ನೇಹಾ ಕೊಲೆ ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶ

Neha Hiremath murder : ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಹಿನ್ನೆಲೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.   

Written by - Zee Kannada News Desk | Last Updated : Apr 20, 2024, 06:46 PM IST
  • ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ.
  • ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂ ಆಕ್ರೋಶ ವ್ಯಕ್ತಪಡಿಸುವ ಪೋಸ್ಟ್ ಹಾಕಿಕೊಂಡಿದ್ದಾರೆ.
  • ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ.
ನೇಹಾ ಕೊಲೆ  ಪ್ರಕರಣ : ನಟಿ ರಚಿತಾ ರಾಮ್, ನಟ ರಿಷಬ್ ಶೆಟ್ಟಿ ಆಕ್ರೋಶ title=

Neha murder case : ಗುರುವಾರ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ 24 ವರ್ಷದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಕುರಿತಂತೆ ನಟ ರಿಷಬ್ ಶೆಟ್ಟಿ ಹಾಗೂ ನಟಿ ರಚಿತಾ ರಾಮ್ ತಮ್ಮ ಇನ್ಸ್ಟಾಗ್ರಾಂ ಆಕ್ರೋಶ ವ್ಯಕ್ತಪಡಿಸುವ ಪೋಸ್ಟ್ ಹಾಕಿಕೊಂಡಿದ್ದಾರೆ. 

ಇದನ್ನು ಓದಿ : 

ಆಗಿರುವ ಘಟನೆಗೆ ರಾಜಕೀಯ ಕೊಂಡಿ ತಗಲಿಸುವುದು ಬೇಡ, ಆಗಿರುವುದು ಅನ್ಯಾಯ, ಇದಕ್ಕೆ ನ್ಯಾಯ ದೊರಕಿಸಬೇಕಿದೆ ಅಷ್ಟೇ! ಜಾತಿ , ಧಾರ್ಮ ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. 

ತಪ್ಪು ಯಾರೇ ಮಾಡಿದರೂ ಅದು ತಪ್ಪೇ. ಸರಕಾರಕ್ಕೆ ನನ್ನ ಮನವಿ ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ . ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೇ ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನ ಸಾಮಾನ್ಯರ ಕೈಗೆ ಒಪ್ಪಸಿ. ಎಂದು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ ಹಾಕಿಕೊಂಡು ಈ ರೀತಿ ಬರೆದು ಕೊಂಡಿದ್ದಾರೆ. 

ಇನ್ನು ರಿಷಬ್ ಶೆಟ್ಟಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಕುರಿತಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 

ಇದನ್ನು ಓದಿ : 

ನೇಹಾ ಹಿರೇಮಠ್ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

#JusticeForNeha ಎಂದು ಬರೆದುಕೊಂಡಿದ್ದಾರೆ. 

Trending News