ಎಸ್.ಸಿ ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲು ಹೆಚ್ಚಳ ಸುಗ್ರೀವಾಜ್ಞೆ ಮೂಲಕ ಜಾರಿಗೆ‌ ತರಲು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಸ್ತು ಅಂದಿದೆ.

Written by - Prashobh Devanahalli | Edited by - Manjunath N | Last Updated : Oct 20, 2022, 05:14 PM IST
  • ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ನೇಮಕಾತಿ ನಿಯಮಗಳ ಅನುಮೋದನೆ.
  • ಕರ್ನಾಟಕ ಲೋಕಸೇವಾ ಆಯೋಗದ 2020-22ನೇ ಸಾಲಿನ ವಾರ್ಷಿಕ ವರದಿಯ ಬಗ್ಗೆ ನಿರ್ಧಾರ ಸಾಧ್ಯತೆ.
  • ಜಲಸಂಪನ್ಮೂಲ ಅಡಿಯ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆಗೆ ಅನುಮೋದನೆ.
ಎಸ್.ಸಿ ಎಸ್.ಟಿ ಮೀಸಲಾತಿ ಹೆಚ್ಚಳಕ್ಕೆ ಸುಗ್ರೀವಾಜ್ಞೆ title=

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲು ಹೆಚ್ಚಳ ಸುಗ್ರೀವಾಜ್ಞೆ ಮೂಲಕ ಜಾರಿಗೆ‌ ತರಲು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಸ್ತು ಅಂದಿದೆ.

ಇದರ ಜೊತೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು (SWD) ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲು ರೂ. 1500.00 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆಗೆ ಸರ್ಕಾರದ ಅನುಮತಿ ನೀಡಿ ದಿನಾಂಕ: 30.05.2022 ರಂದು ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನ ನೀಡುವ ಬಗ್ಗೆ ನಿರ್ಧಾರ ನೀಡಿದೆ.

ಇದನ್ನೂ ಓದಿ : Benefits Of Jaggery: ಬಿಪಿಯಿಂದ ರಕ್ತಹೀನತೆಯವರೆಗೆ ಹಲವು ಸಮಸ್ಯೆಗಳ ನಿವಾರಣೆಗೆ ಬೆಲ್ಲವೇ ಮದ್ದು

ಇನ್ನು ಉಳಿದಂತೆ ಸಂಪುಟ ಸಭೆಯಲ್ಲಿ ಕೈಗೊಳ್ಳಲಿರುವ ಇತರ ಪ್ರಮುಖ ನಿರ್ಧಾರಗಳೇನು?

