ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಸಚಿವರು, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ನನ್ನ ಬಗ್ಗೆ ಇಂತಹ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಂಜಯ ಪಾಟೀಲ ಅವರು, ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಇರುವ ಗೌರವ ಎಂತಹುದು ಎನ್ನುವುದನ್ನು ತೋರಿಸಿದ್ದಾರೆ ಎಂದಿದ್ದಾರೆ.

Written by - Prashobh Devanahalli | Last Updated : Apr 13, 2024, 08:12 PM IST
    • ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆ
    • ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ
    • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸಂಜಯ ಪಾಟೀಲ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್  title=
File Photo

ಬೆಳಗಾವಿ: ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಬಹಿರಂಗ ಸಭೆಯಲ್ಲಿ ಮಾಜಿ ಶಾಸಕ ಸಂಜಯ ಪಾಟೀಲ ನೀಡಿದ ನೀಚತನದ ಹೇಳಿಕೆ ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Video: ಆರು ಎಸೆತಗಳಲ್ಲಿ 6,6,6,6,6,6. ಕೇವಲ 21 ಎಸೆತಗಳಲ್ಲಿ 64 ರನ್, Watch Video

ಈ ಕುರಿತು ವೀಡಿಯೋ ಬಿಡುಗಡೆ ಮಾಡಿರುವ ಸಚಿವರು, ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾದ ನನ್ನ ಬಗ್ಗೆ ಇಂತಹ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಸಂಜಯ ಪಾಟೀಲ ಅವರು, ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಇರುವ ಗೌರವ ಎಂತಹುದು ಎನ್ನುವುದನ್ನು ತೋರಿಸಿದ್ದಾರೆ ಎಂದಿದ್ದಾರೆ.

ಬಿಜೆಪಿಯವರು ಕೇವಲ ಬಾಯಿ ಮಾತಿನಲ್ಲಿ ರಾಮ ಎಂದರೆ ಸಾಲುವುದಿಲ್ಲ, ಬೇಟಿ ಬಚಾವೋ, ಬೇಟಿ ಪಡಾವೋ ಎಂದರೆ ಸಾಲುವುದಿಲ್ಲ. ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸುವುದು ಹಿಂದೂ ಸಂಸ್ಕೃತಿ. ಮಾತನಾಡುವಾಗ ಹಿಂದೂ ಸಂಸ್ಕೃತಿ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಸಂಜಯ ಪಾಟೀಲ ಇಂತಹ ಹೇಳಿಕೆ ಮೂಲಕ ಈ ದೇಶದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಇಂತಹ ನೀಚತನದ ಹೇಳಿಕೆ ಅತ್ಯಂತ ಖಂಡನೀಯವಾದದ್ದು, ಕರ್ನಾಟಕದ ಎಲ್ಲ ಮಹಿಳೆಯರು ಇಂತಹ ಹಿಡನ್ ಅಜೆಂಡಾ ಇಟ್ಟು ಕೊಂಡಿರುವ ಬಿಜೆಪಿಯನ್ನು ತಿರಸ್ಕರಿಸಬೇಕು, ಖಂಡಿಸಬೇಕು ಎಂದು ಹೆಬ್ಬಾಳಕರ್ ಕರೆ ನೀಡಿದ್ದಾರೆ.

ಇದನ್ನೂ ಓದಿ:230 ಕ್ಷೇತ್ರಗಳಲ್ಲಿ ಕಣಕ್ಕಿಳಿದ ಇಂಡಿ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಪ್ರಹ್ಲಾದ ಜೋಶಿ ಪ್ರಶ್ನೆ

ಸಂಜಯ ಪಾಟೀಲ ಅವರು ಈ ರೀತಿಯ ನೀಚ ಹೇಳಿಕೆ ನೀಡುವುದು, ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಹೊಸದೇನಲ್ಲ. ಆದರೆ, ಈ ಹೇಳಿಕೆ ಕೊಡುವ ಸಂದರ್ಭದಲ್ಲಿ  ವೇದಿಕೆಯ ಮೇಲೆ ಮಾಜಿ ಮುಖ್ಯಮಂತ್ರಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್, ಸಂಸದೆ ಮಂಗಲಾ ಅಂಗಡಿ ಮತ್ತಿತರರೂ ಇದ್ದರು. ಆದರೆ ಅವರೆಲ್ಲ ನಗುವ ಮೂಲಕ ಸಂಜಯ ಪಾಟೀಲ ಹೇಳಿಕೆಗೆ ಸಮ್ಮತಿ ಸೂಚಿಸಿದರೇ ವಿನಃ ಖಂಡಿಸಲಿಲ್ಲ. ವೇದಿಕೆಯಲ್ಲೇ ಯಾರಾದರೊಬ್ಬರು ಇದನ್ನು ಖಂಡಿಸಿದ್ದರೆ ಬಿಜೆಪಿಗೆ ಮಹಿಳೆಯರ ಬಗ್ಗೆ ಗೌರವ ಇದೆ ಎಂದು ಭಾವಿಸಬಹುದಿತ್ತು. ಆದರೆ ಹಾಗೆ ಮಾಡದೆ ಇರುವುದರಿಂದ ಬಿಜೆಪಿಯ ಮುಖವಾಡ ಕಳಚಿ ಬಿದ್ದಿದೆ. ಇಂತಹ ಹಿಡನ್ ಅಜೆಂಡಾ ಇಟ್ಟುಕೊಂಡಿರುವ ಬಿಜೆಪಿಯನ್ನು ಎಲ್ಲರೂ ತಿರಸ್ಕರಿಸೋಣ ಎಂದು ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News