ಗ್ಯಾರೆಂಟಿಗಳಿಂದ ಅಭಿವೃದ್ಧಿ ಕುಂಠಿತ, ರಾಯರೆಡ್ಡಿ ಸತ್ಯ ಹೇಳುವ ಧೈರ್ಯ ತೋರಿದ್ದಾರೆ : ಕೇಂದ್ರ ಸಚಿವ ಜೋಶಿ 

ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಒಬ್ಬೊಬ್ಬರೇ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಬಸವರಾಜ ರಾಯರೆಡ್ಡಿ ಅವರು ಬಹಿರಂಗವಾಗಿ ಸತ್ಯ ಹೇಳುವ ಧೈರ್ಯ ತೋರಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

Written by - Prashobh Devanahalli | Edited by - Krishna N K | Last Updated : Jul 12, 2024, 10:24 PM IST
    • ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತ
    • ಬಸವರಾಜ ರಾಯರೆಡ್ಡಿ ಬಹಿರಂಗವಾಗಿ ಸತ್ಯ ಹೇಳುವ ಧೈರ್ಯ ತೋರಿದ್ದಾರೆ
    • ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿಕೆ
ಗ್ಯಾರೆಂಟಿಗಳಿಂದ ಅಭಿವೃದ್ಧಿ ಕುಂಠಿತ, ರಾಯರೆಡ್ಡಿ ಸತ್ಯ ಹೇಳುವ ಧೈರ್ಯ ತೋರಿದ್ದಾರೆ : ಕೇಂದ್ರ ಸಚಿವ ಜೋಶಿ  title=
basavaraj rayareddy

ಬೆಂಗಳೂರು: ರಾಜ್ಯದಲ್ಲಿ ಗ್ಯಾರೆಂಟಿಗಳಿಂದಾಗಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಈ ಬಗ್ಗೆ ಆಡಳಿತಾರೂಢ ಕಾಂಗ್ರೆಸ್ ಶಾಸಕರೇ ಅತೃಪ್ತಿ ಹೊರಹಾಕುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಗ್ಯಾರೆಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಒಬ್ಬೊಬ್ಬರೇ ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ ಎಂದರು. ಗ್ಯಾರೆಂಟಿ ಯೋಜನೆಗಳ ವೈಫಲ್ಯ ಮತ್ತು ಅಭಿವೃದ್ಧಿ ಕುಂಠಿತವಾದ ಬಗ್ಗೆ ಕಾಂಗ್ರೆಸ್ ಪಕ್ಷದವರೇ ಆದ ಬಸವರಾಜ ರಾಯರೆಡ್ಡಿ ಅವರು ಬಹಿರಂಗವಾಗಿ ಸತ್ಯ ಹೇಳುವ ಧೈರ್ಯ ತೋರಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:ವಾಲ್ಮೀಕಿ ನಿಗಮ ಹಗರಣದ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹ

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಎಲ್ಲಾ ಹಣ ವಿನಿಯೋಗ ಮಾಡುತ್ತಿದೆ. ಆದಾಗ್ಯೂ ಇನ್ನೂ ಶೇ.50ರಷ್ಟು ಅರ್ಹರಿಗೆ ಗ್ಯಾರೆಂಟಿ ಯೋಜನೆ ತಲುಪಿಲ್ಲ. ಇತ್ತ ಗ್ಯಾರೆಂಟಿಯೂ ಅಪೂರ್ಣ,  ಅತ್ತ ಅಭಿವೃದ್ಧಿಯು ಇಲ್ಲದಂಥ ಸ್ಥಿತಿ ಎದುರಾಗಿದೆ ಎಂದರು.

ರಸ್ತೆ, ಕಟ್ಟಡಗಳ ನಿರ್ಮಾಣ, ಆಸ್ಪತ್ರೆ, ಆರೋಗ್ಯ ಸೇವೆ, ಸಮರ್ಪಕ ಬೆಳೆ ಪರಿಹಾರ, ಹೈನುಗಾರರಿಗೆ ಪ್ರೋತ್ಸಾಹ ಧನ, ವಿವಿಧ ಯೋಜನೆಗಳ ಸಬ್ಸಿಡಿ, ಸಿಬ್ಬಂದಿ ನೇಮಕಾತಿ ಹೀಗೆ ಯಾವುದೊಂದು ಕಾರ್ಯ  ಚಟುವಟಿಕೆಗಳು ಸಕ್ರಿಯವಾಗಿಲ್ಲ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು.

ಇದನ್ನೂ ಓದಿ:ಸೂಪರ್ ಮಾರ್ಕೆಟ್‌ ಗಳಲ್ಲಿ ಮದ್ಯ ಮಾರಾಟಕ್ಕೆ ಪ್ರಸ್ತಾವನೆಗೆ ಸಿಎಂ ಬ್ರೇಕ್

28 ರೂಪಾಯಿಗೆ ಅಕ್ಕಿ: ದೇಶದ ಯಾವುದೇ ರಾಜ್ಯದಲ್ಲಿ ಆಹಾರ ಧಾನ್ಯ ಕೊರತೆ ಆಗದಂತೆ ಕೇಂದ್ರ ಸರ್ಕಾರ ಜಾಗ್ರತೆ ವಹಿಸಿದೆ. ಬಡವರಿಗಾಗಿ 28 ರೂ. ಬೆಲೆಯಲ್ಲಿ ಅಕ್ಕಿ ವಿತರಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.

ಅಕ್ಕಿ ಪೂರೈಕೆಯಲ್ಲಿ ರಾಜಕೀಯವಿಲ್ಲ: ರಾಜ್ಯಗಳಿಗೆ ಅಕ್ಕಿ ಪೂರೈಕೆಯಲ್ಲಿ ಯಾವುದೇ ರಾಜಕೀಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಡವರ ಹಸಿವು ನೀಗಿಸುವಲ್ಲಿ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಲ್ಹಾದ ಜೋಶಿ ಹೇಳಿದರು. ಅಲ್ಲದೆ, ಕೇಂದ್ರ ಸರ್ಕಾರ ಕಡು ಬಡವರಿಗೆ 5 ಕೆಜಿ ಅಕ್ಕಿ ವಿತರಿಸುತ್ತಿದೆ. ಹತ್ತು ರಾಜ್ಯಗಳಿಗೆ ಬೇಡಿಕೆಯಂತೆ ಅಕ್ಕಿ ಮತ್ತು ಇತರೆ ಆಹಾರ ಧಾನ್ಯ ವಿತರಿಸಲಾಗುತ್ತಿದೆ. 34 ರು. ಇದ್ದ ಬೆಲೆಯನ್ನು 28 ರೂಪಾಯಿಗೆ ಇಳಿಸಲಾಗಿದೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News