ಉಚಿತಗಳಿಂದ ರಾಜ್ಯದಲ್ಲಿ ಆರ್ಥಿಕ ಅಸಮತೋಲನ : ಹಿಮಾಚಲ ಪ್ರದೇಶದ ಸ್ಥಿತಿ ಕರ್ನಾಟಕಕ್ಕೂ ಎದುರಾಗಲಿದೆ

ಉಚಿತ ಯೋಜನೆಗಳನ್ನು ಘೋಷಿಸಿದ ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ. ಕಾಂಗ್ರೆಸ್ಸಿನ ಯೋಚನಾ ರಹಿತವಾದಂತಹ ಉಚಿತ ಯೋಜನೆಗಳಿಂದಾಗಿ ಈಗ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಸಮತೋಲನವೇ ಉಂಟಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.

Written by - Krishna N K | Last Updated : Sep 8, 2024, 10:29 PM IST
    • ಉಚಿತ ಯೋಜನೆಗಳಿಂದ ರಾಜ್ಯದಲ್ಲಿ ಆರ್ಥಿಕ ಅಸಮತೋಲನ
    • ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ
    • ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
ಉಚಿತಗಳಿಂದ ರಾಜ್ಯದಲ್ಲಿ ಆರ್ಥಿಕ ಅಸಮತೋಲನ : ಹಿಮಾಚಲ ಪ್ರದೇಶದ ಸ್ಥಿತಿ ಕರ್ನಾಟಕಕ್ಕೂ ಎದುರಾಗಲಿದೆ title=

ಹುಬ್ಬಳ್ಳಿ : ಕಾಂಗ್ರೆಸ್ಸಿನ ಯೋಚನಾ ರಹಿತವಾದಂತಹ ಉಚಿತ ಯೋಜನೆಗಳಿಂದಾಗಿ ಈಗ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಸಮತೋಲನವೇ ಉಂಟಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಉಚಿತ ಯೋಜನೆಗಳನ್ನು ಘೋಷಿಸಿದ ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಲ್ಲದೆ, ಚುನಾವಣೆ ವೇಳೆ ಮತ ಸೆಳೆಯಲು ಅನ್ ಪ್ಲಾನ್ಡ್ ಆಗಿ ಉಚಿತ ಯೋಜನೆ ಘೋಷಿಸಿದ ಕಾಂಗ್ರೆಸ್ ಈಗ ರಾಜ್ಯವನ್ನು ಅಧೋಗತಿಗೆ ತರುತ್ತಿದೆ. ಅಭಿವೃದ್ಧಿಗಿಂತ ಹೆಚ್ಚು ರಾಜಕಾರಣದಲ್ಲೇ ತೊಡಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ:"ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆ ನೀಡಲು ವಿದ್ಯಾರ್ಥಿಗಳು ಮುಂದಾಗಬೇಕು: ಸಚಿವ ಡಾ.ಎಂ.ಸಿ.ಸುಧಾಕರ

ಮತ್ತೊಂದು ಮಳೆಗಾಲ ಮುಗಿಯುತ್ತಾ ಬಂದರೂ ಬರ ಪರಿಹಾರ ನೀಡಿಲ್ಲ: ರಾಜ್ಯದಲ್ಲಿ ಇನ್ನೂ ಶೇ. 25ರಷ್ಟು ರೈತರಿಗೆ ಬರ ಪರಿಹಾರ ನೀಡಿಲ್ಲ. ಮತ್ತೊಂದು ಮಳೆಗಾಲ ಮುಗಿಯುತ್ತಾ ಬಂದರೂ ಬರ ಪರಿಹಾರದ ಹಣ ರೈತರ ಕೈ ಸೇರಿಲ್ಲ. ಇದು ರೈತ ಪರ ಸರ್ಕಾರವೇ? ಎಂದು ಪ್ರಶ್ನಿಸಿದರು. ಹಾಗು ಅಭಿವೃದ್ಧಿಗೆ ನಯಾಪೈಸೆ ಕೊಟ್ಟಿಲ್ಲ: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್ ಶಾಸಕರು, ಅಧಿಕಾರಿಗಳು ನಮ್ಮನ್ನು  ಕೇಳ್ತಿದ್ದಾರೆ: ರಾಜ್ಯ ಕಾಂಗ್ರೆಸ್ ಸರ್ಕಾರ ರಸ್ತೆ ಅಭಿವೃದ್ಧಿಗೂ ಹಣ ನೀಡಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕರು ಮತ್ತು ಅಧಿಕಾರಿಗಳು ಕೇಂದ್ರದಲ್ಲಿ ಯಾವುದಾದರೂ ಯೋಜನೆಯಲ್ಲಿ ಅನುದಾನ ಹಾಕಿಸಿ ಕೊಡಿ ಎಂದು ತಮ್ಮನ್ನು ಕೇಳುತ್ತಿದ್ದಾರೆ ಎಂದು ಜೋಶಿ ಹೇಳಿದರು.

ಇದನ್ನೂ ಓದಿ:ನಟ ದರ್ಶನ್‌ನನ್ನ ಆದರ್ಶವಾಗಿ ತೆಗೆಕೊಂಡು ಮತ್ತೊಬ್ಬಳ ಜೊತೆ ಸಂಗ..! ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ರಸ್ತೆ ಅಭಿವಧ್ದಿಗೆ ಹಣ ನೀಡಿ: ಬಿಜೆಪಿ ಸರ್ಕಾರದಲ್ಲಿ ಆದ ಕಾಂಕ್ರಿಟ್ ರಸ್ತೆಗಳನ್ನು ಬಿಟ್ಟರೆ ಬಹುತೇಕ ರಸ್ತೆಗಳು ಇಂದು ದುಸ್ಥಿತಿ ತಲುಪಿವೆ. ರಾಜ್ಯ ಸರ್ಕಾರ ಮೊದಲು ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ ಎಂದು ಜೋಶಿ ಆಗ್ರಹಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News