NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ

NIA raids in Dakshina Kannada: ದಕ್ಷಿಣ ಭಾರತದ ನಿಷೇಧಿತ ಪಿಎಫ್​ಐ (Popular Front of India) ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇದಿಷ್ಟೇ ಅಲ್ಲದೆ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

Written by - Bhavishya Shetty | Last Updated : May 31, 2023, 09:27 AM IST
    • ದಕ್ಷಿಣ ಕನ್ನಡ ಜಿಲ್ಲೆಯ ಕನಿಷ್ಠ 16 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ
    • ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ
    • ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪ
NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ title=
NIA raid

NIA raids in Dakshina Kannada: ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ಮತ್ತು ವೇಣೂರು ಸೇರಿದಂತೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕನಿಷ್ಠ 16 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದೆ.

ಇದನ್ನೂ ಓದಿ: Jammu Bus Accident : ಕಂದಕಕ್ಕೆ ಉರುಳಿದ ಬಸ್ : ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ 10 ಜನರ ಸಾವು

ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇನ್ನು ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.

ದಕ್ಷಿಣ ಭಾರತದ ನಿಷೇಧಿತ ಪಿಎಫ್​ಐ (Popular Front of India) ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇದಿಷ್ಟೇ ಅಲ್ಲದೆ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಸದ್ಯ ದೇಶದಲ್ಲಿ ಕೋಮು ಗಲಭೆ ಸೃಷ್ಠಿಸಲು ಯತ್ನಿಸಲಾಗುತ್ತಿದೆ ಎಂಬ ಆರೋಪದಡಿ ತನಿಖೆಯ ಜಾಡು ಹಿಡಿದ ಅಧಿಕಾರಿಗಳು ಕರಾವಳಿಯಲ್ಲಿ ಬೆಳ್ಳಂ ಬೆಳಗ್ಗೆ ಕಾರ್ಯಾಚರಣೆಗೆ ಇಳಿದಿದ್ದಾರೆ.

ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ ಎನ್ ​ಐ ಎ ಅಧಿಕಾರಿಗಳು ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜೀಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಬಂಧಿಸಿದ್ದರು.

ಇದನ್ನೂ ಓದಿ: Rajasthan: ಸಚಿನ್ ಪೈಲಟ್ ಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ? 4 ಗಂಟೆಗಳ ಕಾಲ ನಡೆದ ಮೀಟಿಂಗ್ ನಲ್ಲಿ ನಡೆದಿದ್ದೇನು?

ಜೊತೆಗೆ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನೂ ಬಂಧಿಸಲಾಗಿತ್ತು. ಈ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆಗಳೂ ಸಹ ಅಧಿಕಾರಿಗಳ ಕೈವಶವಾಗಿತ್ತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News