  • ಕರ್ನಾಟಕ ಲೋಕಸೇವಾ ಆಯೋಗದ 2020-22ನೇ ಸಾಲಿನ ವಾರ್ಷಿಕ ವರದಿಯ ಬಗ್ಗೆ ನಿರ್ಧಾರ ಸಾಧ್ಯತೆ.
  • ಬೆಂಗಳೂರಿನ 23.3. ನಗರ ಹಂತದಲ್ಲಿರುವ ತಿರುಮಲೆ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯ ಸಂಸ್ಥೆಗೆ ನೀಡಿರುವ 31,215 ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಾಗದ ಗುತ್ತಿಗೆ ಅವಧಿಯನ್ನು ದಿನಾಂಕ: 01.04.2001 ರಿಂದ ಅನ್ವಯವಾಗುವಂತ 30 ವರ್ಷಗಳ ಅವಧಿಗೆ ನವೀಕರಿಸುವ ಬಗ್ಗೆ ನಿರ್ಧಾರ.
  • ಕರ್ನಾಟಕ ಲೋಕಾಯುಕ್ತ ಸಂಸ್ಥೆಯ 2018-19, 2019 20 .ಲೆಕ್ಕಣಿಯನ್ನು ಮತ್ತು 2020-21ನೇ ಸಾಲುಗಳ ವಾರ್ಷಿಕ ವರದಿಯ ಬಗ್ಗೆ ನಿರ್ಧಾರ.
  • ರಾಯಚೂರು ವಿಶ್ವವಿದ್ಯಾಲಯಕ್ಕೆ ರೂ. 15.00 ಕೋಟಿಗಳ ಅಂದಾಜು ವೆಚ್ಚದಲ್ಲಿ " ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಆಡಳಿತಾತ್ಮಕ ಅನುಮೋದನೆ.
  • ವಿಜಯಪುರ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣವನ್ನು ಎ‌ರ್ ಬಸ್-320 ಮಾದರಿಯ ವಿಮಾನ ನಿಲ್ದಾಣವನ್ನಾಗಿ ಮೇಲರ್ಜೆಗೇರಿಸಲು 347.92 ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ಹಾಗೂ ವಿಮಾನ ನಿಲ್ದಾಣಕ್ಕೆ ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವ ನಿರ್ಧಾರ.
  • ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಬರುವ 18 ವೈದ್ಯಕೀಯ ಸಂಸ್ಥೆಗಳಿಗೆ ಅಗತ್ಯವಿರುವ ಅನಸ್ತೇಷಿಯಾ, ವರ್ಕ್ ಸ್ಪೇಷನ್ `ಮತ್ತು ರೋಗಿಯ ನಿಗಾವಹಿಸುವ (Anaesthesia Workstation Patient Monitor) ಉಪಕರಣಗಳನ್ನು ರೂ. 33.92 ಕೋಟಿಗಳ ವೆಚ್ಚದಲ್ಲಿ ಖರೀದಿಸಲು ಅನುಮೋದನೆ.
  • ಉಡುಪಿ ಜಿಲ್ಲೆ, ಬೈಂದೂರು ತಾಲ್ಲೂಕು ಪಡುವರಿ ಗ್ರಾಮದ ಸುಬ್ಬರಾಡಿ ಎಂಬಲ್ಲಿ ನೀರು ತೆಡ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯ ರೂ. 47.47 ಕೋಟೆಗಳ ಪರಿಷ್ಕೃತ ಅಂದಾಜಿಗೆ ಅಡಳಿತಾತ್ಮಕ ಅನುಮೋದನೆ.
  • ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ನೇಮಕಾತಿ  ನಿಯಮಗಳ ಅನುಮೋದನೆ.
  • ಜಗಜೀವನ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಡಚ್ ಅಸಿಸ್ಟೆಡ್ ಪ್ರಾಜೆಕ್ಟ್ ಮತ್ತು ಇತರೆ ಯೋಜನೆಗಳಡಿ ನಿರ್ಮಿಸಿ - ಪರಿಶಿಷ್ಟ ಜಾತಿಯ ಕುಶಲಕರ್ಮಿಗಳಿಗೆ ಹಂಚಿಕೆ ಮಾಡಿರುವ ಕಾರ್ಯಾಗಾರಗಳನ್ನು ವಸತಿ ಫಲಾನುಭವಿಗಳ ಹೆಸರಿಗೆ ನೋಂದಣಿ ಮಾಡಿಕೊಡುವ ಬಗ್ಗೆ ನಿರ್ಧಾರ.
  • ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣವನ್ನು ರೂ. 12.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ನಿರ್ಧಾರ.
  • ಜಲಸಂಪನ್ಮೂಲ ಅಡಿಯ ಏತ ನೀರಾವರಿ ಯೋಜನೆಗಳ ಕಾರ್ಯಾಚರಣೆ ಮತು ನಿರ್ವಹಣೆಯ “ಕರಡು ನೀತಿ ಹಾಗೂ ಮಾರ್ಗಸೂಚಿಗಳಿಗೆ ಅನುಮೋದನ ನೀಡುವ ಬಗ್ಗೆ ನಿರ್ಧಾರ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News