ಕೋಟ್ಯಂತರ ರೂಪಾಯಿ ಮೌಲ್ಯದ ಜಾಗ ಅಲ್ಪಸಂಖ್ಯಾತರ ಇಲಾಖೆಗೆ: ಕೂಡಲೇ ಆದೇಶ ರದ್ದತಿಗೆ ಆರ್ ಅಶೋಕ್ ಆಗ್ರಹ

ಈ ಸರ್ಕಾರ ಕಳೆದ ಒಂಭತ್ತು ತಿಂಗಳಿಂದ ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರಗಳನ್ನೇ ಮಾಡುತ್ತಿದೆ. ಮತಕ್ಕಾಗಿ ಸರ್ಕಾರದ ಆಸ್ತಿಗಳನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರ್ ಅಶೋಕ್ ಆಪಾದಿಸಿದ್ದಾರೆ. 

Written by - Ranjitha R K | Last Updated : Feb 29, 2024, 12:29 PM IST
  • ಅಲ್ಪಸಂಖ್ಯಾತರನ್ನು ಓಲೈಕೆ ಮುಂದಾದ ಕಾಂಗ್ರೆಸ್ ಸರ್ಕಾರ
  • ಸರ್ಕಾರದ ಕ್ರಮಕ್ಕೆ ಆರ್ ಅಶೋಕ್ ಅಕ್ರೋಶ
  • ಪಶುಗಳ ಚಿಕಿತ್ಸೆಗೆ ಬೆಂಗಳೂರಿನಿಂದ ಕೆಂಗೇರಿಗೆ ಹೋಗಬೇಕೆ? - ಅಶೋಕ್
ಕೋಟ್ಯಂತರ ರೂಪಾಯಿ ಮೌಲ್ಯದ ಜಾಗ ಅಲ್ಪಸಂಖ್ಯಾತರ ಇಲಾಖೆಗೆ: ಕೂಡಲೇ ಆದೇಶ ರದ್ದತಿಗೆ ಆರ್ ಅಶೋಕ್ ಆಗ್ರಹ  title=

ಬೆಂಗಳೂರು : ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ಅಲ್ಪಸಂಖ್ಯಾತರ ಇಲಾಖೆಗೆ ನೀಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಸರ್ಕಾರ ನೀಡಿರುವ ಈ ಆದೇಶವನ್ನು ಕೂಡಲೇ ರದ್ದು ಮಾಡಬೇಕು ಎಂದು  ಅವರು ಆಗ್ರಹಿಸಿದ್ದಾರೆ. 

ಈ ಸರ್ಕಾರ ಕಳೆದ ಒಂಭತ್ತು ತಿಂಗಳಿಂದ ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರಗಳನ್ನೇ ಮಾಡುತ್ತಿದೆ. ಮತಕ್ಕಾಗಿ ಸರ್ಕಾರದ ಆಸ್ತಿಗಳನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾವಣೆ ಮಾಡಲಾಗುತ್ತಿದೆ. ಕುವೆಂಪು ವಾಣಿ ತೆಗೆದುಹಾಕುವ, ನಾಡಗೀತೆ ಕಡ್ಡಾಯದಿಂದ ವಿನಾಯಿತಿ ನೀಡುವ, ಪಾಕಿಸ್ತಾನಕ್ಕೆ ಜೈಕಾರ ಹಾಕಲು ಅವಕಾಶ ಮಾಡುವಂತಹ ನೀಚ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ ಎಂದು ಆರ್.ಅಶೋಕ್  ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇದನ್ನೂ ಓದಿ : ಯಲ್ಲಮನಗುಡ್ಡದಲ್ಲಿ ಕಳ್ಳತನದಿಂದ ಅಕ್ರಮ ಸಾರಾಯಿ ದಂಧೆ

ಈಗ ಸುಮಾರು 500 ಕೋಟಿ ರೂ. ಬೆಲೆಬಾಳುವ, ಮೈಸೂರು ರಸ್ತೆಯ ಬಳಿಯಲ್ಲಿರುವ, ಚಾಮರಾಜಪೇಟೆಯ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ವಕ್ಫ್ ಮಂಡಳಿಯವರು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಲೂಟಿ ಹೊಡೆದಿದ್ದು, ಅದೇ ಭೂಮಿಯನ್ನು ಅಲ್ಪಸಂಖ್ಯಾತರ ಇಲಾಖೆಗೆ ನೀಡಬಹುದಿತ್ತು. ಅದನ್ನು ಬಿಟ್ಟು ಅಲ್ಪಸಂಖ್ಯಾತರನ್ನು ಓಲೈಸಲು ಪಶುಸಂಗೋಪನೆ ಇಲಾಖೆಯ ಜಾಗವನ್ನು ಲೂಟಿ ಮಾಡಬಾರದು‌  ಎಂದಿದ್ದಾರೆ. 

ಈಗಾಗಲೇ ದೇವಸ್ಥಾನಗಳ ಹುಂಡಿಯಿಂದ ಹಣ ತೆಗೆದಿದ್ದು, ಈಗ ಪಶುಸಂಗೋಪನೆ ಇಲಾಖೆಗೂ ಕನ್ನ ಹಾಕಲಾಗಿದೆ. ಹೀಗೆ ಮಾಡಿದರೆ ಪಶುಗಳ ಆರೈಕೆ, ಚಿಕಿತ್ಸೆ ಮಾಡಲು ಸಾಧ್ಯವಿಲ್ಲ. ಪಶುಗಳ ಚಿಕಿತ್ಸೆಗೆ ದೂರದ ಕೆಂಗೇರಿಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ : ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಹೆಚ್.ಎಂ.ರೇವಣ್ಣ ನೇಮಕ

ಅಲ್ಪಸಂಖ್ಯಾತರ ಸಂಖ್ಯೆ ಹೆಚ್ಚಿರುವುದರಿಂದ ಜಮೀನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಗಾದರೆ ಮುಜರಾಯಿ ಇಲಾಖೆಯ ಜಾಗವನ್ನೂ ಬರೆದುಕೊಡುತ್ತಾರೆಯೇ? ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಸರ್ಕಾರ ಪದೇ ಪದೇ ಎಡವಟ್ಟು ಮಾಡುತ್ತಿದೆ. ಜನರ ಆಸ್ತಿಯನ್ನು ಕೂಡಾ ಅಲ್ಪಸಂಖ್ಯಾತ ಇಲಾಖೆಗೆ ನೀಡಿದರೂ ಅಚ್ಚರಿ ಪಡಬೇಕಿಲ್ಲ ಎಂದು ಅಶೋಕ್ ಕಳವಳ ವ್ಯಕ್ತಪಡಿಸಿದ್ದಾರೆ. 

ಸರ್ಕಾರಕ್ಕೆ ಯಾರೇ ಭೂಮಿ ದಾನ ಮಾಡಿದರೂ ಅದು ಸರ್ಕಾರದ ಆಸ್ತಿಯಾಗಿರುತ್ತದೆ‌. ಅದನ್ನು ಹೀಗೆ ಬೇರೆ ಇಲಾಖೆಗೆ ನೀಡಬಾರದು. ಬೇರೆ ಖಾಲಿ ಜಮೀನುಗಳನ್ನು ನೀಡಲು ನಮ್ಮ ಆಕ್ಷೇಪ ಇಲ್ಲ. ಆದರೆ ಈಗಾಗಲೇ ಬಳಕೆಯಲ್ಲಿರುವ ಪಶುಸಂಗೋಪನೆ ಇಲಾಖೆಯ ಜಮೀನನ್ನು ನೀಡಬಾರದು ಎಂದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News