ಉತ್ತರ ಕರ್ನಾಟಕದಿಂದ ಉಜ್ಜಯಿನಿ ಕ್ಷೇತ್ರಕ್ಕೆ ನೂತನ ಬಸ್ ಸೇವೆ ಆರಂಭ

New bus service: ಸಂಘ, ಸಂಸ್ಥೆಗಳ, ಭಕ್ತರ ಬಹುದಿನಗಳ ಬೇಡಿಕೆಗೆ ಅನುಸಾರವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬರುವ ಶುಕ್ರವಾರ ಮಹಾಶಿವರಾತ್ರಿ ದಿನದಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ತಿಳಿಸಿದ್ದಾರೆ.

Written by - Manjunath N | Last Updated : Mar 6, 2024, 11:56 PM IST
  • ಮಾರ್ಚ್ 8 ರಿಂದ ಧಾರವಾಡ ಹೊಸ ಬಸ್ ನಿಲ್ದಾಣದಿಂದ ಉಜ್ಜಯಿನಿಗೆ ಬಸ್ ಸಂಚಾರ ಆರಂಭವಾಗಲಿದೆ
  • ಪ್ರತಿದಿನ ಬೆಳಿಗ್ಗೆ 7:15 ಗಂಟೆಗೆ ಧಾರವಾಡದಿಂದ ಹೊರಟು ಮಧ್ಯಾಹ್ನ 12:30 ಗಂಟೆಗೆ ಉಜ್ಜಯಿನಿ ತಲುಪಲಿದೆ
  • ಭಕ್ತರಿಗೆ ದೇವರ ಪೂಜೆ, ದರ್ಶನ ಮತ್ತು ಪ್ರಸಾದಕ್ಕೆ ಅನುಕೂಲವಾಗುವಂತೆ ಬಸ್ ನಿಲುಗಡೆ ಆಗಲಿದೆ
ಉತ್ತರ ಕರ್ನಾಟಕದಿಂದ ಉಜ್ಜಯಿನಿ ಕ್ಷೇತ್ರಕ್ಕೆ ನೂತನ ಬಸ್ ಸೇವೆ ಆರಂಭ title=
ಸಾಂಧರ್ಭಿಕ ಚಿತ್ರ

ಹುಬ್ಬಳ್ಳಿ:  ಸಂಘ, ಸಂಸ್ಥೆಗಳ, ಭಕ್ತರ ಬಹುದಿನಗಳ ಬೇಡಿಕೆಗೆ ಅನುಸಾರವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬರುವ ಶುಕ್ರವಾರ ಮಹಾಶಿವರಾತ್ರಿ ದಿನದಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ತಿಳಿಸಿದ್ದಾರೆ.

ಇದನ್ನೂ ಓದಿ: Koppal : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಜ್ಜಯಿನಿ ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳವಾಗಿದ್ದು, ಪಂಚಪೀಠದ ನೆಲೆಯಾಗಿದೆ. ಧಾರವಾಡದಿಂದ ಬಸ್ ಸೇವೆ ಪ್ರಾರಂಭಿಸಬೇಕೆಂಬುದು ಜನರ ಬಹುದಿನಗಳ ಬೇಡಿಕೆ ಆಗಿತ್ತು. ಧಾರವಾಡ ವೀರಶೈವ ಜಂಗಮ ಸಂಸ್ಥೆಯು ಮನವಿ ಸಲ್ಲಿಸಿ, ಶ್ರೀ ಕ್ಷೇತ್ರಕ್ಕೆ ಶೀಘ್ರ ಬಸ್ ಸೇವೆ ಪ್ರಾರಂಭಿಸಲು ವಿನಂತಿಸಿತ್ತು. ಅದರಂತೆ ಪರಿಶೀಲಿಸಿ, ಕ್ರಮ ಕೈಗೊಂಡಿದ್ದು, ಧಾರವಾಡದಿಂದ ಉಜ್ಜಯಿನಿಗೆ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ.

ಇದನ್ನೂ ಓದಿ : Foods To Boost Memory: ಮಕ್ಕಳಲ್ಲಿ ನೆನೆಪಿನ ಶಕ್ತಿ ಹೆಚ್ಚಿಸಲು ಈ ಆಹಾರಗಳನ್ನು ತಪ್ಪದೇ ನೀಡಿ!

ಮಾರ್ಚ್ 8 ರಿಂದ ಧಾರವಾಡ ಹೊಸ ಬಸ್ ನಿಲ್ದಾಣದಿಂದ ಉಜ್ಜಯಿನಿಗೆ ಬಸ್ ಸಂಚಾರ ಆರಂಭವಾಗಲಿದೆ. ಪ್ರತಿದಿನ ಬೆಳಿಗ್ಗೆ 7:15 ಗಂಟೆಗೆ ಧಾರವಾಡದಿಂದ ಹೊರಟು ಮಧ್ಯಾಹ್ನ 12:30 ಗಂಟೆಗೆ ಉಜ್ಜಯಿನಿ ತಲುಪಲಿದೆ. ಭಕ್ತರಿಗೆ ದೇವರ ಪೂಜೆ, ದರ್ಶನ ಮತ್ತು ಪ್ರಸಾದಕ್ಕೆ ಅನುಕೂಲವಾಗುವಂತೆ ಬಸ್ ನಿಲುಗಡೆ ಆಗಲಿದೆ.

ನಂತರ ಮಧ್ಯಾಹ್ನ 2 ಗಂಟೆಗೆ ಉಜ್ಜಯಿನಿಯಿಂದ ಹೊರಟು ಸಂಜೆ 6:30 ಗಂಟೆಗೆ ಮರಳಿ ಬಸ್ ಧಾರವಾಡ ತಲುಪಲಿದೆ. ಪ್ರತಿದಿನ ಬೆಳಿಗ್ಗೆ ಧಾರವಾಡದಿಂದ ಹೊರಟು ಹುಬ್ಬಳ್ಳಿ, ಗದಗ, ಮುಂಡರಗಿ, ಹಡಗಲಿ ಮಾರ್ಗವಾಗಿ ಉಜ್ಜಯಿನಿ ತಲುಪುತ್ತದೆ. ಮರಳಿ ಇದೇ ಮಾರ್ಗದಲ್ಲಿ ಬಂದು ಧಾರವಾಡ ತಲುಪುತ್ತದೆ. ಈ ಭಾಗದ ಭಕ್ತರು, ಸಾರ್ವಜನಿಕ ಪ್ರಯಾಣಿಕರು ಈ ಬಸ್ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News