ನವಂಬರ್ 8 ಕ್ಕೆ ಪ್ರಕಾಶ್ ಜಾವಡೇಕರ್ ಬೆಂಗಳೂರಿಗೆ ಆಗಮನ

ಬಿಜೆಪಿ ಪರಿವರ್ತನಾ ಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಾದ ಎಡವಟ್ಟು ಸಂಬಂಧ ಬೆಂಗಳೂರಿಗೆ ಆಗಮಿಸಲಿರುವ ಜಾವಡೆಕರ್.

Last Updated : Nov 6, 2017, 10:19 AM IST
ನವಂಬರ್ 8 ಕ್ಕೆ ಪ್ರಕಾಶ್ ಜಾವಡೇಕರ್ ಬೆಂಗಳೂರಿಗೆ ಆಗಮನ title=

ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಾದ ಎಡವಟ್ಟಿಗೆ ಸಂಬಂಧಿಸಿದಂತೆ ಸಭೆ ನಡೆಸಲು ರಾಜ್ಯ ಬಿಜೆಪಿ ಚುನಾವಣೆ ಉಸ್ತುವಾರಿ ಪ್ರಕಾಶ್ ಜಾವಡೇಕರ್ ನ. 8 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ನವಂಬರ್ 8 ರಂದು ಬೆಂಗಳೂರು ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿರುವ ಜಾವಡೇಕರ್, ಉದ್ಘಾಟನೆ ಕಾರ್ಯಕ್ರಮದಲ್ಲಾದ ಎಡವಟ್ಟು ಕುರಿತು ಚರ್ಚೆ ನಡೆಸಲಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಉದ್ಘಾಟನಾ ಕಾರ್ಯಕ್ರಮದಲ್ಲಾದ ಗೊಂದಲ ಕುರಿತು ಸ್ಪಷ್ಟೀಕರಣ ನೀಡುವ ಸಾಧ್ಯತೆ ಇದೆ. 

ಸುದ್ದಿಗೋಷ್ಠಿ ಬಳಿಕ ಮಂಗಳೂರಿಗೆ ತೆರಳಲಿರುವ ಜಾವಡೇಕರ್ ನ. 9 ರಂದು ಮಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಪರಿವರ್ತನಾ ಯಾತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಾದ ಗೊಂದಲ, ಯಾತ್ರೆಯ ಮುಂದಿನ ಕಾರ್ಯಕ್ರಮದ ರೂಪುರೇಷೆ, ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ರಾಜ್ಯ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

Trending News