ಕುಮಾರ್ ಕಟೀಲ್

'ಕೈ'ಕಮಾಂಡ್ #ATMSarkaraಕ್ಕೆ ಕಲೆಕ್ಷನ್ ಟಾಸ್ಕ್ ನೀಡುತ್ತಿದೆ. ಅದನ್ನು ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈಗ ಸಚಿವ ಎನ್.ಚೆಲುವರಾಯಸ್ವಾಮಿ ಸರದಿ. ಅಧಿಕಾರಿಗಳನ್ನು ಬಳಸಿಕೊಂಡು ಕಲೆಕ್ಷನ್ ಮಾಡಿ ಎನ್ನುವುದನ್ನು ಹೈಕಮಾಂಡ್ ಸಭೆಯಲ್ಲಿ ಸೂಚನೆ ಕೊಟ್ಟಿದ್ದೇ? ಎಂದು ಕಟೀಲ್ ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Aug 8, 2023, 04:57 PM IST
  • ಕೃಷಿ ಸಚಿವ ಎನ್‌.ಚೆಲುವರಾಯ ಸ್ವಾಮಿ ವಿರುದ್ಧ ಲಂಚ ಆರೋಪ ಪ್ರಕರಣ
  • ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ
  • ರಾಜ್ಯದ ಜನರಿಗೆ ಈಗ ಭ್ರಷ್ಟಾಚಾರದ ಗ್ಯಾರಂಟಿ ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆ
ರಾಜ್ಯದ ಜನರಿಗೆ ಈಗ ಭ್ರಷ್ಟಾಚಾರದ ಗ್ಯಾರಂಟಿ ಸಿಕ್ಕಿದೆ: ನಳೀನ್ ಕುಮಾರ್ ಕಟೀಲ್ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟೀಲ್ ಆಕ್ರೋಶ!

ಬೆಂಗಳೂರು: ಕೃಷಿ ಸಚಿವ ಎನ್‌.ಚೆಲುವರಾಯ ಸ್ವಾಮಿ ವಿರುದ್ಧ ಲಂಚ  ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆ ಎನ್ನಲಾಗಿರುವ ಪತ್ರದ ಕುರಿತು ಸಿಐಡಿ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸೂಚಿಸಿದ್ದಾರೆ.

ಇನ್ನೂ ಇದೇ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಮಂಗಳವಾರ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ರಾಜ್ಯದ ಜನರಿಗೆ ಈಗ ಭ್ರಷ್ಟಾಚಾರದ ಗ್ಯಾರಂಟಿ ಸಿಕ್ಕಿದೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ನಟಿ ಸ್ಪಂದನಾ ಹೃದಯಾಘಾತದಿಂದ ನಿಧನ: ಬ್ಯಾಂಕಾಕ್’ನಲ್ಲಿ ಮರಣೋತ್ತರ ಪರೀಕ್ಷೆ

‘'ಕೈ'ಕಮಾಂಡ್ #ATMSarkaraಕ್ಕೆ ಕಲೆಕ್ಷನ್ ಟಾಸ್ಕ್ ನೀಡುತ್ತಿದೆ. ಅದನ್ನು ಸಚಿವರು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಈಗ ಸಚಿವ ಎನ್.ಚೆಲುವರಾಯಸ್ವಾಮಿ ಸರದಿ. ಅಧಿಕಾರಿಗಳನ್ನು ಬಳಸಿಕೊಂಡು ಕಲೆಕ್ಷನ್ ಮಾಡಿ ಎನ್ನುವುದನ್ನು ಹೈಕಮಾಂಡ್ ಸಭೆಯಲ್ಲಿ ಸೂಚನೆ ಕೊಟ್ಟಿದ್ದೇ?’ ಎಂದು ಕಟೀಲ್ ಪ್ರಶ್ನಿಸಿದ್ದಾರೆ.

‘ಭ್ರಷ್ಟಾಚಾರದ‌ ಪ್ರಕರಣವನ್ನು ದಿಕ್ಕು ತಪ್ಪಿಸಲು ಕಾಂಗ್ರೆಸ್ ವಿರುದ್ಧದ ಪತ್ರಗಳನ್ನೆಲ್ಲಾ 'ನಕಲಿ ಪತ್ರ' ಎನ್ನುವುದು ಕಾಂಗ್ರೆಸ್ ತಂತ್ರ. ಈಗ ಚೆಲುವರಾಯಸ್ವಾಮಿ ವಿರುದ್ಧದ ಪತ್ರವನ್ನೇ ನಕಲಿ ಎನ್ನುವ ಮೂಲಕ ರಾಜಭವನದ ಘನತೆ, ರಾಜ್ಯಪಾಲರ ನಡೆಗೆ ಈ ಸರ್ಕಾರ ಅವಮಾನ ಮಾಡುತ್ತಿದೆ’ ಎಂದು ಕಟೀಲ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶಾಸಕರು v/s ಸಚಿವರ ನಡುವಿನ ಮುನಿಸು ಶಮನ ಯತ್ನ

‘ಅಧಿಕಾರಕ್ಕೆ ಬಂದಾಗಿನಿಂದ ಒಂದಿಲ್ಲೊಂದು ಹಳವಂಡಗಳನ್ನು ಮಾಡುತ್ತಿರುವ ಚೆಲುವರಾಯಸ್ವಾಮಿ, ಈಗ ತಮ್ಮ ಇಲಾಖೆಯಲ್ಲೇ ಕಲೆಕ್ಷನ್ ಮಾಡಲು ಇಳಿದಿದ್ದಾರೆ. ಇಂತಹ ಪರಮ ಭ್ರಷ್ಟ ಸಚಿವರ ರಾಜೀನಾಮೆ ಪಡೆಯಲು ಮೀನಾಮೇಷ ಎಣಿಸುತ್ತಿರುವುದೇಕೆ ಸಿಎಂ ಸಿದ್ದರಾಮಯ್ಯನವರೇ, ಇನ್ನೂ ನಿಮ್ಮ ಕಲೆಕ್ಷನ್ ಟಾರ್ಗೆಟ್ ಮುಟ್ಟಿಲ್ಲವೇ?’ ಎಂದು ಅವರು ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News