"ಚೀನಾ ದೇಶದ ಅತಿಕ್ರಮಣದ ಬಗ್ಗೆ ಪ್ರಧಾನಿ ಮೋದಿ ಚಕಾರವೆತ್ತುತ್ತಿಲ್ಲ"- ಸಿಎಂ ಸಿದ್ದರಾಮಯ್ಯ ಕಿಡಿ 

ನೆರೆಯ ರಾಷ್ಟ್ರವಾದ ಚೀನಾ ಭಾರತದ ಗಡಿಭಾಗಗಳನ್ನು ಅತಿಕ್ರಮಿಸಿ ಭಾರತದ ನೆಲದಲ್ಲಿ ಸೇನಾ ನೆಲೆಗಳು, ಬಂಕರ್‌ಗಳು, ಹಳ್ಳಿಗಳನ್ನು ನಿರ್ಮಿಸಿದ್ದರೂ ಸಹ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಕಾರವೆತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Written by - Manjunath N | Last Updated : Apr 5, 2024, 10:04 PM IST
  • ಅರುಣಾಚಲ ಪ್ರದೇಶದಲ್ಲಿಯಂತೂ ಚೀನಾ ಭಾರತದ ನೆಲದಲ್ಲಿ ಹೆದ್ದಾರಿಗಳನ್ನು ಮಾಡಿ, ಹಳ್ಳಿಗಳನ್ನು ನಿರ್ಮಿಸಿದೆ.
  • ಉಪಗ್ರಹ ಚಿತ್ರಗಳು ಈ ಎಲ್ಲದಕ್ಕೂ ದಾಖಲೆ ನೀಡುತ್ತಿವೆ. ಆದರೆ, ಕಾಗದದ ಹುಲಿ ಮೋದಿ ಮಾತ್ರ ಕಣ್ಣುಮುಚ್ಚಿ ಕೂತಿದ್ದಾರೆ.
  • ಮೋದಿ ಆಡಳಿತದಲ್ಲಿ ಭಾರತದ ಸಾರ್ವಭೌಮತೆ, ಅಖಂಡತೆಗೆ ಇನ್ನಿಲ್ಲದ ಧಕ್ಕೆ ಒದಗಿದೆ.
"ಚೀನಾ ದೇಶದ ಅತಿಕ್ರಮಣದ ಬಗ್ಗೆ ಪ್ರಧಾನಿ ಮೋದಿ ಚಕಾರವೆತ್ತುತ್ತಿಲ್ಲ"- ಸಿಎಂ ಸಿದ್ದರಾಮಯ್ಯ ಕಿಡಿ  title=
file photo

ಬೆಂಗಳೂರು: ನೆರೆಯ ರಾಷ್ಟ್ರವಾದ ಚೀನಾ ಭಾರತದ ಗಡಿಭಾಗಗಳನ್ನು ಅತಿಕ್ರಮಿಸಿ ಭಾರತದ ನೆಲದಲ್ಲಿ ಸೇನಾ ನೆಲೆಗಳು, ಬಂಕರ್‌ಗಳು, ಹಳ್ಳಿಗಳನ್ನು ನಿರ್ಮಿಸಿದ್ದರೂ ಸಹ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಕಾರವೆತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Uttarakanda : ಏ.15 ರಿಂದ ಉತ್ತರಕಾಂಡ ಸಿನಿಮಾ ಚಿತ್ರೀಕರಣದ ಆರಂಭ

ತಮ್ಮನ್ನು ವಿಶ್ವಗುರು, ಜಾಗತಿಕ ನೇತಾರ ಎಂದು ಬಿಂಬಿಸಿಕೊಳ್ಳುವ ಮೋದಿಯವರು ಲಡಾಖ್‌ನಲ್ಲಿ ಸುಮಾರು ನಾಲ್ಕು ಸಾವಿರ ಚ.ಕಿಮೀ ಪ್ರದೇಶವನ್ನು ಚೀನಾ ಆತಿಕ್ರಮಿಸಿ ಕೂತಿದ್ದರೂ ಚೀನಾದ ಪಡೆಗಳನ್ನು ಹಿಂದೆ ಕಳುಹಿಸುವ ಧೈರ್ಯ ತೋರಿಲ್ಲ. ಮೋದಿಯವರ ಆಘಾತಕಾರಿ ಮೌನದಿಂದಾಗಿ ನಮ್ಮ ಸೇನಾ ಪಡೆಗಳು ಗಸ್ತು ತಿರುಗುತ್ತಿದ್ದ ಅನೇಕ ಪ್ರದೇಶಗಳನ್ನು, ಗಸ್ತುಠಾಣೆಗಳಿದ್ದ ಆಯಕಟ್ಟಿನ ಜಾಗಗಳನ್ನು ಚೀನಾಗೆ ಬಿಟ್ಟುಕೊಡಲಾಗಿದೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ- ರಾಹುಲ್ ಗಾಂಧಿಗೆ ನಿಲ್ಲಾಕ್ ಒಂದ್ ಜಾಗ ಇಲ್ಲ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಲೇವಡಿ

ಅರುಣಾಚಲ ಪ್ರದೇಶದಲ್ಲಿಯಂತೂ ಚೀನಾ ಭಾರತದ ನೆಲದಲ್ಲಿ ಹೆದ್ದಾರಿಗಳನ್ನು ಮಾಡಿ, ಹಳ್ಳಿಗಳನ್ನು ನಿರ್ಮಿಸಿದೆ. ಉಪಗ್ರಹ ಚಿತ್ರಗಳು ಈ ಎಲ್ಲದಕ್ಕೂ ದಾಖಲೆ ನೀಡುತ್ತಿವೆ. ಆದರೆ, ಕಾಗದದ ಹುಲಿ ಮೋದಿ ಮಾತ್ರ ಕಣ್ಣುಮುಚ್ಚಿ ಕೂತಿದ್ದಾರೆ. ಮೋದಿ ಆಡಳಿತದಲ್ಲಿ ಭಾರತದ ಸಾರ್ವಭೌಮತೆ, ಅಖಂಡತೆಗೆ ಇನ್ನಿಲ್ಲದ ಧಕ್ಕೆ ಒದಗಿದೆ. ಬಡಾಯಿ ವೀರ ಮೋದಿಯವರ ಹೇಡಿತನದಿಂದಾಗಿ ಭಾರತದ ವೀರ ಸೈನಿಕರು ಇಂದು ಎದುರಾಳಿಗಳ ಮುಂದೆ ತಮ್ಮದೇ ನೆಲದಲ್ಲಿ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಚೀನಾ ಅತಿಕ್ರಮಣ ವಿಚಾರದಲ್ಲಿ ತಮ್ಮ ವೈಫಲ್ಯತೆ, ಹುಳುಕುಗಳನ್ನು ಮುಚ್ಚಿಟ್ಟುಕೊಳ್ಳುವ ಸಲುವಾಗಿ ಹೇಡಿ ಮೋದಿ ದೇಶದ ಜನತೆಯಿಂದ ಸತ್ಯವನ್ನು ಮುಚ್ಚಿಟ್ಟು ದ್ರೋಹ ಎಸಗಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News