ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.

Written by - Prashobh Devanahalli | Last Updated : Jul 11, 2024, 05:47 PM IST
    • ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಿಆರ್ ಡಬ್ಲ್ಯೂಸಿ ಸಭೆ ತೀರ್ಮಾನ
    • ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ
    • ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್ title=
File Photo

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು.

ಇದನ್ನೂ ಓದಿ: ಟೀಂ ಇಂಡಿಯಾದ ಹೆಡ್ ಕೋಚ್ ಆಗುತ್ತಿದ್ದಂತೆ ಬಿಸಿಸಿಐ ಮುಂದೆ ಈ ಬೇಡಿಕೆ ಇಟ್ಟ ಗೌತಮ್ ಗಂಭೀರ್! ಏನದು?

“ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ” ಎಂದು ತಿಳಿಸಿದರು.

ಹೆಚ್ಚಿನ ಮಳೆಗೆ ಪ್ರಾರ್ಥಿಸೋಣ:

ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸಿಆರ್ ಡಬ್ಲ್ಯೂಸಿ ಸಭೆ ತೀರ್ಮಾನದ ಬಗ್ಗೆ ಕೇಳಿದಾಗ, “ಇನ್ನು ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ” ಎಂದರು.

ಇದನ್ನೂ ಓದಿ: ಹುಡುಗ ಹುಡುಗಿಯಾಗಿ ಬದಲಾದರೆ ʼಪಿರಿಯಡ್ಸ್ʼ ಬರುತ್ತಾ..? ಆ್ಯಂಕರ್ ಪ್ರಶ್ನೆ ಕೇಳಿ ನಟಿ ಶಾಕ್‌

ನಾಳೆಯೂ ಸಭೆ ಮುಂದುವರಿಯಲಿದೆ:

ಇಂದಿನ ಎಐಸಿಸಿ ಸತ್ಯಶೋಧನಾ ಸಮಿತಿ ಸಭೆ ಬಗ್ಗೆ ಕೇಳಿದಾಗ, “ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಎಐಸಿಸಿ ಸತ್ಯಶೋಧನಾ ಸಮಿತಿ ಇಂದು ಶಾಸಕರು ಹಾಗೂ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ನಾಳೆ ಪರಾಜಿತ ಅಭ್ಯರ್ಥಿಗಳು ಹಾಗೂ ಇತರ ನಾಯಕರ ಅಭಿಪ್ರಾಯ ಸಂಗ್ರಹಿಸಲಿದೆ. ನಂತರ ಈ ಸಮಿತಿಯು ಎಐಸಿಸಿಗೆ ತನ್ನ ವರದಿ ಸಲ್ಲಿಸಲಿದೆ” ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News