ಹುಬ್ಬಳಿಯ ಗದಗ ರಸ್ತೆಯಲ್ಲಿರುವ ರೈಲ್ವೆ ಬ್ರಿಡ್ಜ್ ಮೇಲಿನ ಕಳಪೆ ಕಾಮಗಾರಿ ಜನರ ಕಷ್ಟ ಕೆಳೋರೆ ಇಲ್ಲ

ಹುಬ್ಬಳ್ಳಿಯಿಂದ ಗದಗ ರಸ್ತೆಗೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೆತುವೆ ನಿರಂತರವಾಗಿ ಸುರಿದ ಮಳೆಗೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ತಗ್ಗುಗುಂಡಿಗಳದ್ದೇ ಸಾಮ್ರಾಜ್ಯವಾಗಿದೆ. 

Written by - Yashaswini V | Last Updated : Oct 13, 2022, 07:24 AM IST
  • ಮೊದಲೇ ಪ್ರಮುಖ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ.
  • ಅದರಲ್ಲೂ ಬೃಹತ್ ಗಾತ್ರದ ಬಸ್ಸು, ಲಾರಿಗಳು ಸಂಚಾರ ಮಾಡುವುದರಿಂದ ರಸ್ತೆಯಲ್ಲಿ ತಗ್ಗು ಗುಂಡಿಗಳು ರಾರಾಜಿಸುತ್ತಿವೆ.
  • ಮಳೆಯಾದರೆ ಸಾಕು ರಸ್ತೆಯಲ್ಲಿ ತಗ್ಗು ಗುಂಡಿಗಳು ನೀರಿನಿಂದ ತುಂಬಿಕೊಂಡು, ವಾಹನ ಸವಾರರು ಅಪಾಯಕ್ಕೆ ಸಿಲುಕುತ್ತಿದ್ದಾರೆ.
ಹುಬ್ಬಳಿಯ ಗದಗ ರಸ್ತೆಯಲ್ಲಿರುವ ರೈಲ್ವೆ ಬ್ರಿಡ್ಜ್ ಮೇಲಿನ ಕಳಪೆ ಕಾಮಗಾರಿ ಜನರ ಕಷ್ಟ ಕೆಳೋರೆ ಇಲ್ಲ title=
Hubli Gadag Road

ಹುಬ್ಬಳ್ಳಿ: ಒಂದೆಡೆ ತಗ್ಗು ಗುಂಡಿಗಳು, ಮತ್ತೊಂದೆಡೆ ಅದೇ ಗುಂಡಿಗಳ ನಡುವೆ ಹಿಡಿಶಾಪ ಹಾಕುತ್ತಾ ಸಂಚಾರ ಮಾಡುತ್ತಿರುವ ವಾಹನ ಸವಾರರು ಈ ದೃಶ್ಯಗಳು ಕಂಡು ಬಂದಿದ್ದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ.

ಹುಬ್ಬಳ್ಳಿಯಿಂದ ಗದಗ ರಸ್ತೆಗೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೆತುವೆ ನಿರಂತರವಾಗಿ ಸುರಿದ ಮಳೆಗೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ತಗ್ಗುಗುಂಡಿಗಳದ್ದೇ ಸಾಮ್ರಾಜ್ಯವಾಗಿದೆ. ಹೀಗಾಗಿ ಪ್ರಯಾಣಿಕರು ಹದಗೆಟ್ಟಿರುವ ರಸ್ತೆಯಲ್ಲಿಯೇ ನಿತ್ಯ ಹರಸಾಹಸಪಡುತ್ತ ಜೀವ ಕೈಯಲ್ಲಿಡಿದುಕೊಂಡು ಸಂಚರಿಸುವಂತಾಗಿದೆ.

ಇದನ್ನೂ ಓದಿ- ʼನರೇಂದ್ರ ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರುʼ

ಮೊದಲೇ ಪ್ರಮುಖ ರಾಜ್ಯ ಹೆದ್ದಾರಿಯಾಗಿರುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅದರಲ್ಲೂ ಬೃಹತ್ ಗಾತ್ರದ ಬಸ್ಸು, ಲಾರಿಗಳು ಸಂಚಾರ ಮಾಡುವುದರಿಂದ ರಸ್ತೆಯಲ್ಲಿ ತಗ್ಗು ಗುಂಡಿಗಳು ರಾರಾಜಿಸುತ್ತಿವೆ. ಮಳೆಯಾದರೆ ಸಾಕು ರಸ್ತೆಯಲ್ಲಿ ತಗ್ಗು ಗುಂಡಿಗಳು ನೀರಿನಿಂದ ತುಂಬಿಕೊಂಡು, ವಾಹನ ಸವಾರರು ಅಪಾಯಕ್ಕೆ ಸಿಲುಕುತ್ತಿದ್ದಾರೆ. ಈ ಅವ್ಯವಸ್ಥೆ ಸಹಜವಾಗಿಯೇ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು 2017 ರಲ್ಲಿ ಎಸ್.ವಿ.ಕನ್ಸ್ಟ್ರಕ್ಷನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆ ಬರೋಬ್ಬರಿ 19.34 ಕೋಟಿ ವೆಚ್ಚದಲ್ಲಿ 500 ಮೀಟರ್ ಉದ್ದದ ಮೇಲ್ಸೇತುವೆ ನಿರ್ಮಾಣ ಮಾಡಿದೆ. ಆದರೆ ಬ್ರಿಡ್ಜ್ ಮೇಲಿನ ರಸ್ತೆ ಮಾತ್ರ ಇದುವರೆಗೂ ಸರಿಯಾಗುತ್ತಿಲ್ಲ. ಹೀಗಾಗಿ ಬ್ರಿಡ್ಜ್ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪವು ಜನರದ್ದಾಗಿದೆ. 

ಇದನ್ನೂ ಓದಿ- viral video : ಬೆತ್ತಲೆ ಆಸಾಮಿಯ ಪುಂಡಾಟಕ್ಕೆ ಬೆಚ್ಚಿಬಿದ್ದ ಗ್ರಾಮಸ್ಥರು!

ಒಟ್ಟಿನಲ್ಲಿ ಸ್ಮಾರ್ಟ್ ಸಿಟಿ ಹಣೆಪಟ್ಟಿ ಹೊತ್ತಿರುವ ಹುಬ್ಬಳ್ಳಿ-ಧಾರವಾಡ ನಗರಕ್ಕೆ ಸ್ವಾಗತದ ರಸ್ತೆಯಂತಿರುವ ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಮೇಲಿನ ರಸ್ತೆಯನ್ನು ಇನ್ನಾದರೂ ಈ ಭಾಗದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನ ಹರಿಸಿ ಹದಗೆಟ್ಟ ರಸ್ತೆ ಸರಿಪಡಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬುದು ಪ್ರಜ್ಞಾವಂತರ ಒತ್ತಾಸೆಯಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News